Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಪಾಯವಿದೆ ಎಚ್ಚರಿಕೆ’ ಸಿನಿಮಾ ಟ್ರೇಲರ್​; ‘ಅಣ್ಣಯ್ಯ’ ಧಾರಾವಾಹಿ ನಟ ವಿಕಾಶ್ ಹೀರೋ

ಹಾರರ್ ಕಥಾಹಂದರ ಇರುವ ‘ಅಪಾಯವಿದೆ ಎಚ್ಚರಿಕೆ’ ಸಿನಿಮಾದ ಟ್ರೇಲರ್​ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ. ‘ಅಣ್ಣಯ್ಯ’ ಧಾರಾವಾಹಿ ಖ್ಯಾತಿಯ ವಿಕಾಶ್ ಉತ್ತಯ್ಯ ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಫೆ.28ರಂದು ಈ ಸಿನಿಮಾ ತೆರೆಕಾಣಲಿದೆ. ‘ಅಪಾಯವಿದೆ ಎಚ್ಚರಿಕೆ’ ಚಿತ್ರದ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

‘ಅಪಾಯವಿದೆ ಎಚ್ಚರಿಕೆ’ ಸಿನಿಮಾ ಟ್ರೇಲರ್​; ‘ಅಣ್ಣಯ್ಯ’ ಧಾರಾವಾಹಿ ನಟ ವಿಕಾಶ್ ಹೀರೋ
Vikash Uthaiah, Radha Bhagavati
Follow us
ಮದನ್​ ಕುಮಾರ್​
|

Updated on: Feb 19, 2025 | 9:43 PM

ಟೈಟಲ್ ಮೂಲಕವೇ ‘ಅಪಾಯವಿದೆ ಎಚ್ಚರಿಕೆ’ ಸಿನಿಮಾ ಕೌತುಕ ಮೂಡಿಸಿದೆ. ಈಗ ಈ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಶೀರ್ಷಿಕೆಯೇ ಸೂಚಿಸುವಂತೆ ಒಂದು ದೊಡ್ಡ ಅಪಾಯವನ್ನು ಎದುರಿಸಲು ಹೊರಟ ಹುಡುಗರ ಕಹಾನಿ ಈ ಸಿನಿಮಾದಲ್ಲಿ ಇದೆ ಎಂಬುದು ಟ್ರೇಲರ್​ ಮೂಲಕ ಗೊತ್ತಾಗಿದೆ. ‘ಅಣ್ಣಯ್ಯ’ ಸೀರಿಯಲ್​ ಮೂಲಕ ಮನೆಮಾತಾಗಿರುವ ನಟ ವಿಕಾಶ್​ ಉತ್ತಯ್ಯ ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರ ಜೊತೆ ಮಿಥುನ್ ತೀರ್ಥಹಳ್ಳಿ ಹಾಗೂ ರಾಘವ್ ಕೊಡಚಾದ್ರಿ ಕೂಡ ಮುಖ್ಯ ಪಾತ್ರಗಳನ್ನು ಮಾಡಿದ್ದಾರೆ.

ಹಾರರ್ ಸಿನಿಮಾಗಳನ್ನು ಇಷ್ಟಪಡುವ ಪ್ರೇಕ್ಷಕರಿಗೆ ‘ಅಪಾಯವಿದೆ ಎಚ್ಚರಿಕೆ’ ಸಿನಿಮಾದ ಟ್ರೇಲರ್​ ಇಷ್ಟ ಆಗಿದೆ. ಅಭಿಜಿತ್ ತೀರ್ಥಹಳ್ಳಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಟ್ರೇಲರ್​ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಮೊದಲ ಸಿನಿಮಾ. ‘ಇದು ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾ ಆಗಿದ್ದರೂ ಕೂಡ ಹಾರರ್ ಅಂಶ ಗಮನ ಸೆಳೆಯುತ್ತೆ. ಬೆಂಕಿ, ನೀರು, ಗಾಳಿ ಈ ಮೂರನ್ನು ಪ್ರತಿನಿಧಿಸುವ 3 ಪಾತ್ರಗಳು ಪ್ರಮುಖವಾಗಿ ಬರಲಿವೆ. ವಿಕಾಶ್ ಉತ್ತಯ್ಯ, ಮಿಥುನ್ ತೀರ್ಥಹಳ್ಳಿ ಮತ್ತು ರಾಘವ್ ಕೊಡಚಾದ್ರಿ ಅವರು ಆ ಪಾತ್ರಗಳನ್ನು ಮಾಡಿದ್ದಾರೆ’ ಎಂದು ನಿರ್ದೇಶಕರು ಹೇಳಿದರು.

‘ಅಪಾಯವಿದೆ ಎಚ್ಚರಿಕೆ’ ಸಿನಿಮಾ ಟ್ರೇಲರ್:

‘ಅಪಾಯವಿದೆ ಎಚ್ಚರಿಕೆ’ ಸಿನಿಮಾದ ಟೀಸರ್ ಹಾಗೂ ಹಾಡುಗಳಿಗೆ ಈ ಮೊದಲೇ ಜನರಿಂದ ಮೆಚ್ಚುಗೆ ಸಿಕ್ಕಿತ್ತು. ಈಗ ಟ್ರೇಲರ್​ ಕೂಡ ಗಮನ ಸೆಳೆಯುತ್ತಿರುವುದು ಚಿತ್ರತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ‘ಆನಂದ್ ಆಡಿಯೋ’ ಮೂಲಕ ಟ್ರೇಲರ್​ ಬಿಡುಗಡೆ ಆಗಿದೆ. ಫೆಬ್ರವರಿ 28ಕ್ಕೆ ಸಿನಿಮಾ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಟ್ರೇಲರ್​ ಬಿಡುಗಡೆ ಕಾರ್ಯಕ್ರಮದಲ್ಲಿ ಚಿತ್ರತಂಡದವರು ಮಾತನಾಡಿದರು.

ವಿಕಾಶ್ ಉತ್ತಯ್ಯ ಅವರು ಈ ಮೊದಲು ‘ಆನ’, ‘ಮೇರಿ’ ಸಿನಿಮಾಗಳಲ್ಲಿ ನಟಿಸಿದ್ದರು. ಈಗ ಅವರು ‘ಅಪಾಯವಿದೆ ಎಚ್ಚರಿಕೆ’ ಸಿನಿಮಾದ ಮೂಲಕ ಹೀರೋ ಆಗುತ್ತಿರುವ ಖುಷಿಯಲ್ಲಿದ್ದಾರೆ. ಈ ಸಿನಿಮಾದಲ್ಲಿ ಅವರು ನಾಸ್ತಿಕನ ಪಾತ್ರ ಮಾಡಿದ್ದಾರೆ. ಟ್ರೇಲರ್​ನಲ್ಲಿ ಅವರ ಪಾತ್ರದ ಪರಿಚಯ ಮಾಡಿಕೊಡಲಾಗಿದೆ. ಈ ಸಿನಿಮಾಗೆ ನಾಯಕಿಯಾಗಿ ರಾಧಾ ಭಗವತಿ ಅವರು ನಟಿಸಿದ್ದಾರೆ.

ಇದನ್ನೂ ಓದಿ: ಹಾರರ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ; ಕರ್ನಾಟಕದಲ್ಲಿ ನಡೆಯಲಿದೆ ಕಥೆ

ಸಿನಿಮಾದಲ್ಲಿ ನಟಿಸಿರುವ ಮಿಥುನ್ ತೀರ್ಥಹಳ್ಳಿ, ಅಶ್ವಿನ್ ಹಾಸನ್, ರಾಘವ್ ಕೊಡಚಾದ್ರಿ, ದೇವ್ ಕೂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಸಿನಿಮಾಗೆ ಸುನಾದ್ ಗೌತಮ್ ಅವರು ಛಾಯಾಗ್ರಹಣದ ಜೊತೆ ಸಂಗೀತ ನಿರ್ದೇಶನ ಕೂಡ ಮಾಡಿದ್ದಾರೆ. ‘ಚಿತ್ರತಂಡದ ಸಹಕಾರದಿಂದ ನಾವು ಒಳ್ಳೆಯ ಸಿನಿಮಾ ಮಾಡಿದ್ದೇವೆ‌. ಹೊಸತಂಡದ ಈ ಪ್ರಯತ್ನಕ್ಕೆ ಪ್ರೇಕ್ಷಕರ ಬೆಂಬಲ ಬೇಕಿದೆ’ ಎಂದು ನಿರ್ಮಾಪಕರಾದ ಮಂಜುನಾಥ್ ವಿ.ಜಿ. ಮತ್ತು ಪೂರ್ಣಿಮಾ ಗೌಡ. ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?