AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anup Bhandari Birthday: ಅನೂಪ್ ಭಂಡಾರಿ ಹುಟ್ಟುಹಬ್ಬಕ್ಕೆ ವಿಕ್ರಾಂತ್ ರೋಣ ಕಿಚ್ಚನಿಂದ ಶುಭ ಹಾರೈಕೆ

ಅನೂಪ್ ಭಂಡಾರಿ ಹುಟ್ಟುಹಬ್ಬ: ಕನ್ನಡ ಚಿತ್ರರಂಗದ ಭರವಸೆಯ ನಿರ್ದೇಶಕ ಅನೂಪ್ ಭಂಡಾರಿ ಅವರಿಗೆ ಮಂಗಳವಾರ (ಮಾ.2) ಜನ್ಮದಿನ ಸಂಭ್ರಮ. ಅವರಿಗೆ ನಟ ಕಿಚ್ಚ ಸುದೀಪ್​ ಆತ್ಮೀಯವಾಗಿ ಶುಭ ಹಾರೈಸಿದ್ದಾರೆ.

Anup Bhandari Birthday: ಅನೂಪ್ ಭಂಡಾರಿ ಹುಟ್ಟುಹಬ್ಬಕ್ಕೆ ವಿಕ್ರಾಂತ್ ರೋಣ ಕಿಚ್ಚನಿಂದ ಶುಭ ಹಾರೈಕೆ
ಅನೂಪ್ ಭಂಡಾರಿ, ಸುದೀಪ್
ಆಯೇಷಾ ಬಾನು
|

Updated on: Mar 02, 2021 | 11:48 AM

Share

ವಿಕ್ರಾಂತ್ ರೋಣ ಸಿನಿಮಾ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ನಿರ್ದೇಶಕ ಅನೂಪ್​ ಭಂಡಾರಿ ಅವರು ಮಂಗಳವಾರ (ಮಾ.2) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಅನೂಪ್​ ಜೊತೆ ಮೊದಲ ಬಾರಿಗೆ ಸಿನಿಮಾ ಮಾಡುತ್ತಿರುವ ನಟ ಸುದೀಪ್​ ಕೂಡ ಟ್ವಿಟರ್​ ಮೂಲಕ ವಿಶ್​ ಮಾಡಿದ್ದಾರೆ.

“ನೀವೊಬ್ಬ ಅತ್ಯುತ್ತಮ ವ್ಯಕ್ತಿ. ಪ್ರಾಮಾಣಿಕವಾಗಿ ನೀವು ಮಾಡುವ ಎಲ್ಲ ಕೆಲಸವೂ ನಿಮ್ಮ ವ್ಯಕ್ತಿತ್ವ ಏನೆಂಬುದನ್ನು ತಿಳಿಸುತ್ತದೆ. ನಿಮ್ಮ ಎಲ್ಲ ಕೆಲಸಗಳಿಗೂ ಶುಭವಾಗಲಿ ಅಂತ ನಾನು ಹಾರೈಸುತ್ತೇನೆ ಸ್ನೇಹಿತನೇ. ಹ್ಯಾಪಿ ಬರ್ತ್​ಡೇ ಅನೂಪ್” ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ. ಅಭಿಮಾನಿಗಳಿಂದಲೂ ಅನೂಪ್​ಗೆ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.

ರಂಗಿತರಂಗ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡ ಅನೂಪ್ ಅವರಿಗೆ ನಂತರ ರಾಜರಥ ಸಿನಿಮಾದಿಂದ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ. ಆದರೆ ಈಗ ವಿಕ್ರಾಂತ್ ರೋಣ ಮೂಲಕ ಅಭಿಮಾನಿಗಳ ವಲಯದಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ಗಳು ಭಾರೀ ಕೌತುಕ ಸೃಷ್ಟಿಸಿವೆ. ದುಬೈನ ಭುರ್ಜ್ ಖಲೀಫಾ ಕಟ್ಟಡದ ಮೇಲೆ ಟೀಸರ್​ ಬಿತ್ತರಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಲ್ಲಿ ಈ ಚಿತ್ರತಂಡ ಯಶಸ್ವಿಯಾಗಿದೆ.

ಅನೂಪ್​ ಅವರ ಕಾರ್ಯವೈಖರಿ ಬಗ್ಗೆ ಸುದೀಪ್​ಮೊದಲಿನಿಂದಲೂ ಮೆಚ್ಚುಗೆಯ ಮಾತುಗಳನ್ನು ಹೇಳುತ್ತಾ ಬಂದಿದ್ದಾರೆ. ದೊಡ್ಡ ಕ್ಯಾನ್ವಾಸ್​ನಲ್ಲಿ ವಿಕ್ರಾಂತ್​ ರೋಣ ತಯಾರಾಗುತ್ತಿದ್ದು, ಹೈದರಾಬಾದ್​​ನಲ್ಲಿ ಬೃಹತ್​ ಕಾಡಿನ ಸೆಟ್​ ಹಾಕಿ ಚಿತ್ರೀಕರಣ ಮಾಡಿರುವುದು ವಿಶೇಷ. ಈ ಎಲ್ಲ ಕಾರಣಗಳಿಗಾಗಿ ನಿರ್ದೇಶಕ ಅನೂಪ್​ ಮತ್ತು ಇಡೀ ಚಿತ್ರತಂಡ ಮೇಲೆ ಸುದೀಪ್​ ಭರವಸೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ