AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರ್ಣಾ ಫ್ಯಾನ್ಸ್​ಗೆ ಗುಡ್ ನ್ಯೂಸ್; ಶೀಘ್ರವೇ ಬರಲಿದೆ ಅವರ ನಟನೆಯ ‘ಗ್ರಾಮಾಯಣ’ ಸಿನಿಮಾ

ಅಪರ್ಣಾ ಅವರ ಕೊನೆಯ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಇತ್ತು. ಅದಕ್ಕೆ ಉತ್ತರ ಸಿಕ್ಕಿದೆ. ‘ಗ್ರಾಮಾಯಣ’ ಅವರ ನಟನೆಯ ಕೊನೆಯ ಸಿನಿಮಾ ಆಗಲಿದೆ. ಈಗಾಗಲೇ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ಈ ಬಗ್ಗೆ ನಿರ್ದೇಶಕ ಚಂದ್ರು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾ ಬಗ್ಗೆ ಪ್ರಮುಖ ಅಪ್​ಡೇಟ್ ನೀಡಿದ್ದಾರೆ.

ಅಪರ್ಣಾ ಫ್ಯಾನ್ಸ್​ಗೆ ಗುಡ್ ನ್ಯೂಸ್; ಶೀಘ್ರವೇ ಬರಲಿದೆ ಅವರ ನಟನೆಯ ‘ಗ್ರಾಮಾಯಣ’ ಸಿನಿಮಾ
ಗ್ರಾಮಾಯಣದಲ್ಲಿ ಅಪರ್ಣಾ ಲುಕ್
ರಾಜೇಶ್ ದುಗ್ಗುಮನೆ
|

Updated on:Jul 16, 2024 | 1:16 PM

Share

ನಟಿ, ನಿರೂಪಕಿ ಅಪರ್ಣಾ ಅವರು ಇತ್ತೀಚೆಗೆ ನಿಧನ ಹೊಂದಿದರು. ಅವರು ಕೆಲವು ವರ್ಷಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅವರು ನಿಧನ ಹೊಂದಿದ್ದು ಅನೇಕರಿಗೆ ಶಾಕಿಂಗ್ ಎನಿಸಿದೆ. ಅಪರ್ಣಾ ಅವರು ಚಿತ್ರರಂಗದ ಜೊತೆ ಒಳ್ಳೆಯ ನಂಟು ಹೊಂದಿದ್ದರು. ವಿಶೇಷ ಎಂದರೆ ಅವರು ‘ಗ್ರಾಮಾಯಣ’ ಸಿನಿಮಾದಲ್ಲಿ ನಟಿಸಿದ್ದಾರೆ. ವಿನಯ್ ರಾಜ್​ಕುಮಾರ್ ಅವರ ತಾಯಿ ಪಾತ್ರದಲ್ಲಿ ಅಪರ್ಣಾ ಕಾಣಿಸಿಕೊಂಡಿದ್ದಾರೆ. ಇದು ಅವರು ಬಣ್ಣ ಹಚ್ಚಿದ ಕೊನೆಯ ಸಿನಿಮಾ. ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿಲ್ಲ ಎನ್ನುವ ಮಾತಿತ್ತು. ಇದಕ್ಕೆ ಸ್ಪಷ್ಟನೆ ಸಿಕ್ಕಿದೆ. ಈ ಚಿತ್ರದ ನಿರ್ದೇಶಕ ದೇವನೂರು ಚಂದ್ರು ಅವರು ‘ಟಿವಿ9 ಕನ್ನಡ ಡಿಜಿಟಲ್’ ಜೊತೆ ಮಾತನಾಡಿದ್ದಾರೆ.

‘ಅಪರ್ಣಾ ಅವರ ಪಾತ್ರದ ಶೂಟಿಂಗ್ ಪೂರ್ಣಗೊಂಡಿದೆ. ಆದರೆ, ಡಬ್ಬಿಂಗ್ ಆಗಿಲ್ಲ. ಶೂಟ್ ಮಾಡಿದ ದೃಶ್ಯಗಳಲ್ಲಿ ಅವರ ಧ್ವನಿ ಸ್ಪಷ್ಟವಾಗಿ ರೆಕಾರ್ಡ್ ಆಗಿದೆ. ಈಗಿನ ತಂತ್ರಜ್ಞಾನ ಬಳಸಿ ಅದನ್ನೇ ಬಳಕೆ ಮಾಡಲು ನಿರ್ಧರಿಸಿದ್ದೇವೆ. ಪಾತ್ರದ ಬಗ್ಗೆ ಹೆಚ್ಚಿನದ್ದು ರಿವೀಲ್ ಮಾಡೋಕೆ ಆಗಲ್ಲ. ಅವರು ವಿನಯ್ ರಾಜ್​ಕುಮಾರ್ ತಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಮಾತ್ರ ಹೇಳಬಹುದು. ಅವರು ಈ ಸಿನಿಮಾದಲ್ಲಿ ದೇವನೂರು ಭಾಷೆ ಮಾತನಾಡಿದ್ದಾರೆ’ ಎನ್ನುತ್ತಾರೆ ಚಂದ್ರು.

ಅಪರ್ಣಾಗೆ ನಟಿಸಬೇಕು ಎನ್ನುವ ಆಸೆ ಇತ್ತು. ಆದರೆ, ಯಾವುದೂ ಒಳ್ಳೆಯ ಕಥೆ ಬಂದಿರಲಿಲ್ಲ. ಆದರೆ, ‘ಗ್ರಾಮಾಯಣ’ ಅವರಿಗೆ ಸಾಕಷ್ಟು ಇಷ್ಟ ಆಗಿತ್ತು. ‘ಅಪರ್ಣಾ ಅವರು ಇದೇ ಪಾತ್ರ ಮಾಡಬೇಕು ಎಂದು ನಾನು ಬಯಸಿದ್ದೆ. ನಾನು ಹೋಗಿ ಪಾತ್ರದ ಬಗ್ಗೆ ಹೇಳಿದೆ. ಅವರಿಗೆ ಇಷ್ಟ ಆಯಿತು. ಆ ಬಳಿಕ ಕಥೆ ಹೇಳಿದೆ. ಅವರು ಮತ್ತಷ್ಟು ಇಷ್ಟಪಟ್ಟರು. ಸಂಪೂರ್ಣ ಸ್ಕ್ರಿಪ್ಟ್ ಪಡೆದು ಅವರು ಓದಿದರು. ಅವರು ತುಂಬಾನೇ ತೊಡಗಿಸಿಕೊಂಡರು’ ಎಂದಿದ್ದಾರೆ ಅವರು.

ಇದನ್ನೂ ಓದಿ: ನನ್ನ ಈ ಮುಖ ಯಾರಿಗೂ ತಿಳಿಯುವುದು ಬೇಡ ಎಂದಿದ್ದರು ಅಪರ್ಣಾ

‘ಒಳ್ಳೆಯ ಜೀವ ಅವರದ್ದು. ಇದನ್ನು ಒಂದು ಮಾತಲ್ಲಿ ಹೇಳೋಕೆ ಆಗಲ್ಲ. ಅವರು ಇಲ್ಲ ಎಂಬುದನ್ನು ಇವತ್ತೂ ನಂಬೋಕೆ ಆಗಲ್ಲ. ಶೂಟಿಂಗ್ ಮುಗಿದಿಲ್ಲ ಎನ್ನುವ ಸುದ್ದಿ ಅನೇಕ ಕಡೆಗಳಲ್ಲಿ ಇದೆ. ಆದರೆ, ಅದು ಸುಳ್ಳು. ಅವರದ್ದೇ ಧ್ವನಿ ಉಳಿಸಿಕೊಳ್ಳುವ ಸವಾಲೊಂದು ನಮ್ಮ ಮುಂದಿದೆ’ ಎನ್ನುತ್ತಾರೆ ಚಂದ್ರು. ಈ ಮೊದಲು ‘ಗ್ರಾಮಾಯಣ’ ಸಿನಿಮಾ ಅರ್ಧಕ್ಕೆ ನಿಂತಿತ್ತು. ಆಗ ಅಪರ್ಣಾ ಅವರು ಚಂದ್ರು ಬೆಂಬಲಕ್ಕೆ ನಿಂತಿದ್ದರಂತೆ. ಮಾರಲ್ ಸಪೋರ್ಟ್​ನ ಅವರು ನೀಡಿದ್ದರು. ಸಣ್ಣ ಪುಟ್ಟ ಶೂಟ್​ಗಳು ಬಾಕಿ ಉಳಿದಿದೆ. ಅದನ್ನು ಮುಗಿಸಿ ಶೀಘ್ರವೇ ತೆರೆಮೇಲೆ ಬರೋ ಆಲೋಚನೆ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:07 pm, Tue, 16 July 24

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು