AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಲ್ಲಿಂದಲೇ ವಿಚ್ಛೇದನ ಪ್ರಕ್ರಿಯೆ ಶುರು ಮಾಡಬೇಕಾಗುತ್ತದೆ’; ಎಚ್ಚರಿಕೆ ಕೊಟ್ಟ ಅಂಕಿತಾ ಲೋಖಂಡೆ

ಪ್ರತಿದಿನ ಅಂಕಿತಾ-ವಿಕ್ಕಿ ಯಾವುದಾದರೂ ಕಾರಣಕ್ಕೆ ಜಗಳವಾಡುತ್ತಾ ಇರುತ್ತಾರೆ. ಈ ಶೋನಲ್ಲಿ ಏನಾಗಬಾರದು ಅಂದುಕೊಡಿದ್ದರೋ ಅದೇ ಆಗುವ ಸೂಚನೆ ಸಿಕ್ಕಿದೆ. ಅಂಕಿತಾ ನೇರವಾಗಿ ವಿಕ್ಕಿಗೆ ವಿಚ್ಛೇದನದ ಬೆದರಿಕೆ ಹಾಕುತ್ತಿದ್ದಾರೆ.

‘ಇಲ್ಲಿಂದಲೇ ವಿಚ್ಛೇದನ ಪ್ರಕ್ರಿಯೆ ಶುರು ಮಾಡಬೇಕಾಗುತ್ತದೆ’; ಎಚ್ಚರಿಕೆ ಕೊಟ್ಟ ಅಂಕಿತಾ ಲೋಖಂಡೆ
ಅಂಕಿತಾ-ವಿಕ್ಕಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 01, 2024 | 2:29 PM

Share

ಸಲ್ಮಾನ್ ಖಾನ್ (Salman Khan) ನಡೆಸಿಕೊಡುತ್ತಿರುವ ‘ಬಿಗ್ ಬಾಸ್ ಹಿಂದಿ ಸೀಸನ್ 17′ ಶೋ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದೆ. ಈ ಸೀಸನ್ ಮೊದಲ ಸಂಚಿಕೆಯಿಂದಲೇ ಪ್ರೇಕ್ಷಕರನ್ನು ರಂಜಿಸುತ್ತಿದೆ. ಸಾಮಾನ್ಯ ಸ್ಪರ್ಧಿಗಳ ಜೊತೆಗೆ, ಎರಡು ವಿವಾಹಿತ ಜೋಡಿಗಳನ್ನು ಬಿಗ್ ಬಾಸ್ ಮನೆಗೆ ಕರೆತರಲಾಗಿದೆ. ಪತಿ-ಪತ್ನಿಯರು ಸಾಮಾನ್ಯ ಸ್ಪರ್ಧಿಗಳಿಗಿಂತ ಹೆಚ್ಚು ಜಗಳ ಮಾಡಿಕೊಳ್ಳುತ್ತಿದ್ದಾರೆ. ಇಷ್ಟೇ ಅಲ್ಲದೆ ಬಿಗ್ ಬಾಸ್​​ನಲ್ಲಿ ಗಂಡ-ಹೆಂಡತಿ ಸಂಬಂಧದಲ್ಲಿ ಬಿರುಕು ಮೂಡುವ ಸೂಚನೆ ಸಿಕ್ಕಿದೆ. ‘ಪವಿತ್ರ ರಿಷ್ತ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದ ನಟಿ ಅಂಕಿತಾ ಲೋಖಂಡೆ ಮತ್ತು ಅವರ ಪತಿ ವಿಕ್ಕಿ ಜೈನ್ ಜೋಡಿ ಗಮನ ಸೆಳೆಯುತ್ತಿದೆ. ಇವರ ವಿಚ್ಛೇದನದ ವಿಚಾರ ಮತ್ತೆ ಚರ್ಚೆಯಲ್ಲಿದೆ. ಮತ್ತೆ ಅಂಕಿತಾ ಅವರು ವಿಚ್ಛೇದನ ನೀಡುವ ಬಗ್ಗೆ ಪತಿಗೆ ಬೆದರಿಕೆ ಹಾಕಿದ್ದಾರೆ.

ಪ್ರತಿದಿನ ಅಂಕಿತಾ-ವಿಕ್ಕಿ ಯಾವುದಾದರೂ ಕಾರಣಕ್ಕೆ ಜಗಳವಾಡುತ್ತಾ ಇರುತ್ತಾರೆ. ಈ ಶೋನಲ್ಲಿ ಏನಾಗಬಾರದು ಅಂದುಕೊಡಿದ್ದರೋ ಅದೇ ಆಗುವ ಸೂಚನೆ ಸಿಕ್ಕಿದೆ. ಅಂಕಿತಾ ನೇರವಾಗಿ ವಿಕ್ಕಿಗೆ ವಿಚ್ಛೇದನದ ಬೆದರಿಕೆ ಹಾಕುತ್ತಿದ್ದಾರೆ. ಇವರು ವಿಚ್ಛೇದನ ಪಡೆಯದಿರಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ‘ಬಿಗ್ ಬಾಸ್’ ಮನೆಯಲ್ಲಿ ಕೋರ್ಟ್ ಸೆಟ್ ಹಾಕಲಾಗಿತ್ತು. ಇದರಲ್ಲಿ ಮುನಾವರ್ ಫಾರೂಕಿ ಮತ್ತು ಅಂಕಿತಾ ಲೋಖಂಡೆ ಇಬ್ಬರನ್ನೂ ವಕೀಲರನ್ನಾಗಿ ನೇಮಿಸಲಾಗಿತ್ತು. ವಿಕ್ಕಿ ಜೈನ್ ಅವರ ವಿರುದ್ಧ ಇವರು ಹರಿಹಾಯ್ದರು.

ಈ ಟಾಸ್ಕ್ ಪ್ರಕಾರ ಸ್ಪರ್ಧಿಗಳ ವಿಚಾರಣೆ ಮಾಡಬೇಕು. ಟಾಸ್ಕ್ ಪ್ರಾರಂಭವಾಗುವ ಮೊದಲು ಶುಲ್ಕದ ಬಗ್ಗೆ ಚರ್ಚಿಸಬೇಕು ಎಂದು ವಿಕ್ಕಿಗೆ ಬಿಗ್ ಬಾಸ್​​ ಹೇಳಿದರು. ಮುನಾವರ್ ಜೊತೆ ಶುಲ್ಕದ ಬಗ್ಗೆ ಚರ್ಚಿಸಲು ಅಂಕಿತಾಗೆ ಬಿಗ್ ಬಾಸ್ ಕೂಡ ಹೇಳಿದ್ದರು. ವಿಕ್ಕಿ ಅವರು ಅಂಕಿತಾ ಮೇಲೆ ಕಿಡಿಕಾರಿದರು. ಶುಲ್ಕದ ಬಗ್ಗೆ ಚರ್ಚಿಸಲು ಹಿಂದೇಟು ಹಾಕಿದ್ದಲ್ಲದೇ ಕಿಡಿಕಾರಿದ್ದಾರೆ.

ಇಷ್ಟೆಲ್ಲ ಆದ ನಂತರ ಅಂಕಿತಾಗೆ ವಿಕ್ಕಿ ಶುಲ್ಕ ವಂಚನೆ ಮಾಡುತ್ತಿರುವುದು ನಿರಂತರವಾಗಿ ಕಂಡು ಬಂದಿದೆ. ಕೊನೆಗೆ ಅಂಕಿತಾ ವಿಕ್ಕಿಯ ವರ್ತನೆಯಿಂದ ಬೇಸರಗೊಂಡು. ‘ನನ್ನೊಂದಿಗೆ ಇದೆಲ್ಲ ಮಾಡಬೇಡ. ಇಲ್ಲದಿದ್ದರೆ, ನಮ್ಮ ವಿಚ್ಛೇದನ ಪ್ರಕರಣದ ಪ್ರಕ್ರಿಯೆ ಇಲ್ಲಿಂದ ಪ್ರಾರಂಭವಾಗುತ್ತದೆ’ ಎಂದಿದ್ದಾರೆ ಅಂಕಿತಾ.

ಅಂಕಿತಾ ಅವರ ಬಾಯಿಂದ ಈ ಮಾತುಗಳನ್ನು ಕೇಳಿದ ನಂತರ ಮನೆಯಲ್ಲಿದ್ದ ಇತರ ಸ್ಪರ್ಧಿಗಳು ಶಾಕ್ ಆಗಿದ್ದಾರೆ. ಆಗ ಮುನಾವರ್, ‘ನೀವು ತುಂಬಾ ಮಾತನಾಡುತ್ತಿದ್ದೀರಿ’ ಎಂದರು. ನ್ಯಾಯಾಲಯದ ಕಾರ್ಯದ ಸಮಯದಲ್ಲಿ, ವಿಕ್ಕಿ ಜೈನ್ ನಿರಂತರವಾಗಿ ತನ್ನ ಅಭಿಪ್ರಾಯವನ್ನು ಹೇಳಲು ಮತ್ತು ಆಯೇಷಾ ಖಾನ್ ಅವರನ್ನು ಅಣಕಿಸಲು ಪ್ರಯತ್ನಿಸುತ್ತಿದ್ದರು. ಮುನಾವರ್ ವಿರುದ್ಧ ಹರಿಹಾಯ್ದಿದ್ದರು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ಪತಿ-ಪತ್ನಿ ಸಂಬಂಧ; ಅಂಕಿತಾ ಕೆನ್ನೆಗೆ ಹೊಡೆಯಲು ಹೋದ ವಿಕ್ಕಿ

ಕೆಲವು ದಿನಗಳ ಹಿಂದೆ ಅಂಕಿತಾ ಮತ್ತು ವಿಕ್ಕಿ ವೀಡಿಯೋ ಒಂದು ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಅಂಕಿತಾ ಮೇಲೆ ಕೈ ಎತ್ತಲು ವಿಕ್ಕಿ ಮುಂದಾಗಿದ್ದರು. ಈ ವಿಡಿಯೋ ಬಗ್ಗೆ ಅನೇಕರು ಟೀಕೆ ಮಾಡಿದ್ದರು. ಇದಲ್ಲದೇ ವಿಚ್ಛೇದನ ನೀಡುವ ಬಗ್ಗೆಯೂ ಅಂಕಿತಾ ಹಾಗೂ ವಿಕ್ಕಿ ಚರ್ಚೆ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:22 pm, Mon, 1 January 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು