ಕನ್ನಡ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ? ಟಾಲಿವುಡ್​ ಅಂಗಳದಲ್ಲಿ ಹಲ್​ಚಲ್​ ಎಬ್ಬಿಸಿದ ಗಾಸಿಪ್

ಅನುಷ್ಕಾ ಶೆಟ್ಟಿಗೆ ಈಗ 42 ವರ್ಷ. ಈವರೆಗೆ ಅವರು ಮದುವೆ ಬಗ್ಗೆ ನಿರ್ಧಾರ ಮಾಡಿಲ್ಲ. ಈ ಮೊದಲು ಅವರು ಪ್ರಭಾಸ್​ನ ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಆ ವಿಚಾರ ನಿಜವಾಗಿಲ್ಲ. ಈಗ ಅನುಷ್ಕಾ ಹೆಸರು ಸ್ಯಾಂಡಲ್​ವುಡ್ ನಿರ್ಮಾಪಕನ ಜೊತೆ ತಳುಕು ಹಾಕಿಕೊಂಡಿದೆ. 

ಕನ್ನಡ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ? ಟಾಲಿವುಡ್​ ಅಂಗಳದಲ್ಲಿ ಹಲ್​ಚಲ್​ ಎಬ್ಬಿಸಿದ ಗಾಸಿಪ್
ಅನುಷ್ಕಾ
Follow us
| Updated By: ರಾಜೇಶ್ ದುಗ್ಗುಮನೆ

Updated on: May 18, 2024 | 7:02 AM

ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಮದುವೆ ವಿಚಾರಕ್ಕೆ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಅವರ ಮದುವೆ ಯಾವಾಗ ಅನ್ನೋದು ಅಭಿಮಾನಿಗಳ ಪಾಲಿಗೆ ಯಕ್ಷ ಪ್ರಶ್ನೆಯಾಗಿ ಉಳಿದುಕೊಂಡಿದೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಅನುಷ್ಕಾ ಶೆಟ್ಟಿ ಬಗ್ಗೆ ಹೊಸ ಗಾಸಿಪ್ ಹುಟ್ಟಿಕೊಂಡಿದೆ. ಅವರು ಸ್ಯಾಂಡಲ್​ವುಡ್ ನಿರ್ಮಾಪಕರೊಬ್ಬನನ್ನು ವರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಭಿಮಾನಿಗಳಿಗೆ ಈ ವಿಚಾರವನ್ನು ನಂಬಬೇಕೋ ಅಥವಾ ಬೇಡವೋ ಎಂಬುದು ತಿಳಿಯುತ್ತಿಲ್ಲ.

ಅನುಷ್ಕಾ ಶೆಟ್ಟಿಗೆ ಈಗ 42 ವರ್ಷ. ಈವರೆಗೆ ಅವರು ಮದುವೆ ಬಗ್ಗೆ ನಿರ್ಧಾರ ಮಾಡಿಲ್ಲ. ಈ ಮೊದಲು ಅವರು ಪ್ರಭಾಸ್​ನ ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಆ ವಿಚಾರ ನಿಜವಾಗಿಲ್ಲ. ಇಬ್ಬರೂ ಮದುವೆ ಆಗೋ ನಿರ್ಧಾರದಿಂದ ಹಿಂದೆ ಸರಿದರು. ಈಗ ಅನುಷ್ಕಾ ಹೆಸರು ಸ್ಯಾಂಡಲ್​ವುಡ್ ನಿರ್ಮಾಪಕನ ಜೊತೆ ತಳುಕು ಹಾಕಿಕೊಂಡಿದೆ.

ಸದ್ಯ ನಿರ್ಮಾಪಕ ಯಾರು ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಆ ನಿರ್ಮಾಪಕ ಯಾರು ಅನ್ನೋದಕ್ಕೆ ಸದ್ಯ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಈ ಮೊದಲು ಅನುಷ್ಕಾ ಶೆಟ್ಟಿ ಬಗ್ಗೆ ಈ ರೀತಿಯ ಹಲವು ಸುದ್ದಿಗಳು ಹುಟ್ಟಿಕೊಂಡಿದ್ದು ಇದೆ. ಹೀಗಾಗಿ, ಈಗ ಹೊಸದಾಗಿ ಹುಟ್ಟಿಕೊಂಡಿರೋ ಸುದ್ದಿಯನ್ನು ನಂಬೋಕೆ ಫ್ಯಾನ್ಸ್ ರೆಡಿ ಇಲ್ಲ.

ಇದನ್ನೂ ಓದಿ: Chandu Death: ಶಾಕಿಂಗ್​; ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ

2005ರಲ್ಲಿ ರಿಲೀಸ್ ಆದ ತೆಲುಗಿನ ‘ಸೂಪರ್’ ಸಿನಿಮಾ ಮೂಲಕ ಅನುಷ್ಕಾ ಬಣ್ಣದ ಬದುಕು ಆರಂಭಿಸಿದರು. ‘ಬಾಹುಬಲಿ’, ‘ಮಿರ್ಚಿ’, ‘ಅರುಂಧತಿ’ ಅಂಥ ಸೂಪರ್ ಹಿಟ್ ಸಿನಿಮಾಗಳಲ್ಲಿ ಅವರು ನಟಿಸಿದರು. ಸದ್ಯ ಅವರು ಒಂದು ತೆಲುಗು ಹಾಗೂ ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅನುಷ್ಕಾ ಶೆಟ್ಟಿ ಅವರು ಯಾವುದೇ ಕನ್ನಡ ಸಿನಿಮಾಗಳಲ್ಲಿ ನಟಿಸಿಲ್ಲ. ಆದಾಗ್ಯೂ ಕನ್ನಡದ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಇದನ್ನು ಅವರು ಆಗಾಗ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅವರ ತಾಯಿ ಮಂಗಳೂರು ಮೂಲದವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ