AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಕರ್ ಅನುಶ್ರೀ ಮದುವೆ ಆಗೋ ಹುಡುಗನ ಫೋಟೋ ವೈರಲ್

ಅನುಶ್ರೀ ಅವರ ವಿವಾಹದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಡಗು ಮೂಲದ ರೋಷನ್ ಎಂಬುವವರೊಂದಿಗೆ ಅವರ ವಿವಾಹ ಆಗಸ್ಟ್ 28 ರಂದು ನಡೆಯಲಿದೆ ಎನ್ನಲಾಗಿದೆ. ಅನುಶ್ರೀ ಮತ್ತು ರೋಷನ್ ಒಟ್ಟಿಗೆ ಇರುವ ಫೋಟೋಗಳು ವೈರಲ್ ಆಗಿದ್ದು, ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಆದರೆ, ಅನುಶ್ರೀ ಇನ್ನೂ ಈ ಸುದ್ದಿಯನ್ನು ಅಧಿಕೃತವಾಗಿ ಖಚಿತಪಡಿಸಿಲ್ಲ.

ಆ್ಯಂಕರ್ ಅನುಶ್ರೀ ಮದುವೆ ಆಗೋ ಹುಡುಗನ ಫೋಟೋ ವೈರಲ್
ಅನುಶ್ರೀ
ರಾಜೇಶ್ ದುಗ್ಗುಮನೆ
|

Updated on:Jul 18, 2025 | 10:48 AM

Share

ನಟಿ ಅನುಶ್ರೀ (Anushree) ಅವರು ವಿವಾಹ ರೋಷನ್ ಎಂಬ ಕೊಡಗು ಮೂಲದ ವ್ಯಕ್ತಿ ಜೊತೆ ನಡೆಯಲಿದೆ ಎಂಬ ಸುದ್ದಿ ವೈರಲ್ ಆಗಿತ್ತು. ಈ ಮೊದಲು ಕೂಡ ಇದೇ ರೀತಿಯ ಸುದ್ದಿ ಹರಿದಾಡಿದ್ದರಿಂದ ಇದನ್ನು ಅನೇಕರು ನಂಬಿರಲಿಲ್ಲ. ಆದರೆ, ಈಗ ಇದು ನಿಜ ಎಂಬುದು ಸಾಬೀತಾಗಿದೆ. ವಿವಾಹ ಆಗುವ ಹುಡುಗನ ಜೊತೆ ಅನುಶ್ರೀ ಅವರು ಇರೋ ಫೋಟೋ ವೈರಲ್ ಆಗಿದೆ. ಇದು ರೋಷನ್ ಎಂದು ಸೋಶಿಯಲ್ ಮೀಡಿಯಾದಲ್ಲಿ ಹೇಳಲಾಗುತ್ತಿದೆ.

ರೋಷನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಖಾತೆ ಹೊಂದಿದ್ದಾರೆ. ಅನುಶ್ರೀ ಅವರು ಇನ್​ಸ್ಟಾಗ್ರಾಮ್​ನಲ್ಲಿ ರೋಷನ್​ನ ಫಾಲೋ ಕೂಡ ಮಾಡುತ್ತಿದ್ದಾರೆ. ಆದರೆ, ಅವರು ಡಿಪಿಗೆ ತಮ್ಮ ಫೋಟೋನ ಹಾಕಿಲ್ಲ. ಒಂದು ನಾಯಿ ಮರಿ ಫೋಟೋ ಡಿಸ್ಪ್ಲೇನಲ್ಲಿ ಇದೆ. ಹೀಗಾಗಿ, ಅವರ ಗುರುತು ಯಾರಿಗೂ ಸಿಕ್ಕಿರಲಿಲ್ಲ. ಈಗ ರೋಷನ್ ಜೊತೆ ಅನುಶ್ರೀ ಇರೋ ಫೋಟೋ ವೈರಲ್ ಆಗಿದೆ.

Anushree

ಅನುಶ್ರೀ

ಕಾರ್ಯಕ್ರಮ ಒಂದರಲ್ಲಿ ಅನುಶ್ರೀ ಹಾಗೂ ರೋಷನ್ ಕಾಣಿಸಿಕೊಂಡಿದ್ದಾರೆ. ಪೂಜೆ ಮಾಡಿಸುವಾಗ ಕೆಲವರು ಇದರ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಎಲ್ಲ ಕಡೆಗಳಲ್ಲಿ ಇದು ವೈರಲ್ ಆಗಿದೆ. ಈ ಫೋಟೋ ಫ್ಯಾನ್ ಪೇಜ್​ಗಳಲ್ಲಿ ಹರಿದಾಡುತ್ತಿದೆ. ಈ ವಿಚಾರ ತಿಳಿದು ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ
Image
ಬರ್ತ್​ಡೇ ಗರ್ಲ್ ಪ್ರಿಯಾಂಕಾ ಚೋಪ್ರಾ ಎಷ್ಟು ಶ್ರೀಮಂತೆ ಗೊತ್ತಾ?
Image
ಸಿನಿಮಾ ರಿಲೀಸ್ ಸಂದರ್ಭದಲ್ಲೇ ಆಸ್ಪತ್ರೆಗೆ ದಾಖಲಾದ ವಿಜಯ್ ದೇವರಕೊಂಡ
Image
ಥಿಯೇಟರ್​ನಲ್ಲಿ ರಿಲೀಸ್ ಆದ ಒಂದೇ ದಿನಕ್ಕೆ ಈ ಥ್ರಿಲ್ಲರ್ ಚಿತ್ರ ಒಟಿಟಿಗೆ
Image
ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ 

ಆಗಸ್ಟ್ 28ರಂದು ಅನುಶ್ರೀ ಹಾಗೂ ರೋಷನ್ ವಿವಾಹ ನೆರವೇರಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಇನ್ನೂ ಈ ವಿಚಾರವನ್ನು ಅನುಶ್ರೀ ಅವರು ಅಧಿಕೃತ ಮಾಡಿಲ್ಲ. ಈ ಬಗ್ಗೆ ಅವರ ಕಡೆಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್  ಬಯಸುತ್ತಿದ್ದಾರೆ. ಶೀಘ್ರವೇ ಈ ಬಗ್ಗೆ ಸೋಶಿಯಲ್ ಮೀಡಿಯಾ ಮೂಲಕ ಅವರು ಮಾಹಿತಿ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಆ್ಯಂಕರ್ ಅನುಶ್ರೀ ಮದುವೆಗೆ ದಿನಾಂಕ ಫಿಕ್ಸ್? ಇದು ಪಕ್ಕಾ ಅರೇಂಜ್ ಮ್ಯಾರೇಜ್

ಅವರು ಕೊನೆಯದಾಗಿ ಜೀ ಕನ್ನಡದ ‘ಸರಿಗಮಪ’ ಆ್ಯಂಕರಿಂಗ್​ನಲ್ಲಿ ಕಾಣಿಸಿಕೊಂಡಿದ್ದರು. ಅವರು ಜೀ ಕನ್ನಡದ ಹಲವು ಶೋಗಳನ್ನು ನಿರೂಪಣೆ ಮಾಡುತ್ತಾರೆ. ಅವರು ಹೆದರದೆ, ಯಾವುದೇ ಸ್ಕ್ರಿಪ್ಟ್ ಇಲ್ಲದೆ ಕಾರ್ಯಕ್ರಮ ನಡೆಸಿಕೊಡುವಷ್ಟು ಸಾಮರ್ಥ್ಯ ಹೊಂದಿದ್ದಾರೆ. ಈ ಕಾರಣದಿಂದಲೇ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:42 am, Fri, 18 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ