AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕಪ್​ ನೋವಿನಲ್ಲಿ ನಟಸಾರ್ವಭೌಮ ನಟಿ; ಅಭಿಮಾನಿಗಳ ಎದುರು ಮೌನ ಮುರಿದ ಅನುಪಮಾ ಪರಮೇಶ್ವರನ್

ಅನುಪಮಾ ಬಗ್ಗೆ ಈ ಮೊದಲು ಸಾಕಷ್ಟು ವದಂತಿಗಳು ಹರಿದಾಡಿದ್ದವು. ಟೀಂ ಇಂಡಿಯಾ ವೇಗಿ ಜಸ್ಪ್ರೀತ್​ ಬೂಮ್ರಾ ಜತೆ ಅವರು ಮದುವೆ ಆಗಲಿದ್ದಾರೆ ಎನ್ನುವ ವದಂತಿ ಹರಿದಾಡಿತ್ತು. ಆದರೆ, ಅನುಪಮಾ ಈ ಬಗ್ಗೆ ತುಟಿ ಬಿಚ್ಚಿಲ್ಲ.

ಬ್ರೇಕಪ್​ ನೋವಿನಲ್ಲಿ ನಟಸಾರ್ವಭೌಮ ನಟಿ; ಅಭಿಮಾನಿಗಳ ಎದುರು ಮೌನ ಮುರಿದ ಅನುಪಮಾ ಪರಮೇಶ್ವರನ್
ನಟಿ ಅನುಪಮಾ ಪರಮೇಶ್ವರನ್.
TV9 Web
| Edited By: |

Updated on: Jul 10, 2021 | 5:24 PM

Share

ಸೆಲೆಬ್ರಿಟಿಗಳು ಪ್ರೀತಿ, ಪ್ರೇಮ ಹಾಗೂ ಬ್ರೇಕಪ್​ ವಿಚಾರದ ಬಗ್ಗೆ ಆದಷ್ಟು ಗೌಪ್ಯತೆ ಕಾಯ್ದುಕೊಳ್ಳುತ್ತಾರೆ. ಅವರು ಪ್ರೀತಿ ವಿಚಾರದ ಬಗ್ಗೆ ಹೊರಗೆ ಮಾತನಾಡುವುದು ತುಂಬಾನೇ ಕಡಿಮೆ. ಹೀಗೆ ಮಾತನಾಡಿದರೆ ಅನಗತ್ಯ ಗಾಸಿಪ್​ ಆಗುತ್ತದೆ ಎನ್ನುವ ಭಯ ಅವರಿಗೆ ಕಾಡುತ್ತಿರುತ್ತದೆ. ಇದರ ಮಧ್ಯೆಯೂ ನಟಸಾರ್ವಭೌಮ ನಟಿ ಅನುಪಮಾ ಪರಮೇಶ್ವರನ್​ ಈಗ ತಮ್ಮ ಬ್ರೇಕಪ್​ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ.

ಅನುಪಮಾ ಬಗ್ಗೆ ಈ ಮೊದಲು ಸಾಕಷ್ಟು ವದಂತಿಗಳು ಹರಿದಾಡಿದ್ದವು. ಟೀಂ ಇಂಡಿಯಾ ವೇಗಿ ಜಸ್ಪ್ರೀತ್​ ಬೂಮ್ರಾ ಜತೆ ಅವರು ಮದುವೆ ಆಗಲಿದ್ದಾರೆ ಎನ್ನುವ ವದಂತಿ ಹರಿದಾಡಿತ್ತು. ಆದರೆ, ಅನುಪಮಾ ಈ ಬಗ್ಗೆ ತುಟಿ ಬಿಚ್ಚಿಲ್ಲ. ಇದೇ ಮೊದಲ ಬಾರಿಗೆ ಅವರು ಲವ್​ ಲೈಫ್​ ಬಗ್ಗೆ ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಅನುಪಮಾ ಇನ್​ಸ್ಟಾಗ್ರಾಮ್​ನಲ್ಲಿ ಆಸ್ಕ್​ ಮಿ ಎನಿಥಿಂಗ್​ ಸೆಷನ್​ ಆರಂಭಿಸಿದ್ದರು. ಈ ವೇಳೆ ಅಭಿಮಾನಿಗಳು ನಾನಾ ಪ್ರಶ್ನೆಗಳು ಕೇಳಿದ್ದಾರೆ. ಅದರಲ್ಲಿ ಓರ್ವ ಅಭಿಮಾನಿ ನೀವು ನಿಜವಾದ ಪ್ರೀತಿಯನ್ನು ನೋಡಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾನೆ. ಇದಕ್ಕೆ ಉತ್ತರಿಸಿರುವ ಅನುಪಮಾ, ‘ನನಗೆ ನಿಜವಾದ ಪ್ರೀತಿಯೂ ಆಗಿದೆ ಮತ್ತು ನಿಜವಾದ ಬ್ರೇಕಪ್​ ಕೂಡ ಆಗಿದೆ’ ಎಂದಿದ್ದಾರೆ.

ಅನುಪಮಾ ಹೇಳಿರುವ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಅಂದಹಾಗೆ, ಅವರು ಯಾರ ಜತೆ ಬ್ರೇಕಪ್​ ಮಾಡಿಕೊಂಡಿದ್ದರು ಎಂಬಿತ್ಯಾದಿ ವಿಚಾರದ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಇನ್ನು, ಕನ್ನಡ ಸಿನಿಮಾ ಯಾವಾಗ ಮಾಡುತ್ತೀರಿ ಎನ್ನುವ ಪ್ರಶ್ನೆಯೂ ಅನುಪಮಾ ಅವರಿಗೆ ಕೇಳಲಾಯಿತು. ಒಳ್ಳೆಯ ಕಥೆ ಸಿಕ್ಕರೆ ಖಂಡಿತವಾಗಿಯೂ ನಟಿಸುತ್ತೇನೆ ಎಂದರು.

ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡಿದ್ದಾರೆ.  ಪುನೀತ್ ರಾಜ್​ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಕನ್ನಡಕ್ಕೂ ಕಾಲಿಟ್ಟರು. ಈ ಮೂಲಕ ಕನ್ನಡದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು.

ಇದನ್ನೂ ಓದಿ: Anupama Parameswaran: ವೈರಲ್ ಆಯ್ತು ಅನುಪಮಾ ಪರಮೇಶ್ವರನ್ ಕ್ಯೂಟ್ ಫೋಟೋಸ್

ಅನುಪಮಾ ಪರಮೇಶ್ವರನ್​ ನಕಲಿ ಮಾರ್ಕ್ಸ್​ ಕಾರ್ಡ್​ ವೈರಲ್​; ಈ ಹಗರಣದ ಹಿಂದೆ ಯಾರೆಲ್ಲ ಇದ್ದಾರೆ?

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ