AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಕಿತಾ ಜಯರಾಂ, ಆದಿತ್ಯ ನಟನೆಯ ಭಿನ್ನ ಪ್ರೇಮಕಥೆ ‘ಕಾಗದ’ ಜುಲೈ 5ಕ್ಕೆ ಬಿಡುಗಡೆ

ಬಾಲನಟಿಯಾಗಿ ಜನರಿಗೆ ಪರಿಚಯ ಆಗಿರುವ ಅಂಕಿತಾ ಜಯರಾಂ ಅವರು ‘ಕಾಗದ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಹೊಸ ನಟ ಆದಿತ್ಯ ಅವರು ಈ ಸಿನಿಮಾದಲ್ಲಿ ಹೀರೋ ಆಗಿದ್ದಾರೆ. ರಂಜಿತ್​ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಅರುಣ್​ ಕುಮಾರ್​ ಅವರು ‘ಕಾಗದ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಚಿತ್ರದ ಬಗ್ಗೆ ಮಾಹಿತಿ ಇಲ್ಲಿದೆ..

ಅಂಕಿತಾ ಜಯರಾಂ, ಆದಿತ್ಯ ನಟನೆಯ ಭಿನ್ನ ಪ್ರೇಮಕಥೆ ‘ಕಾಗದ’ ಜುಲೈ 5ಕ್ಕೆ ಬಿಡುಗಡೆ
ಅಂಕಿತಾ ಜಯರಾಂ, ಆದಿತ್ಯ
ಮದನ್​ ಕುಮಾರ್​
|

Updated on: Jul 01, 2024 | 10:36 PM

Share

ಕನ್ನಡ ಚಿತ್ರಂಗದಲ್ಲಿ ಪ್ರತಿ ವಾರ ಹೊಸ ಹೊಸ ಪ್ರಯತ್ನಗಳು ಪ್ರೇಕ್ಷಕರ ಮುಂದೆ ಬರುತ್ತವೆ. ಈ ವಾರ (ಜುಲೈ 5) ‘ಕಾಗದ’ ಸಿನಿಮಾ ಬಿಡುಗಡೆ ಆಗುತ್ತಿದೆ. ಅರುಣ್ ಕುಮಾರ್ ಆಂಜನೇಯ ಅವರು ಈ ಸಿನಿಮಾವನ್ನು ನಿರ್ಮಿಸಿದಾರೆ. ರಂಜಿತ್ ಅವರು ನಿರ್ದೇಶನ ಮಾಡಿದ್ದಾರೆ. ಮೊಬೈಲ್ ಬರುವುದಕ್ಕೂ ಮುನ್ನ ಜನರು ಕಾಗದ ಬರೆಯುತ್ತಿದ್ದರು. ಆ ಕಾಲದ ಪ್ರೇಮಕಥೆ ‘ಕಾಗದ’ ಸಿನಿಮಾದಲ್ಲಿದೆ. 2005ರ ಸಂದರ್ಭದ ಕಹಾನಿಯೂ ಈ ಸಿನಿಮಾದಲ್ಲಿದೆ. ನಿರ್ಮಾಪಕರ ಪುತ್ರ, ಹೊಸ ನಟ ಆದಿತ್ಯ ಅವರು ಈ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಬಾಲನಟಿಯಾಗಿ ಗುರುತಿಸಿಕೊಂಡ ಅಂಕಿತಾ ಜಯರಾಂ ಅವರು ‘ಕಾಗದ’ ಸಿನಿಮಾಗೆ ನಾಯಕಿ ಆಗಿದ್ದಾರೆ.

ಎರಡು ಹಳ್ಳಿಗಳ ನಡುವಿನ ವೈಷಮ್ಯದ ಮಧ್ಯೆಯೂ ಅರಳಿದ ಪ್ರೇಮಕಥೆ ‘ಕಾಗದ’ ಸಿನಿಮಾದಲ್ಲಿ ಇರಲಿದೆ. ಆದಿತ್ಯ ಹಾಗೂ ಅಂಕಿತಾ ಜೊತೆ ನಟಿ ನೇಹಾ ಪಾಟೀಲ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಬಲ ರಾಜ್ವಾಡಿ, ಮಠ ಕೊಪ್ಪಳ, ನೀನಾಸಂ ಅಶ್ವತ್ಥ್​, ಶಿವಮಂಜು ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ‘ಅಭಿನಯ ಕಲಿತು, ಕಿರುಚಿತ್ರ ಮತ್ತು ನಾಟಕಗಳಲ್ಲಿ ನಟಿಸಿದ್ದೇನೆ. ಹಿರಿತೆರೆಯಲ್ಲಿ ಇದು ಮೊದಲ ಸಿನಿಮಾ’ ಎಂದು ಆದಿತ್ಯ ಹೇಳಿದ್ದಾರೆ.

ಚಿತ್ರದಲ್ಲಿ 4 ಹಾಡುಗಳಿದ್ದು, ಪ್ರದೀಪ್ ವರ್ಮಾ ಸಂಗೀತ ನಿರ್ದೇಶನ ಮಾಡಿದ್ದಾರೆ. ವೀನಸ್ ನಾಗರಾಜ್ ಮೂರ್ತಿ ಅವರ ಛಾಯಾಗ್ರಹಣ ಈ ಸಿನಿಮಾಗೆ ಇದೆ. ಪವನ್ ಗೌಡ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ‘ಕಾಗದ’ ಸಿನಿಮಾದ ಟ್ರೇಲರ್ ನೋಡಿದ ರಮೇಶ್ ಅರವಿಂದ್, ಧ್ರುವ ಸರ್ಜಾ, ಅನು ಪ್ರಭಾಕರ್, ಎ.ಪಿ. ಅರ್ಜುನ್ ಮುಂತಾದವರು ಮೆಚ್ಚುಗೆ ಸೂಚಿಸಿದ್ದಾರೆ. ಜಂಕಾರ್ ಮ್ಯೂಸಿಕ್​ನಲ್ಲಿ ಈ ಸಿನಿಮಾದ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆ ಆಗಿವೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾಗೆ ‘ಕೆಜಿಎಫ್’ ಸೂತ್ರ ಪಾಲಿಸುವ ಯಶ್? ಕಥೆ ಬಗ್ಗೆ ಸಿಕ್ತು ಸುಳಿವು

ನಿರ್ಮಾಪಕ ಅರುಣ್​ ಕುಮಾರ್​ ಅವರು ಈ ಮೊದಲು ‘ರಗಡ್​’ ಸಿನಿಮಾ ನಿರ್ಮಿಸಿದ್ದರು. ಈಗ ಮಗನಿಗಾಗಿ ‘ಕಾಗದ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ‘ಈ ಸಿನಿಮಾದಲ್ಲಿ ಯಾವುದೇ ಧರ್ಮದ ಭಾವನೆಗಳಿಗ ಧಕ್ಕೆ ಉಂಟುಮಾಡುವ ದೃಶ್ಯಗಳನ್ನು ನಾವು ತೋರಿಸಿಲ್ಲ. ಮನುಷ್ಯತ್ವವೇ ಎಲ್ಲಕ್ಕಿಂತ ಮುಖ್ಯ ಎನ್ನುವ ಸಂದೇಶ ನೀಡಿದ್ದೇವೆ. ನನ್ನ ಮಗ ಆದಿತ್ಯ ಈ ಸಿನಿಮಾದ ಮೂಲಕ ಹೀರೋ ಆಗಿ ಪರಿಚಯಗೊಳ್ಳುತ್ತಿದ್ದಾನೆ’ ಎಂದು ನಿರ್ಮಾಪಕ ಅರುಣ್ ಕುಮಾರ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ