AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anup Bhandari Birthday: ಅನೂಪ್ ಭಂಡಾರಿ ಹುಟ್ಟುಹಬ್ಬಕ್ಕೆ ವಿಕ್ರಾಂತ್ ರೋಣ ಕಿಚ್ಚನಿಂದ ಶುಭ ಹಾರೈಕೆ

ಅನೂಪ್ ಭಂಡಾರಿ ಹುಟ್ಟುಹಬ್ಬ: ಕನ್ನಡ ಚಿತ್ರರಂಗದ ಭರವಸೆಯ ನಿರ್ದೇಶಕ ಅನೂಪ್ ಭಂಡಾರಿ ಅವರಿಗೆ ಮಂಗಳವಾರ (ಮಾ.2) ಜನ್ಮದಿನ ಸಂಭ್ರಮ. ಅವರಿಗೆ ನಟ ಕಿಚ್ಚ ಸುದೀಪ್​ ಆತ್ಮೀಯವಾಗಿ ಶುಭ ಹಾರೈಸಿದ್ದಾರೆ.

Anup Bhandari Birthday: ಅನೂಪ್ ಭಂಡಾರಿ ಹುಟ್ಟುಹಬ್ಬಕ್ಕೆ ವಿಕ್ರಾಂತ್ ರೋಣ ಕಿಚ್ಚನಿಂದ ಶುಭ ಹಾರೈಕೆ
ಅನೂಪ್ ಭಂಡಾರಿ, ಸುದೀಪ್
Follow us
ಆಯೇಷಾ ಬಾನು
|

Updated on: Mar 02, 2021 | 11:48 AM

ವಿಕ್ರಾಂತ್ ರೋಣ ಸಿನಿಮಾ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ನಿರ್ದೇಶಕ ಅನೂಪ್​ ಭಂಡಾರಿ ಅವರು ಮಂಗಳವಾರ (ಮಾ.2) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಅನೂಪ್​ ಜೊತೆ ಮೊದಲ ಬಾರಿಗೆ ಸಿನಿಮಾ ಮಾಡುತ್ತಿರುವ ನಟ ಸುದೀಪ್​ ಕೂಡ ಟ್ವಿಟರ್​ ಮೂಲಕ ವಿಶ್​ ಮಾಡಿದ್ದಾರೆ.

“ನೀವೊಬ್ಬ ಅತ್ಯುತ್ತಮ ವ್ಯಕ್ತಿ. ಪ್ರಾಮಾಣಿಕವಾಗಿ ನೀವು ಮಾಡುವ ಎಲ್ಲ ಕೆಲಸವೂ ನಿಮ್ಮ ವ್ಯಕ್ತಿತ್ವ ಏನೆಂಬುದನ್ನು ತಿಳಿಸುತ್ತದೆ. ನಿಮ್ಮ ಎಲ್ಲ ಕೆಲಸಗಳಿಗೂ ಶುಭವಾಗಲಿ ಅಂತ ನಾನು ಹಾರೈಸುತ್ತೇನೆ ಸ್ನೇಹಿತನೇ. ಹ್ಯಾಪಿ ಬರ್ತ್​ಡೇ ಅನೂಪ್” ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ. ಅಭಿಮಾನಿಗಳಿಂದಲೂ ಅನೂಪ್​ಗೆ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.

ರಂಗಿತರಂಗ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡ ಅನೂಪ್ ಅವರಿಗೆ ನಂತರ ರಾಜರಥ ಸಿನಿಮಾದಿಂದ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ. ಆದರೆ ಈಗ ವಿಕ್ರಾಂತ್ ರೋಣ ಮೂಲಕ ಅಭಿಮಾನಿಗಳ ವಲಯದಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ಗಳು ಭಾರೀ ಕೌತುಕ ಸೃಷ್ಟಿಸಿವೆ. ದುಬೈನ ಭುರ್ಜ್ ಖಲೀಫಾ ಕಟ್ಟಡದ ಮೇಲೆ ಟೀಸರ್​ ಬಿತ್ತರಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಲ್ಲಿ ಈ ಚಿತ್ರತಂಡ ಯಶಸ್ವಿಯಾಗಿದೆ.

ಅನೂಪ್​ ಅವರ ಕಾರ್ಯವೈಖರಿ ಬಗ್ಗೆ ಸುದೀಪ್​ಮೊದಲಿನಿಂದಲೂ ಮೆಚ್ಚುಗೆಯ ಮಾತುಗಳನ್ನು ಹೇಳುತ್ತಾ ಬಂದಿದ್ದಾರೆ. ದೊಡ್ಡ ಕ್ಯಾನ್ವಾಸ್​ನಲ್ಲಿ ವಿಕ್ರಾಂತ್​ ರೋಣ ತಯಾರಾಗುತ್ತಿದ್ದು, ಹೈದರಾಬಾದ್​​ನಲ್ಲಿ ಬೃಹತ್​ ಕಾಡಿನ ಸೆಟ್​ ಹಾಕಿ ಚಿತ್ರೀಕರಣ ಮಾಡಿರುವುದು ವಿಶೇಷ. ಈ ಎಲ್ಲ ಕಾರಣಗಳಿಗಾಗಿ ನಿರ್ದೇಶಕ ಅನೂಪ್​ ಮತ್ತು ಇಡೀ ಚಿತ್ರತಂಡ ಮೇಲೆ ಸುದೀಪ್​ ಭರವಸೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು