AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕಪ್​ ನೋವಿನಲ್ಲಿ ನಟಸಾರ್ವಭೌಮ ನಟಿ; ಅಭಿಮಾನಿಗಳ ಎದುರು ಮೌನ ಮುರಿದ ಅನುಪಮಾ ಪರಮೇಶ್ವರನ್

ಅನುಪಮಾ ಬಗ್ಗೆ ಈ ಮೊದಲು ಸಾಕಷ್ಟು ವದಂತಿಗಳು ಹರಿದಾಡಿದ್ದವು. ಟೀಂ ಇಂಡಿಯಾ ವೇಗಿ ಜಸ್ಪ್ರೀತ್​ ಬೂಮ್ರಾ ಜತೆ ಅವರು ಮದುವೆ ಆಗಲಿದ್ದಾರೆ ಎನ್ನುವ ವದಂತಿ ಹರಿದಾಡಿತ್ತು. ಆದರೆ, ಅನುಪಮಾ ಈ ಬಗ್ಗೆ ತುಟಿ ಬಿಚ್ಚಿಲ್ಲ.

ಬ್ರೇಕಪ್​ ನೋವಿನಲ್ಲಿ ನಟಸಾರ್ವಭೌಮ ನಟಿ; ಅಭಿಮಾನಿಗಳ ಎದುರು ಮೌನ ಮುರಿದ ಅನುಪಮಾ ಪರಮೇಶ್ವರನ್
ನಟಿ ಅನುಪಮಾ ಪರಮೇಶ್ವರನ್.
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 10, 2021 | 5:24 PM

Share

ಸೆಲೆಬ್ರಿಟಿಗಳು ಪ್ರೀತಿ, ಪ್ರೇಮ ಹಾಗೂ ಬ್ರೇಕಪ್​ ವಿಚಾರದ ಬಗ್ಗೆ ಆದಷ್ಟು ಗೌಪ್ಯತೆ ಕಾಯ್ದುಕೊಳ್ಳುತ್ತಾರೆ. ಅವರು ಪ್ರೀತಿ ವಿಚಾರದ ಬಗ್ಗೆ ಹೊರಗೆ ಮಾತನಾಡುವುದು ತುಂಬಾನೇ ಕಡಿಮೆ. ಹೀಗೆ ಮಾತನಾಡಿದರೆ ಅನಗತ್ಯ ಗಾಸಿಪ್​ ಆಗುತ್ತದೆ ಎನ್ನುವ ಭಯ ಅವರಿಗೆ ಕಾಡುತ್ತಿರುತ್ತದೆ. ಇದರ ಮಧ್ಯೆಯೂ ನಟಸಾರ್ವಭೌಮ ನಟಿ ಅನುಪಮಾ ಪರಮೇಶ್ವರನ್​ ಈಗ ತಮ್ಮ ಬ್ರೇಕಪ್​ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ.

ಅನುಪಮಾ ಬಗ್ಗೆ ಈ ಮೊದಲು ಸಾಕಷ್ಟು ವದಂತಿಗಳು ಹರಿದಾಡಿದ್ದವು. ಟೀಂ ಇಂಡಿಯಾ ವೇಗಿ ಜಸ್ಪ್ರೀತ್​ ಬೂಮ್ರಾ ಜತೆ ಅವರು ಮದುವೆ ಆಗಲಿದ್ದಾರೆ ಎನ್ನುವ ವದಂತಿ ಹರಿದಾಡಿತ್ತು. ಆದರೆ, ಅನುಪಮಾ ಈ ಬಗ್ಗೆ ತುಟಿ ಬಿಚ್ಚಿಲ್ಲ. ಇದೇ ಮೊದಲ ಬಾರಿಗೆ ಅವರು ಲವ್​ ಲೈಫ್​ ಬಗ್ಗೆ ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಅನುಪಮಾ ಇನ್​ಸ್ಟಾಗ್ರಾಮ್​ನಲ್ಲಿ ಆಸ್ಕ್​ ಮಿ ಎನಿಥಿಂಗ್​ ಸೆಷನ್​ ಆರಂಭಿಸಿದ್ದರು. ಈ ವೇಳೆ ಅಭಿಮಾನಿಗಳು ನಾನಾ ಪ್ರಶ್ನೆಗಳು ಕೇಳಿದ್ದಾರೆ. ಅದರಲ್ಲಿ ಓರ್ವ ಅಭಿಮಾನಿ ನೀವು ನಿಜವಾದ ಪ್ರೀತಿಯನ್ನು ನೋಡಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾನೆ. ಇದಕ್ಕೆ ಉತ್ತರಿಸಿರುವ ಅನುಪಮಾ, ‘ನನಗೆ ನಿಜವಾದ ಪ್ರೀತಿಯೂ ಆಗಿದೆ ಮತ್ತು ನಿಜವಾದ ಬ್ರೇಕಪ್​ ಕೂಡ ಆಗಿದೆ’ ಎಂದಿದ್ದಾರೆ.

ಅನುಪಮಾ ಹೇಳಿರುವ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಅಂದಹಾಗೆ, ಅವರು ಯಾರ ಜತೆ ಬ್ರೇಕಪ್​ ಮಾಡಿಕೊಂಡಿದ್ದರು ಎಂಬಿತ್ಯಾದಿ ವಿಚಾರದ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಇನ್ನು, ಕನ್ನಡ ಸಿನಿಮಾ ಯಾವಾಗ ಮಾಡುತ್ತೀರಿ ಎನ್ನುವ ಪ್ರಶ್ನೆಯೂ ಅನುಪಮಾ ಅವರಿಗೆ ಕೇಳಲಾಯಿತು. ಒಳ್ಳೆಯ ಕಥೆ ಸಿಕ್ಕರೆ ಖಂಡಿತವಾಗಿಯೂ ನಟಿಸುತ್ತೇನೆ ಎಂದರು.

ಮಲಯಾಳಂ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೂ ಅನುಪಮಾ ಗುರುತಿಸಿಕೊಂಡಿದ್ದಾರೆ.  ಪುನೀತ್ ರಾಜ್​ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾ ಮೂಲಕ ಅನುಪಮಾ ಕನ್ನಡಕ್ಕೂ ಕಾಲಿಟ್ಟರು. ಈ ಮೂಲಕ ಕನ್ನಡದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು.

ಇದನ್ನೂ ಓದಿ: Anupama Parameswaran: ವೈರಲ್ ಆಯ್ತು ಅನುಪಮಾ ಪರಮೇಶ್ವರನ್ ಕ್ಯೂಟ್ ಫೋಟೋಸ್

ಅನುಪಮಾ ಪರಮೇಶ್ವರನ್​ ನಕಲಿ ಮಾರ್ಕ್ಸ್​ ಕಾರ್ಡ್​ ವೈರಲ್​; ಈ ಹಗರಣದ ಹಿಂದೆ ಯಾರೆಲ್ಲ ಇದ್ದಾರೆ?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!