AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನುಶ್ರೀ ಜೊತೆ ವೇದಿಕೆ ಹಂಚಿಕೊಂಡವರು ಎಲ್ಲೋ ಹೋಗ್ತಾರೆ’; ಹೀಗೆ ಹೇಳಿದ್ಯಾರು?

ಆ್ಯಂಕರ್ ಅನುಶ್ರೀ 'ಆಲ್ಫಾ' ಸಿನಿಮಾ ಟ್ರೇಲರ್ ಲಾಂಚ್ ಅನ್ನು ತಮ್ಮದೇ ಶೈಲಿಯಲ್ಲಿ ನಡೆಸಿಕೊಟ್ಟರು. ವಿನಯ್ ಬಿದ್ದಪ್ಪ ಗಿಲ್ಲಿ ಹೆಸರು ಪ್ರಸ್ತಾಪಿಸುತ್ತಿದ್ದಂತೆ, ಅನುಶ್ರೀ ತಾನು ಗಿಲ್ಲಿಗೆ ಯಾಕೆ ಬೆಂಬಲ ನೀಡಿದೆ ಎಂಬುದನ್ನು ವಿವರಿಸಿದರು. ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿ ಜೊತೆಗಿನ ತಮ್ಮ ಬಾಂಧವ್ಯವನ್ನು ಅನಾವರಣಗೊಳಿಸಿದರು.

‘ಅನುಶ್ರೀ ಜೊತೆ ವೇದಿಕೆ ಹಂಚಿಕೊಂಡವರು ಎಲ್ಲೋ ಹೋಗ್ತಾರೆ’; ಹೀಗೆ ಹೇಳಿದ್ಯಾರು?
ಅನುಶ್ರೀ-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on:Feb 07, 2026 | 7:13 AM

Share

ಆ್ಯಂಕರ್ ಅನುಶ್ರೀ (Anushree) ಅವರು ವೇದಿಕೆ ಮೇಲಿದ್ದರೆ ಅಲ್ಲಿ ಮನರಂಜನೆಗೆ ಯಾವುದೇ ಕೊರತೆ ಇರೋದಿಲ್ಲ. ಇದು ಪದೇ ಪದೇ ಸಾಬೀತಾಗುತ್ತಲೇ ಇರುತ್ತದೆ. ಈಗ ಅವರು ‘ಆಲ್ಫಾ’ ಸಿನಿಮಾದ ಟ್ರೇಲರ್ ಲಾಂಚ್ ಈವೆಂಟ್​ನ ನಡೆಸಿಕೊಟ್ಟಿದ್ದಾರೆ. ಈ ಈವೆಂಟ್ ಸಾಕಷ್ಟು ಗಮನ ಸೆಳೆದಿದೆ. ಅನುಶ್ರೀ ಅವರು ಈ ವೇದಿಕೆ ಮೇಲೆ ಗಿಲ್ಲಿ ಬಗ್ಗೆ ಮಾತನಾಡಿದರು. ತಮ್ಮ ಬಾಂಧವ್ಯ ಎಂಥದ್ದು, ಗಿಲ್ಲಿಗೆ ಬೆಂಬಲ ನೀಡಿದ್ದು ಏಕೆ ಎಂಬ ವಿಷಯ ಪ್ರಸ್ತಾಪ ಆಗಿದ್ದಕ್ಕೆ ಅವರು ಉತ್ತರ ನೀಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್​ 12’ರ ವಿನ್ನರ್ ಗಿಲ್ಲಿಗೂ ಅನುಶ್ರೀ ಅವರಿಗೂ ಮೊದಲೇ ಪರಿಚಯ ಇತ್ತು. ಇಬ್ಬರೂ ಹಲವು ರಿಯಾಲಿಟಿ ಶೋಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಆಗ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಗಿಲ್ಲಿ ಅವರು ಹಲವು ಕಾರ್ಯಕ್ರಮದಲ್ಲಿ ಗಿಲ್ಲಿ ಬಗ್ಗೆ ಮಾತನಾಡಿದ್ದಾರೆ. ‘ಆಲ್ಫಾ’ ಟ್ರೇಲರ್ ಲಾಂಚ್ ಈವೆಂಟ್​ನಲ್ಲೂ ಗಿಲ್ಲಿ ಬಗ್ಗೆ ಅವರು ಮಾತನಾಡುವಂತಹ ಪರಿಸ್ಥಿತಿ ನಿರ್ಮಾಣ ಆಯಿತು.

ಇದನ್ನೂ ಓದಿ: ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ

‘ಕಾಂತಾರ’ ಸಿನಿಮಾದಲ್ಲಿ ರಾಜನ ಪಾತ್ರ ಮಾಡಿದ್ದ ವಿನಯ್ ಬಿದ್ದಪ್ಪ ಅವರು ‘ಆಲ್ಫಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರು ವೇದಿಕೆ ಏರಿದರು. ವೇದಿಕೆ ಏರುತ್ತಿದ್ದಂತೆಯೇ ಅನುಶ್ರೀ ಬಗ್ಗೆ ಮೆಚ್ಚುಗೆ ಸೂಚಿಸಿದರು. ‘ಅನುಶ್ರೀ ಜೊತೆ ವೇದಿಕೆ ಶೇರ್ ಮಾಡಿಕೊಂಡಿರೋದು ನನ್ನ ಅದೃಷ್ಟ ಅನಿಸುತ್ತದೆ. ಏಕೆಂದರೆ ಅವರ ಜೊತೆ ವೇದಿಕೆ ಹಂಚಿಕೊಂಡವರು ಎಲ್ಲೋ ಹೋಗಿ ಬಿಟ್ಟಿದ್ದಾರೆ. ಗಿಲ್ಲಿನೇ ಉತ್ತಮ ಉದಾಹರಣೆ. ಅಕ್ಕ ಮುಂದೆ ಹೋಗು, ಅಕ್ಕ ಮುಂದೆ ಹೋಗು ಅಂತ ಅವರು ಎಲ್ಲೋ ಹೋದರು’ ಎಂದು ವಿನಯ್ ಬಿದ್ದಪ್ಪ ಕಾಲೆಳೆದರು.

ಇದಕ್ಕೆ ಅನುಶ್ರೀ ಅವರು ಕೂಲ್ ಆಗಿ ಉತ್ತರಿಸಿದರು. ‘ಅವರ ಗೆಲ್ತಾ ಇದ್ರಲ್ಲ, ಅದಕ್ಕೆ ಸಪೋರ್ಟ್ ಆಗಿ ನಿಂತಿದ್ದೇ ಅಷ್ಟೇ’ ಎಂದು ಅನುಶ್ರೀ ಅವರು ಹೇಳಿಕೊಂಡಿದ್ದಾರೆ. ಇದು ಗಿಲ್ಲಿ ಮೇಲೆ ಅನುಶ್ರೀಗೆ ಎಷ್ಟು ಪ್ರೀತಿ ಹಾಗೂ ಗೌರವ ಇದೆ ಎಂಬುದನ್ನು ತೋರಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:07 am, Sat, 7 February 26

Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!