Anup Bhandari Birthday: ಅನೂಪ್ ಭಂಡಾರಿ ಹುಟ್ಟುಹಬ್ಬಕ್ಕೆ ವಿಕ್ರಾಂತ್ ರೋಣ ಕಿಚ್ಚನಿಂದ ಶುಭ ಹಾರೈಕೆ

ಅನೂಪ್ ಭಂಡಾರಿ ಹುಟ್ಟುಹಬ್ಬ: ಕನ್ನಡ ಚಿತ್ರರಂಗದ ಭರವಸೆಯ ನಿರ್ದೇಶಕ ಅನೂಪ್ ಭಂಡಾರಿ ಅವರಿಗೆ ಮಂಗಳವಾರ (ಮಾ.2) ಜನ್ಮದಿನ ಸಂಭ್ರಮ. ಅವರಿಗೆ ನಟ ಕಿಚ್ಚ ಸುದೀಪ್​ ಆತ್ಮೀಯವಾಗಿ ಶುಭ ಹಾರೈಸಿದ್ದಾರೆ.

Anup Bhandari Birthday: ಅನೂಪ್ ಭಂಡಾರಿ ಹುಟ್ಟುಹಬ್ಬಕ್ಕೆ ವಿಕ್ರಾಂತ್ ರೋಣ ಕಿಚ್ಚನಿಂದ ಶುಭ ಹಾರೈಕೆ
ಅನೂಪ್ ಭಂಡಾರಿ, ಸುದೀಪ್
Follow us
|

Updated on: Mar 02, 2021 | 11:48 AM

ವಿಕ್ರಾಂತ್ ರೋಣ ಸಿನಿಮಾ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ನಿರ್ದೇಶಕ ಅನೂಪ್​ ಭಂಡಾರಿ ಅವರು ಮಂಗಳವಾರ (ಮಾ.2) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಅನೂಪ್​ ಜೊತೆ ಮೊದಲ ಬಾರಿಗೆ ಸಿನಿಮಾ ಮಾಡುತ್ತಿರುವ ನಟ ಸುದೀಪ್​ ಕೂಡ ಟ್ವಿಟರ್​ ಮೂಲಕ ವಿಶ್​ ಮಾಡಿದ್ದಾರೆ.

“ನೀವೊಬ್ಬ ಅತ್ಯುತ್ತಮ ವ್ಯಕ್ತಿ. ಪ್ರಾಮಾಣಿಕವಾಗಿ ನೀವು ಮಾಡುವ ಎಲ್ಲ ಕೆಲಸವೂ ನಿಮ್ಮ ವ್ಯಕ್ತಿತ್ವ ಏನೆಂಬುದನ್ನು ತಿಳಿಸುತ್ತದೆ. ನಿಮ್ಮ ಎಲ್ಲ ಕೆಲಸಗಳಿಗೂ ಶುಭವಾಗಲಿ ಅಂತ ನಾನು ಹಾರೈಸುತ್ತೇನೆ ಸ್ನೇಹಿತನೇ. ಹ್ಯಾಪಿ ಬರ್ತ್​ಡೇ ಅನೂಪ್” ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ. ಅಭಿಮಾನಿಗಳಿಂದಲೂ ಅನೂಪ್​ಗೆ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.

ರಂಗಿತರಂಗ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡ ಅನೂಪ್ ಅವರಿಗೆ ನಂತರ ರಾಜರಥ ಸಿನಿಮಾದಿಂದ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ. ಆದರೆ ಈಗ ವಿಕ್ರಾಂತ್ ರೋಣ ಮೂಲಕ ಅಭಿಮಾನಿಗಳ ವಲಯದಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ಗಳು ಭಾರೀ ಕೌತುಕ ಸೃಷ್ಟಿಸಿವೆ. ದುಬೈನ ಭುರ್ಜ್ ಖಲೀಫಾ ಕಟ್ಟಡದ ಮೇಲೆ ಟೀಸರ್​ ಬಿತ್ತರಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಲ್ಲಿ ಈ ಚಿತ್ರತಂಡ ಯಶಸ್ವಿಯಾಗಿದೆ.

ಅನೂಪ್​ ಅವರ ಕಾರ್ಯವೈಖರಿ ಬಗ್ಗೆ ಸುದೀಪ್​ಮೊದಲಿನಿಂದಲೂ ಮೆಚ್ಚುಗೆಯ ಮಾತುಗಳನ್ನು ಹೇಳುತ್ತಾ ಬಂದಿದ್ದಾರೆ. ದೊಡ್ಡ ಕ್ಯಾನ್ವಾಸ್​ನಲ್ಲಿ ವಿಕ್ರಾಂತ್​ ರೋಣ ತಯಾರಾಗುತ್ತಿದ್ದು, ಹೈದರಾಬಾದ್​​ನಲ್ಲಿ ಬೃಹತ್​ ಕಾಡಿನ ಸೆಟ್​ ಹಾಕಿ ಚಿತ್ರೀಕರಣ ಮಾಡಿರುವುದು ವಿಶೇಷ. ಈ ಎಲ್ಲ ಕಾರಣಗಳಿಗಾಗಿ ನಿರ್ದೇಶಕ ಅನೂಪ್​ ಮತ್ತು ಇಡೀ ಚಿತ್ರತಂಡ ಮೇಲೆ ಸುದೀಪ್​ ಭರವಸೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್