AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಧಿಕಾರ ದಾಹಕ್ಕಾಗಿ ಮತಾಂತರ ನಿಷೇಧ ಕಾಯ್ದೆ’: ಬೊಮ್ಮಾಯಿ ವಿರುದ್ಧ ಚೇತನ್​ ಗರಂ

Anti Conversion Bill: ‘ನಮ್ಮ ಧರ್ಮ ನಮ್ಮ ಹಕ್ಕು. ಅದು ನಮ್ಮ ಸಂವಿಧಾನದಲ್ಲಿದೆ. ಅವರವರ ಇಷ್ಟದ ಧರ್ಮವನ್ನು ಜನರು ಆಚರಿಸುತ್ತಾರೆ. ನಿಮ್ಮ ಧರ್ಮ ಚೆನ್ನಾಗಿದ್ದರೆ ಜನರೇ ಬಂದು ಸೇರುತ್ತಾರೆ’ ಎಂದು ಚೇತನ್​ ಕುಮಾರ್​ ಹೇಳಿದ್ದಾರೆ.

‘ಅಧಿಕಾರ ದಾಹಕ್ಕಾಗಿ ಮತಾಂತರ ನಿಷೇಧ ಕಾಯ್ದೆ’: ಬೊಮ್ಮಾಯಿ ವಿರುದ್ಧ ಚೇತನ್​ ಗರಂ
ಚೇತನ್ ಕುಮಾರ್
TV9 Web
| Edited By: |

Updated on: Dec 27, 2021 | 9:27 AM

Share

ಖ್ಯಾತ ನಟ ‘ಆ ದಿನಗಳು’ ಚೇತನ್​ ಕುಮಾರ್​ (Actor Chetan Kumar) ಅವರು ತಮ್ಮ ಸಿದ್ಧಾಂತದ ಮೂಲಕ ಗುರುತಿಸಿಕೊಂಡಿದ್ದಾರೆ. ತಮ್ಮ ಅಭಿಪ್ರಾಯವನ್ನು ಅವರು ನೇರವಾಗಿ ತಿಳಿಸುತ್ತಾರೆ. ಈಗ ಅವರು ಮತಾಂತರ ನಿಷೇಧ ಕಾಯ್ದೆ ಕುರಿತು ಅನಿಸಿಕೆ ಹಂಚಿಕೊಂಡಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ನಡೆ ಸರಿಯಿಲ್ಲ ಎಂದು ಅವರು ಟೀಕಿಸಿದ್ದಾರೆ. ‘ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಅಧಿಕಾರದ ದಾಹಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ. ಅವರು ಕೋಮುವಾದಿಯೇ ಆಗಿಬಿಟ್ಟಿದ್ದಾರೆ ಎನ್ನಬಹುದು’ ಎಂದು ಚೇತನ್​ ಕುಮಾರ್​ ಗುಡುಗಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಕುರಿತಂತೆ ಪರ-ವಿರೋಧದ ಚರ್ಚೆ ಜೋರಾಗಿದೆ.

‘ಮುಖ್ಯಮಂತ್ರಿಗಳಿಗೆ ಅಪಾರ ಶಕ್ತಿ ಇರುತ್ತದೆ. ಈ ಮೊದಲು ಕೂಡ ನಾವು ಕರ್ನಾಟಕದಲ್ಲಿ ಬಿಜೆಪಿ ಮುಖ್ಯಮಂತ್ರಿಗಳನ್ನು ನೋಡಿದ್ದೇವೆ. ಜಗದೀಶ್​ ಶೆಟ್ಟರ್​, ಬಿ.ಎಸ್​. ಯಡಿಯೂರಪ್ಪ, ಸದಾನಂದ ಗೌಡ ಆಗಿರಬಹುದು, ಅವರು ಯಾರೂ ಕೂಡ ಬಸವರಾಜ ಬೊಮ್ಮಾಯಿ ರೀತಿ ಅಲ್ಪ ಸಂಖ್ಯಾತರನ್ನು ಗುರಿಯಿಟ್ಟುಕೊಂಡು ಮತಾಂತರ ನಿಷೇಧ ಕಾಯ್ದೆ ತರಲಿಲ್ಲ. ಕೇವಲ 5 ತಿಂಗಳಲ್ಲಿ ಬೊಮ್ಮಾಯಿ ಅವರು ಅಧಿಕಾರ ದಾಹಕ್ಕಾಗಿ, ಸಿಎಂ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಇದನ್ನೆಲ್ಲ ಮಾಡುತ್ತಿದ್ದಾರೆ’ ಎಂದು ಚೇತನ್​ ಕುಮಾರ್​ ಹೇಳಿದ್ದಾರೆ.

‘ಜನರನ್ನು ಹೆದರಿಸಿ, ಬೆದರಿಸಿ ಈ ರೀತಿ ಕಾಯ್ದೆಗಳನ್ನು ತರಲಾಗುತ್ತಿದೆ. ಬಲವಂತದಿಂದ ಯಾರಾದರೂ ಮತಾಂತರ ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಿ. ಆದರೆ ಬಲವಂತ ಮಾಡಿರುವುದಕ್ಕೆ ಯಾವುದೇ ಆಧಾರಗಳು ಇಲ್ಲದಿರುವಾಗ, ಹೆದರಿಸುವ ತಂತ್ರದ ರೀತಿಯಲ್ಲಿ ಈ ರೀತಿ ಮಸೂದೆಗಳನ್ನು ತರುತ್ತಿರುವುದು ಸರಿಯಲ್ಲ. ನಮ್ಮ ಧರ್ಮ ನಮ್ಮ ಹಕ್ಕು. ಅದು ನಮ್ಮ ಸಂವಿಧಾನದಲ್ಲಿದೆ. ಅವರವರ ಇಷ್ಟದ ಧರ್ಮವನ್ನು ಜನರು ಆಚರಿಸುತ್ತಾರೆ. ನಿಮ್ಮ ಧರ್ಮ ಚೆನ್ನಾಗಿದ್ದರೆ ಜನರೇ ಬಂದು ಸೇರುತ್ತಾರೆ’ ಎಂದಿದ್ದಾರೆ ಚೇತನ್​ ಕುಮಾರ್​.

‘5 ತಿಂಗಳಲ್ಲಿ ಕೋಮುವಾದಿ ಸಿದ್ಧಾಂತದಿಂದ ಕಾಯ್ದೆ ಜಾರಿಗೊಳಿಸುವ ಹುನ್ನಾರ ನಡೆದಿದೆ. ಅದನ್ನು ಸಮರ್ಥಿಸಿಕೊಳ್ಳೋಕೆ ಆಗಲ್ಲ. ಇದನ್ನು ಅವರ ಅವಕಾಶವಾದಿತನ ಅಂತ ಹೇಳಬಹುದು. ನಿಜವಾಗಿಯೂ ಅವರು ಕೋಮುವಾದಿ ಆಗಿಯೇ ಬಿಟ್ಟಿದ್ದಾರೆ ಅಂತಲೂ ಹೇಳಬಹುದು. ಏನೇ ಅಂದರೂ ಇದು ಕರ್ನಾಟಕಕ್ಕೆ, ಭಾರತಕ್ಕೆ ಒಳ್ಳೆಯ ಹೆಜ್ಜೆ ಅಲ್ಲವೇ ಅಲ್ಲ’ ಎಂದು ಚೇತನ್​ ಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ:

‘100 ಕೋಟಿ ರೂ. ಅಲ್ಲ ಎಂದಿದ್ದರೆ ನಾನು ಈ ಕೆಲಸ ಮಾಡ್ತಿರಲಿಲ್ಲ’; ಚೇತನ್​ ಸಿನಿಮಾ ಬಗ್ಗೆ ರಮ್ಯಾ ಮಾತು

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ; ಸಂಗೀತ ನಿರ್ದೇಶಕ ಹಂಸಲೇಖ ಹೇಳಿಕೆ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ