AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ದಿನದಂದೇ ವಿವಾಹ ಆಗುತ್ತಿದ್ದಾರೆ ಆ್ಯಂಕರ್ ಅನುಶ್ರೀ; ಇಲ್ಲಿದೆ ವಿವರ

Anchor Anushree Wedding: ಪ್ರಸಿದ್ಧ ಕನ್ನಡ ಆಂಕರ್ ಅನುಶ್ರೀ ಅವರು ಆಗಸ್ಟ್ 28 ರಂದು ರೋಷನ್ ಅವರನ್ನು ವಿವಾಹವಾಗುತ್ತಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿರುವ ರೆಸಾರ್ಟ್‌ನಲ್ಲಿ ಈ ವಿವಾಹ ನಡೆಯಲಿದೆ. ಅವರ ಲಗ್ನಪತ್ರಿಕೆ ವೈರಲ್ ಆಗಿದ್ದು, ಕನ್ನಡ ಚಿತ್ರರಂಗದ ಹಲವು ಗಣ್ಯರು ಈ ಮದುವೆಗೆ ಆಗಮಿಸುವ ನಿರೀಕ್ಷೆ ಇದೆ.

ವಿಶೇಷ ದಿನದಂದೇ ವಿವಾಹ ಆಗುತ್ತಿದ್ದಾರೆ ಆ್ಯಂಕರ್ ಅನುಶ್ರೀ; ಇಲ್ಲಿದೆ ವಿವರ
ಅನುಶ್ರೀ
ರಾಜೇಶ್ ದುಗ್ಗುಮನೆ
|

Updated on: Aug 23, 2025 | 6:58 AM

Share

ನಟಿ ಅನುಶ್ರೀ (Anushree) ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಆಗಸ್ಟ್ 28ರಂದು ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದ ರೆಸಾರ್ಟ್ ಒಂದರಲ್ಲಿ ಈ ವಿವಾಹ ನೆರವೇರುತ್ತಿದೆ. ಆಪ್ತರು, ಕುಟುಂಬದವರು ಹಾಗೂ ಗೆಳೆಯರ ಸಮ್ಮುಖದಲ್ಲಿ ಈ ಮದುವೆ ನಡೆಯಲಿದೆ. ಅನುಶ್ರೀ ಅವರು ರೋಷನ್ ಅವರನ್ನು ವಿವಾಹ ಆಗುತ್ತಿದ್ದಾರೆ. ರೋಷನ್ ಕೊಡಗು ಮೂಲದವರು. ಅನುಶ್ರೀ ವಿವಾಹ ಆಗುತ್ತಿರುವ ದಿನಕ್ಕೆ ಒಂದು ವಿಶೇಷ ಇದೆ. ಅದಕ್ಕೆ ಕಾರಣ ಇಲ್ಲಿದೆ.

ಅನುಶ್ರೀ ಹಾಗೂ ರೋಷನ್ ಅವರದ್ದು ಪ್ರೇಮ ವಿವಾಹ ಎನ್ನಲಾಗಿದೆ. ಅವರು ಈ ಮೊದಲು ಪುನೀತ್ ಅವರ ಮನೆಯಲ್ಲಿ ಭೇಟಿ ಆದರು. ಆ ಬಳಿಕ ಇಬ್ಬರ ಮಧ್ಯೆ ಪರಿಚಯ ಬೆಳೆದು, ಪ್ರೀತಿ ಮೂಡಿತು. ಈಗ ಪರಸ್ಪರ ಮನೆಯವರ ಒಪ್ಪಿಗೆ ಪಡೆದು ಅವರು ವಿವಾಹ ಆಗುತ್ತಿದ್ದಾರೆ. ಸಂಭ್ರಮ ಬೈ ಸ್ಪಾನ್​ಲೈನ್ಸ್ ಸ್ಟುಡಿಯೋಸ್​ನಲ್ಲಿ ಈ ಮದುವೆ ನೆರವೇರುತ್ತಿದೆ.

ಅನುಶ್ರೀ ಅವರು ವಿವಾಹ ಆಗುತ್ತಿರುವ ದಿನ ವಿಶೇಷ ಆಗಿದೆ. ಏಕೆಂದರೆ ಅದು ಇಲಿ ಪಂಚಮಿ ದಿನ. ಗಣಪತಿ ಹಬ್ಬದ ಸಮಯದಲ್ಲೇ ಅನುಶ್ರೀ ಅವರು ಹಸೆಮಣೆ ಏರುತ್ತಿದ್ದಾರೆ ಅನ್ನೋದು ವಿಶೇಷ. ಸಾಮಾನ್ಯವಾಗಿ ವಿವಾಹಗಳನ್ನು ಹಬ್ಬದ ಸಂದರ್ಭದಲ್ಲಿ ಮಾಡುವುದಿಲ್ಲ. ಆದರೆ ಅನುಶ್ರೀ ಮಾತ್ರ ಇದಕ್ಕೆ ಭಿನ್ನ.

ಇದನ್ನೂ ಓದಿ
Image
‘ಸು ಫ್ರಮ್ ಸೋ’ ಹಂಚಿಕೆಗೆ ಸಹಾಯ ಮಾಡಿದ್ದ ದುಲ್ಖರ್ ​ ಋಣ ತೀರಿಸಿದ ರಾಜ್
Image
ನಟ ಚಿರಂಜೀವಿ ಅದೆಷ್ಟು ಶ್ರೀಮಂತ ನೋಡಿ; ಪ್ರೈವೆಟ್ ಜೆಟ್ ಒಡೆಯ
Image
ದಳಪತಿ ವಿಜಯ್ ಸಮಾವೇಶಕ್ಕೆ ಸೇರಿದ ಜನರ ಸಂಖ್ಯೆ ನೋಡಿ; ಅಬ್ಬಬ್ಬಾ ಇಷ್ಟೊಂದಾ
Image
ಸ್ಪರ್ಧಿಸೋ ಕ್ಷೇತ್ರದ ಹೆಸರು ಘೋಷಿಸಿದ ದಳಪತಿ ವಿಜಯ್; ಮೈತ್ರಿ ನಿಲುವೇನು?|

ಇದನ್ನೂ ಓದಿ: ನಿರೂಪಕಿ ಅನುಶ್ರೀ ಮದುವೆ: ಎಷ್ಟು ಸಿಂಪಲ್ ಆಗಿದೆ ನೋಡಿ ಆಹ್ವಾನ ಪತ್ರಿಕೆ

ಅನುಶ್ರೀ ಅವರು ಆ್ಯಂಕರ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ಅನುಶ್ರೀ ಅವರ ಲಗ್ನ ಪತ್ರಿಕೆ ವೈರಲ್ ಆಗಿದೆ. ‘ನೀವೆಲ್ಲ ಕೇಳುತ್ತಿದ್ದ ಪ್ರಶ್ನೆಗೆ ಈಗ ಉತ್ತರ, ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ’ ಎಂದು ಲಗ್ನ ಪತ್ರಿಕೆಯಲ್ಲಿ ಅನುಶ್ರೀ ಬರೆದಿದ್ದಾರೆ. ಅನುಶ್ರೀ ಅವರು ತಮ್ಮ ಲಗ್ನ ಪತ್ರಿಕೆಗಳನ್ನು ಎಲ್ಲಾ ಸೆಲೆಬ್ರಿಟಿಗಳಿಗೂ ನೀಡಿದ್ದಾರೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮದುವೆಗೆ ಹಾಜರಿ ಹಾಕುವ ನಿರೀಕ್ಷೆ ಇದೆ. ಅನುಶ್ರೀ ಅವರು ವಿವಾಹದ ಬಳಿಕವೂ ನಿರೂಪಣೆಯನ್ನು ಮುಂದುವರಿಸಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ