AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾರ್ಟಿನ್​’ ಸಿನಿಮಾ ಬಜೆಟ್​ ಬಗ್ಗೆ ಅಚ್ಚರಿಯ ಮಾಹಿತಿ ನೀಡಿದ ಎ.ಪಿ. ಅರ್ಜುನ್​

ಆದಷ್ಟು ಬೇಗ ‘ಮಾರ್ಟಿನ್​’ ಸಿನಿಮಾವನ್ನು ನೋಡಬೇಕು ಎಂದು ಪ್ರೇಕ್ಷಕರು ಕಾದಿದ್ದಾರೆ. ಧ್ರುವ ಸರ್ಜಾ ಅವರ ಫ್ಯಾನ್ಸ್​ ತುಂಬ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬರೋಬ್ಬರಿ 240 ದಿನಗಳ ಕಾಲ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಇಷ್ಟು ಲೇಟ್​ ಆಗಲು ಕಾರಣ ಏನು ಎಂಬುದನ್ನು ನಿರ್ದೇಶಕ ಎ.ಪಿ. ಅರ್ಜುನ್​ ಅವರು ವಿವರಿಸಿದ್ದಾರೆ. ಅಲ್ಲದೇ ಬಜೆಟ್​ ಬಗ್ಗೆಯೂ ಅವರು ಮಾತನಾಡಿದ್ದಾರೆ.

‘ಮಾರ್ಟಿನ್​’ ಸಿನಿಮಾ ಬಜೆಟ್​ ಬಗ್ಗೆ ಅಚ್ಚರಿಯ ಮಾಹಿತಿ ನೀಡಿದ ಎ.ಪಿ. ಅರ್ಜುನ್​
ಎ.ಪಿ. ಅರ್ಜುನ್​, ಧ್ರುವ ಸರ್ಜಾ
ಮದನ್​ ಕುಮಾರ್​
|

Updated on: Mar 06, 2024 | 10:39 PM

Share

‘ಆ್ಯಕ್ಷನ್​ ಪ್ರಿನ್ಸ್​’ ಧ್ರುವ ಸರ್ಜಾ (Dhruva Sarja) ನಟನೆಯ ‘ಮಾರ್ಟಿನ್​’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಮೂಡಿದೆ. ಫಸ್ಟ್​ ಲುಕ್​ ರಿಲೀಸ್​ ಆದ ದಿನದಿಂದಲೂ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಅದ್ದೂರಿ ಬಜೆಟ್​ನಲ್ಲಿ ಉದಯ್​ ಕೆ. ಮೆಹ್ತಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅಷ್ಟಕ್ಕೂ ‘ಮಾರ್ಟಿನ್​’ ಸಿನಿಮಾದ (Martin Movie) ಬಜೆಟ್​ ಎಷ್ಟು? ಈ ಬಗ್ಗೆ ಎಲ್ಲರಲ್ಲೂ ಕೌತುಕ ಇದೆ. ಸದ್ಯಕ್ಕೆ ಈ ಸಿನಿಮಾದ ಶೂಟಿಂಗ್​ ಮುಗಿದಿದೆ. ಕೊನೇ ದಿನದ ಶೂಟಿಂಗ್​ ಮುಗಿಸಿದ ಬಳಿಕ ನಿರ್ದೇಶಕ ಎ.ಪಿ. ಅರ್ಜುನ್​ (AP Arjun) ಅವರು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಚಿತ್ರದ ಬಜೆಟ್​ ಬಗ್ಗೆಯೂ ಅವರು ಇಂಟರೆಸ್ಟಿಂಗ್​ ವಿಚಾರ ಹಂಚಿಕೊಂಡಿದ್ದಾರೆ.

‘ಈ ಸಿನಿಮಾ ಶುರುವಾಗಿ ಎರಡೂವರೆ ವರ್ಷ ಆಯಿತು. 240 ದಿನಗಳ ಕಾಲ ಶೂಟಿಂಗ್​ ಮಾಡಿದ್ದೇವೆ. ಎಷ್ಟು ದಿನ ಶೂಟಿಂಗ್​ ಮಾಡುತ್ತೀರಿ ಅಂತ ಎಲ್ಲರೂ ಕೇಳುತ್ತಿದ್ದರು. ಅದರಿಂದ ನನಗೆ ಮುಜುಗರ ಆಗುತ್ತಿತ್ತು. ಮಾರ್ಟಿನ್​ ಸಿನಿಮಾಗೆ ಇಷ್ಟು ದಿನ ಚಿತ್ರೀಕರಣ ಮಾಡಲಾಗುತ್ತೆ ಅಂತ ನಾನಾಗಲಿ, ನಿರ್ಮಾಪಕರಾಗಲಿ ಅಥವಾ ಧ್ರುವ ಸರ್ಜಾ ಅವರಾಗಲಿ ಊಹಿಸಿರಲಿಲ್ಲ’ ಎಂದು ಎ.ಪಿ. ಅರ್ಜುನ್​ ಹೇಳಿದ್ದಾರೆ.

ಇದನ್ನೂ ಓದಿ: ‘ನಾವೆಲ್ಲ ಸಾಯ್ತೀವಿ’: ತಂದೆ-ತಾಯಿಗೆ ಮೆಸೇಜ್​ ಕಳಿಸಿದ್ದ ‘ಮಾರ್ಟಿನ್​’ ಸಿನಿಮಾ ನಟಿ

‘ಮೊದಲಿಗೆ ಅಂದುಕೊಂಡ ಬಜೆಟ್​ ಬೇರೆ. 35ರಿಂದ 40 ಕೋಟಿ ರೂಪಾಯಿ ಬಜೆಟ್​ನಲ್ಲಿ ಮಾರ್ಟಿನ್​ ಸಿನಿಮಾ ಮಾಡಬೇಕು ಎಂದುಕೊಂಡಿದ್ದೆವು. ಹೋಗ್ತಾ ಹೋಗ್ತಾ 80-90 ದಿನಕ್ಕೆ ಆ ಬಜೆಟ್​ ತಲುಪಿತು. ಇದೊಂದು ಎಪಿಸೋಡ್​ ಚೆನ್ನಾಗಿ ಮಾಡೋಣ ಎಂದುಕೊಂಡು ಎಲ್ಲ ಎಪಿಸೋಡ್​ ದೊಡ್ಡದಾಗುತ್ತಲೇ ಹೋಯ್ತು. ಚೆನ್ನಾಗಿ ಮಾಡಬೇಕು ಎಂದಾಗ ಎಲ್ಲೋ ಒಂದು ಲೊಕೇಷನ್​ನಲ್ಲಿ ಶೂಟ್​ ಮಾಡೋಕೆ ಆಗಲ್ಲ. ಅದಕ್ಕೆ ಅದ್ದೂರಿ ಸೆಟ್​ ಹಾಕಬೇಕಾಯ್ತು’ ಎಂದು ಎ.ಪಿ. ಅರ್ಜುನ್​ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎ.ಪಿ. ಅರ್ಜುನ್​:

‘ಸೆಟ್​ ರೆಡಿ ಮಾಡಿದ ಬಳಿಕ ಬೇರೆ ಬೇರೆ ಅಡೆತಡೆ ಬಂದವು. 18ರಿಂದ 20 ರೀತಿಯ ಸೆಟ್​ ಹಾಕಿದ್ದೆವು. ನಾವು ಪ್ಲಾನ್​ ಮಾಡಿದಾಗ 20 ದಿನಕ್ಕೆ ಸೆಟ್​ ಕೆಲಸ ಮುಗಿಯಬಹುದು ಎಂದುಕೊಂಡಿರುತ್ತೇವೆ. ಆದರೆ ಅದು ಇನ್ನೂ ಹೆಚ್ಚಿನ ದಿನ ಬೇಡುತ್ತದೆ. ಇನ್ನೇನು ಶೂಟ್​ ಮಾಡಬೇಕು ಎಂದಾಗ ಮಳೆ ಬರುತ್ತದೆ. ಕ್ಲೈಮ್ಯಾಕ್ಸ್​ ದೃಶ್ಯವನ್ನು 25 ದಿನದಲ್ಲಿ ಶೂಟಿಂಗ್​ ಮಾಡಬೇಕು ಎಂದುಕೊಂಡಿದ್ವಿ. ಆದರೆ ಅದು 52 ದಿನ ಆಯ್ತು. 52 ದಿನದಲ್ಲಿ ಇಡೀ ಸಿನಿಮಾ ಚಿತ್ರೀಕರಣ ಮಾಡಬಹುದು ಅಂತ ಎಲ್ಲರೂ ಕಾಲೆಳೆದರು’ ಎಂದಿದ್ದಾರೆ ಎ.ಪಿ. ಅರ್ಜುನ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!