AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನುಶ್ರೀ ಜೊತೆ ವೇದಿಕೆ ಹಂಚಿಕೊಂಡವರು ಎಲ್ಲೋ ಹೋಗ್ತಾರೆ’; ಹೀಗೆ ಹೇಳಿದ್ಯಾರು?

ಆ್ಯಂಕರ್ ಅನುಶ್ರೀ 'ಆಲ್ಫಾ' ಸಿನಿಮಾ ಟ್ರೇಲರ್ ಲಾಂಚ್ ಅನ್ನು ತಮ್ಮದೇ ಶೈಲಿಯಲ್ಲಿ ನಡೆಸಿಕೊಟ್ಟರು. ವಿನಯ್ ಬಿದ್ದಪ್ಪ ಗಿಲ್ಲಿ ಹೆಸರು ಪ್ರಸ್ತಾಪಿಸುತ್ತಿದ್ದಂತೆ, ಅನುಶ್ರೀ ತಾನು ಗಿಲ್ಲಿಗೆ ಯಾಕೆ ಬೆಂಬಲ ನೀಡಿದೆ ಎಂಬುದನ್ನು ವಿವರಿಸಿದರು. ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿ ಜೊತೆಗಿನ ತಮ್ಮ ಬಾಂಧವ್ಯವನ್ನು ಅನಾವರಣಗೊಳಿಸಿದರು.

‘ಅನುಶ್ರೀ ಜೊತೆ ವೇದಿಕೆ ಹಂಚಿಕೊಂಡವರು ಎಲ್ಲೋ ಹೋಗ್ತಾರೆ’; ಹೀಗೆ ಹೇಳಿದ್ಯಾರು?
ಅನುಶ್ರೀ-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on:Feb 07, 2026 | 7:13 AM

Share

ಆ್ಯಂಕರ್ ಅನುಶ್ರೀ (Anushree) ಅವರು ವೇದಿಕೆ ಮೇಲಿದ್ದರೆ ಅಲ್ಲಿ ಮನರಂಜನೆಗೆ ಯಾವುದೇ ಕೊರತೆ ಇರೋದಿಲ್ಲ. ಇದು ಪದೇ ಪದೇ ಸಾಬೀತಾಗುತ್ತಲೇ ಇರುತ್ತದೆ. ಈಗ ಅವರು ‘ಆಲ್ಫಾ’ ಸಿನಿಮಾದ ಟ್ರೇಲರ್ ಲಾಂಚ್ ಈವೆಂಟ್​ನ ನಡೆಸಿಕೊಟ್ಟಿದ್ದಾರೆ. ಈ ಈವೆಂಟ್ ಸಾಕಷ್ಟು ಗಮನ ಸೆಳೆದಿದೆ. ಅನುಶ್ರೀ ಅವರು ಈ ವೇದಿಕೆ ಮೇಲೆ ಗಿಲ್ಲಿ ಬಗ್ಗೆ ಮಾತನಾಡಿದರು. ತಮ್ಮ ಬಾಂಧವ್ಯ ಎಂಥದ್ದು, ಗಿಲ್ಲಿಗೆ ಬೆಂಬಲ ನೀಡಿದ್ದು ಏಕೆ ಎಂಬ ವಿಷಯ ಪ್ರಸ್ತಾಪ ಆಗಿದ್ದಕ್ಕೆ ಅವರು ಉತ್ತರ ನೀಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್​ 12’ರ ವಿನ್ನರ್ ಗಿಲ್ಲಿಗೂ ಅನುಶ್ರೀ ಅವರಿಗೂ ಮೊದಲೇ ಪರಿಚಯ ಇತ್ತು. ಇಬ್ಬರೂ ಹಲವು ರಿಯಾಲಿಟಿ ಶೋಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಆಗ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಗಿಲ್ಲಿ ಅವರು ಹಲವು ಕಾರ್ಯಕ್ರಮದಲ್ಲಿ ಗಿಲ್ಲಿ ಬಗ್ಗೆ ಮಾತನಾಡಿದ್ದಾರೆ. ‘ಆಲ್ಫಾ’ ಟ್ರೇಲರ್ ಲಾಂಚ್ ಈವೆಂಟ್​ನಲ್ಲೂ ಗಿಲ್ಲಿ ಬಗ್ಗೆ ಅವರು ಮಾತನಾಡುವಂತಹ ಪರಿಸ್ಥಿತಿ ನಿರ್ಮಾಣ ಆಯಿತು.

ಇದನ್ನೂ ಓದಿ: ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ

‘ಕಾಂತಾರ’ ಸಿನಿಮಾದಲ್ಲಿ ರಾಜನ ಪಾತ್ರ ಮಾಡಿದ್ದ ವಿನಯ್ ಬಿದ್ದಪ್ಪ ಅವರು ‘ಆಲ್ಫಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರು ವೇದಿಕೆ ಏರಿದರು. ವೇದಿಕೆ ಏರುತ್ತಿದ್ದಂತೆಯೇ ಅನುಶ್ರೀ ಬಗ್ಗೆ ಮೆಚ್ಚುಗೆ ಸೂಚಿಸಿದರು. ‘ಅನುಶ್ರೀ ಜೊತೆ ವೇದಿಕೆ ಶೇರ್ ಮಾಡಿಕೊಂಡಿರೋದು ನನ್ನ ಅದೃಷ್ಟ ಅನಿಸುತ್ತದೆ. ಏಕೆಂದರೆ ಅವರ ಜೊತೆ ವೇದಿಕೆ ಹಂಚಿಕೊಂಡವರು ಎಲ್ಲೋ ಹೋಗಿ ಬಿಟ್ಟಿದ್ದಾರೆ. ಗಿಲ್ಲಿನೇ ಉತ್ತಮ ಉದಾಹರಣೆ. ಅಕ್ಕ ಮುಂದೆ ಹೋಗು, ಅಕ್ಕ ಮುಂದೆ ಹೋಗು ಅಂತ ಅವರು ಎಲ್ಲೋ ಹೋದರು’ ಎಂದು ವಿನಯ್ ಬಿದ್ದಪ್ಪ ಕಾಲೆಳೆದರು.

ಇದಕ್ಕೆ ಅನುಶ್ರೀ ಅವರು ಕೂಲ್ ಆಗಿ ಉತ್ತರಿಸಿದರು. ‘ಅವರ ಗೆಲ್ತಾ ಇದ್ರಲ್ಲ, ಅದಕ್ಕೆ ಸಪೋರ್ಟ್ ಆಗಿ ನಿಂತಿದ್ದೇ ಅಷ್ಟೇ’ ಎಂದು ಅನುಶ್ರೀ ಅವರು ಹೇಳಿಕೊಂಡಿದ್ದಾರೆ. ಇದು ಗಿಲ್ಲಿ ಮೇಲೆ ಅನುಶ್ರೀಗೆ ಎಷ್ಟು ಪ್ರೀತಿ ಹಾಗೂ ಗೌರವ ಇದೆ ಎಂಬುದನ್ನು ತೋರಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:07 am, Sat, 7 February 26

Follow Us
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು