AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay: ಚಿಕಿತ್ಸೆಗೆ ನಟ ಸಂಚಾರಿ ವಿಜಯ್ ಸ್ಪಂದಿಸುತ್ತಿಲ್ಲ; ಅಪೋಲೋ ವೈದ್ಯ ಅರುಣ್ ನಾಯ್ಕ್ ಮಾಹಿತಿ

Sanchari Vijay Health Updates: ಚೇತರಿಕೆ ಪ್ರಾಮಾಣ ಕಡಿಮೆಯಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ವಿಜಯ ಕುಟುಂಬಸ್ಥರು ಆಸ್ಪತ್ರೆಯತ್ತ ಇದ್ದಾರೆ. ಮೆದುಳಿನ ಭಾಗಕ್ಕೆ ಗಂಭೀರ ಪೆಟ್ಟು ಹಿನ್ನೆಲೆ ವಿಜಯ್ ಕೋಮಾದಲ್ಲಿದ್ದಾರೆ.

Sanchari Vijay: ಚಿಕಿತ್ಸೆಗೆ ನಟ ಸಂಚಾರಿ ವಿಜಯ್ ಸ್ಪಂದಿಸುತ್ತಿಲ್ಲ; ಅಪೋಲೋ ವೈದ್ಯ ಅರುಣ್ ನಾಯ್ಕ್ ಮಾಹಿತಿ
ನಟ ಸಂಚಾರಿ ವಿಜಯ್
Follow us
TV9 Web
| Updated By: sandhya thejappa

Updated on:Jun 14, 2021 | 10:52 AM

ಬೆಂಗಳೂರು: ಬೈಕ್ ಅಪಘಾತದಲ್ಲಿ ಗಂಭೀರಗೊಂಡಿದ್ದ ನಟ ಸಂಚಾರಿ ವಿಜಯ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಕ್ಷಣ ಕ್ಷಣಕ್ಕೂ ನಟ ವಿಜಯ್ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿದೆ. ಚಿಕಿತ್ಸೆಗೆ ನಟ ಸ್ಪಂದಿಸುತ್ತಿಲ್ಲ. ಚೇತರಿಕೆ ಪ್ರಾಮಾಣ ಕಡಿಮೆಯಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ವಿಜಯ ಕುಟುಂಬಸ್ಥರು ಆಸ್ಪತ್ರೆಯತ್ತ ಇದ್ದಾರೆ. ಮೆದುಳಿನ ಭಾಗಕ್ಕೆ ಗಂಭೀರ ಪೆಟ್ಟು ಹಿನ್ನೆಲೆ ವಿಜಯ್ ಕೋಮಾದಲ್ಲಿದ್ದಾರೆ. ಮೆದುಳಿನ ಭಾಗದಲ್ಲಿ ಗಂಭೀರ ರಕ್ತಸ್ರಾವಚಾಗಿದ್ದು, ಐಸಿಯು ಪುಲ್ ಲೈಪ್ ಸಪೂರ್ಟ್​ನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಚಿಕಿತ್ಸೆಗೆ ನಟ ಸ್ಪಂದಿಸುತ್ತಿಲ್ಲ ಎಂದು ಅಪೋಲೋ ವೈದ್ಯ ಅರುಣ್ ನಾಯ್ಕ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, 48 ಗಂಟೆಯೊಳಗೆ ಚೇತರಿಕೆ ಕಂಡರೆ ಸಮಸ್ಯೆ ಇಲ್ಲ. ಈ ವಿಷಯ ವಿಜಯ್ ಅವರ ಕುಟುಂಬಕ್ಕೆ ತಿಳಿಸಿದ್ದೇವೆ. 11.30ಕ್ಕೆ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ನ್ಯೂರೋ ಸರ್ಜನ್ ಡಾ.ಅರುಣ್ ನಾಯಕ್ ತಿಳಿಸಿದ್ದಾರೆ.

ಸಹಾಯಹಸ್ತ ಚಾಚಿದ ಸುದೀಪ್ ಜೂನ್ 12ರ ರಾತ್ರಿ ನಟ ಸಂಚಾರಿ ವಿಜಯ್​ಗೆ ಬನ್ನೇರುಘಟ್ಟ ರಸ್ತೆಯಲ್ಲಿ ಅಪಘಾತವಾಗಿತ್ತು. ತಕ್ಷಣ ಅಪೋಲೋ ಆಸ್ಪತ್ರೆಗೆ ಕರೆತರಲಾಯಿತು. ಆಸ್ಪತ್ರೆಗೆ ಕರೆದುಕೊಂಡು ಬಂದಾಗಲೇ ನಟನ ಸ್ಥಿತಿ ಗಂಭೀರವಾಗಿತ್ತು. ಈ ವಿಷಯ ತಿಳಿದ ಕಿಚ್ಚ ಸುದೀಪ್ ಸಹಾಯಹಸ್ತ ಚಾಚಿದ್ದಾರೆ. ನಟ ಸುದೀಪ್ ಅಪೋಲೋ ಆಸ್ಪತ್ರೆ ವೈದ್ಯರಿಗೆ ಕರೆಮಾಡಿ ಶಸ್ತ್ರ ಚಿಕಿತ್ಸೆ ಮಾಡುವಂತೆ ಮನವಿ ಮಾಡಿದ್ದಾರೆ. ಸದ್ಯ ನಟ ಸಂಚಾರಿ ವಿಜಯ್ ಬೇಗ ಗುಣಮುಖರಾಗಲಿ ಎಂದು ಚಿತ್ರರಂಗ, ಸ್ನೇಹಿತರು, ಅಭಿಮಾನಿಗಳು ಮತ್ತು ಕುಟುಂಬಸ್ಥರು ಪ್ರಾರ್ಥನೆ ಮಾಡುತ್ತಿದ್ದಾರೆ.

ಇದನ್ನೂ ಓದಿ

Sanchari Vijay: ಸಂಚಾರಿ ವಿಜಯ್ ಅಪಘಾತದ ಸುದ್ದಿ ತಿಳಿದ ತಕ್ಷಣ ಸಹಾಯ ಮಾಡಿದ ಸುದೀಪ್; ಕೂಡಲೇ ನಡೆಯಿತು ಸರ್ಜರಿ

ಸಂಚಾರಿ ವಿಜಯ್​ ಕೋಮಾದಲ್ಲೇ ಇದ್ದಾರೆ, ಆರೋಗ್ಯ ಸ್ಥಿತಿ ಗಂಭೀರವಾಗಿದೆ: ವೈದ್ಯರ ಮಾಹಿತಿ

(Apollo hospital doctor said actor Vijay was not responding to treatment)

Published On - 10:35 am, Mon, 14 June 21

VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!