AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋಗೆ ಧ್ವನಿ ಆಗಿದ್ದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ; ಕ್ಯಾನ್ಸರ್​ನಿಂದ ನಿಧನ

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿರೂಪಣೆ ಮಾತ್ರವಲ್ಲದೇ ನಟನೆ ಮೂಲಕವೂ ಅಪರ್ಣಾ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದರು.

ನಮ್ಮ ಮೆಟ್ರೋಗೆ ಧ್ವನಿ ಆಗಿದ್ದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ; ಕ್ಯಾನ್ಸರ್​ನಿಂದ ನಿಧನ
ಅಪರ್ಣಾ
ಮದನ್​ ಕುಮಾರ್​
|

Updated on:Jul 11, 2024 | 10:49 PM

Share

ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಅವರು ನಿಧನರಾಗಿದ್ದಾರೆ. ಕ್ಯಾನ್ಸರ್​​ನಿಂದ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್​ಮೆಂಟ್​ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.

ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ಅವರು ನಿರೂಪಿಸಿದರು. ನಂತರ ಭಾರತ ಸರ್ಕಾರದ ‘ವಿವಿಧ ಭಾರತಿ’ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಸತತ ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಇದನ್ನೂ ಓದಿ: ‘ಬಾಗಿಲುಗಳು ಎಡಕ್ಕೆ ತೆರೆಯುತ್ತವೆ..’: ಮೆಟ್ರೋ ರೈಲಿನಲ್ಲಿ ಕೇಳಿಸುವ ಅಪರ್ಣಾ ಧ್ವನಿಯ ಹಿಂದಿದೆ ಜವಾಬ್ದಾರಿಯ ಕಥೆ

ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್​ನಲ್ಲಿ ಅವರು ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಎಂಬ ಪಾತ್ರವನ್ನು ಅಪರ್ಣಾ ಮಾಡಿದ್ದರು.

ಬೆಂಗಳೂರಿನ ‘ನಮ್ಮ ಮೆಟ್ರೋ’ ರೈಲಿನಲ್ಲಿ ಕೇಳಿಬರುವ ಪ್ರಯಾಣಿಕರ ಸೂಚನೆಗಳಿಗೆ ಅಪರ್ಣಾ ಧ್ವನಿ ನೀಡಿದ್ದರು. ಆ ಮೂಲಕ ಅವರು ಜನರಿಗೆ ಇನ್ನಷ್ಟು ಹತ್ತಿರ ಆಗಿದ್ದರು. ಪುಟ್ಟಣ್ಣ ಕಣಗಾಲ್​ ನಿರ್ದೇಶನದ ‘ಮಸಣದ ಹೂವು’ ಸಿನಿಮಾ ಮೂಲಕ ಅಪರ್ಣಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಅವರು ಕೊನೆಯದಾಗಿ ನಟಿಸಿದ್ದ ‘ಗ್ರೇ ಗೇಮ್ಸ್​’ ಸಿನಿಮಾ ಇತ್ತೀಚೆಗೆ ತೆರೆಕಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:39 pm, Thu, 11 July 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ