ಭಿನ್ನವಾಗಿದೆ ‘ಅಪರಿಚಿತ’ ಲಿರಿಕಲ್​ ಸಾಂಗ್​; ‘ಸಾರಾಂಶ’ ಚಿತ್ರದ ಬಗ್ಗೆ ಹೆಚ್ಚಿತು ಕುತೂಹಲ

‘ಅಪರಿಚಿತ..’ ಹಾಡಿಗೆ ಉದಿತ್ ಹರಿತಾಸ್ ಸಂಗೀತ ಸಂಯೋಜನೆ ಮಾಡಿದ್ದಾರೆ. ನಿರ್ದೇಶಕ ಸೂರ್ಯ ವಸಿಷ್ಠ ಅವರೇ ಸಾಹಿತ್ಯ ಬರೆದಿದ್ದಾರೆ. ಮಾಧುರಿ ಶೇಷಾದ್ರಿ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ‘ಸಾರಾಂಶ’ ಸಿನಿಮಾದ ಕಥೆಯ ಬಗ್ಗೆ ಸುಳಿವು ನೀಡುವಂತಹ ಸಾಲುಗಳು ಈ ಹಾಡಿನಲ್ಲಿವೆ. ಸಿನಿಮಾದ ಬಗ್ಗೆ ಕೌತುಕ ಹೆಚ್ಚಿಸಲು ಈ ಸಾಂಗ್​ ಸಹಕಾರಿ ಆಗಿದೆ.

ಭಿನ್ನವಾಗಿದೆ ‘ಅಪರಿಚಿತ’ ಲಿರಿಕಲ್​ ಸಾಂಗ್​; ‘ಸಾರಾಂಶ’ ಚಿತ್ರದ ಬಗ್ಗೆ ಹೆಚ್ಚಿತು ಕುತೂಹಲ
ದೀಪಕ್ ಸುಬ್ರಮಣ್ಯ, ಶ್ರುತಿ ಹರಿಹರನ್​

Updated on: Jan 21, 2024 | 3:49 PM

ಬಹುತೇಕ ಸಿನಿಮಾ ತಂಡಗಳು ಲಿರಿಕಲ್​ ಸಾಂಗ್​ಗಳನ್ನು ಪ್ರಸ್ತುತಪಡಿಸುವ ಶೈಲಿಯು ಹೆಚ್ಚು-ಕಡಿಮೆ ಒಂದೇ ರೀತಿ ಇರುತ್ತದೆ. ಅವುಗಳ ನಡುವೆ ಕೆಲವು ಚಿತ್ರತಂಡಗಳು ಮಾತ್ರ ವಿಶೇಷವಾಗಿ ಗುರುತಿಸಿಕೊಳ್ಳುತ್ತವೆ. ಸದ್ಯ ಕನ್ನಡದ ‘ಸಾರಾಂಶ’ ಸಿನಿಮಾ (Saramsha Movie) ಟೀಮ್​ ಕೂಡ ಡಿಫರೆಂಟ್​ ಆಗಿರುವ ಲಿರಿಕಲ್​ ವಿಡಿಯೋವನ್ನು ಜನರ ಮುಂದಿಟ್ಟಿದೆ. ಈ ಸಿನಿಮಾಗೆ ಸೂರ್ಯ ವಸಿಷ್ಠ ನಿರ್ದೇಶನ ಮಾಡುತ್ತಿದ್ದಾರೆ. ಈ ತಂಡದಿಂದ ‘ಅಪರಿಚಿತ..’ (Aparichitha) ಎಂಬ ಲಿರಿಕಲ್​ ಸಾಂಗ್​ ಬಿಡುಗಡೆ ಆಗಿದೆ. ಕನ್ನಡದ ಸಾಹಿತ್ಯ ಮತ್ತು ಅದಕ್ಕೆ ಇರುವ ಇಂಗ್ಲಿಷ್​ನ ಅರ್ಥವನ್ನು ಕೂಡ ಈ ಲಿರಿಕಲ್​ ವಿಡಿಯೋದಲ್ಲಿ ಬಿತ್ತರಿಸಲಾಗಿದೆ. ಒಟ್ಟಾರೆ ಇದರ ವಿನ್ಯಾಸ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಮೂರು ಹಾಡುಗಳು ಇರಲಿದ್ದು, ಮೊದಲ ಗೀತೆ ಈಗ ಬಿಡುಗಡೆ ಆಗಿದೆ.

ಒಂದು ವಿಶೇಷ ಪ್ರಯತ್ನವಾಗಿ ‘ಸಾರಾಂಶ’ ಚಿತ್ರ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ದೀಪಕ್ ಸುಬ್ರಮಣ್ಯ, ಶೃತಿ ಹರಿಹರನ್​, ಸೂರ್ಯ ವಸಿಷ್ಠ ಹಾಗೂ ಶ್ವೇತಾ ಗುಪ್ತ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರಾಮ್ ಮಂಜುನಾಥ್, ರವಿ ಭಟ್, ಪೃಥ್ವಿ ಬನವಾಸಿ, ಸತೀಶ್ ಕುಮಾರ್ ಮುಂತಾದ ಕಲಾವಿದರು ಕೂಡ ಈ ಚಿತ್ರದಲ್ಲಿ ಇದ್ದಾರೆ. ನಿರ್ದೇಶಕ ಸೂರ್ಯ ವಸಿಷ್ಠ ಹಾಗೂ ‘ಗಂಟುಮೂಟೆ’ ಖ್ಯಾತಿಯ ರೂಪಾ ರಾವ್ ಅವರು ಸಂಭಾಷಣೆ ಬರೆದಿದ್ದಾರೆ. ‘ಅಪರಿಚಿತ..’ ಹಾಡಿನಿಂದ ‘ಸಾರಾಂಶ’ ಸಿನಿಮಾ ನಿರೀಕ್ಷೆ ಮೂಡಿಸಿದೆ.

‘ಅಪರಿಚಿತ..’ ಹಾಡಿಗೆ ಉದಿತ್ ಹರಿತಾಸ್ (ಅಜ್ಞಾತ) ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಅಪರಿಚಿತ ಲಾಲಿ, ಹುಡುಕಿಹೆನು ನಿನ್ನಲಿ…’ ಎಂದು ಆರಂಭ ಆಗುವ, ಹೊಸತನದ ಫೀಲ್ ನೀಡುವ ಈ ಹಾಡನ್ನು ನಿರ್ದೇಶಕ ಸೂರ್ಯ ವಸಿಷ್ಠ ಅವರೇ ಬರೆದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದಿರುವ ಮಾಧುರಿ ಶೇಷಾದ್ರಿ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ‘ಸಾರಾಂಶ’ ಸಿನಿಮಾದ ಕಥೆಯ ಬಗ್ಗೆ ಸುಳಿವು ನೀಡುವಂತಹ ಸಾಲುಗಳು ಈ ಹಾಡಿನಲ್ಲಿವೆ. ಸಿನಿಮಾದ ಬಗ್ಗೆ ಕೌತುಕ ಹೆಚ್ಚಿಸಲು ಈ ಸಾಂಗ್​ ಸಹಕಾರಿ ಆಗಿದೆ.

ಇದನ್ನೂ ಓದಿ: ‘ಜರ್ನಿ ಆಫ್ ಬೆಳ್ಳಿ’: ಕನ್ನಡ ಚಿತ್ರರಂಗಕ್ಕೆ ಮತ್ತೋರ್ವ ನಿರ್ದೇಶಕಿ ಆಗಮನ

ಅಪರಾಜಿತ್ ಅವರು ಈ ಸಿನಿಮಾಗೆ ಹಿನ್ನೆಲೆ ಸಂಗೀತ ನೀಡಿದ್ದಾರೆ. ಪ್ರದೀಪ್ ನಾಯಕ್ ಸಂಕಲನ ಮಾಡುತ್ತಿದ್ದಾರೆ. ‘ವಿಭಾ ಕಶ್ಯಪ್ ಪ್ರೊಡಕ್ಷನ್ಸ್’ ಮತ್ತು ‘ಕ್ಲ್ಯಾಪ್​ಬೋರ್ಡ್ ಪ್ರೊಡಕ್ಷನ್’ ಮೂಲಕ ರವಿ ಕಶ್ಯಪ್ ಮತ್ತು ಆರ್.ಕೆ. ನಲ್ಲಮ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಬಹುತೇಕ ಕೆಲಸಗಳು ಮುಕ್ತಾಯ ಆಗಿವೆ. ಸಿನಿಮಾದ ಬಿಡುಗಡೆಗೆ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us