AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Apoorva Bharadwaj: ಹಿರಿದಾಗುತ್ತಿದೆ ‘ಬ್ಯಾಡ್’ ಸಿನಿಮಾದ ಪಾತ್ರವರ್ಗ; ಪಿ.ಸಿ. ಶೇಖರ್​ ನಿರ್ದೇಶನದ ಚಿತ್ರಕ್ಕೆ ಅಪೂರ್ವಾ ಭಾರದ್ವಾಜ್ ಎಂಟ್ರಿ

Bad Kannada movie: ‘ಈ ಮೊದಲು ಅಪೂರ್ವಾ ನಟಿಸಿದ್ದ ಧಾರಾವಾಹಿ ಮತ್ತು ಚಿತ್ರಗಳನ್ನು ನೋಡಿದ್ದೆ. ಅವರೇ ಈ ಪಾತ್ರಕ್ಕೆ ಹೊಂದಿಕೆ ಆಗುತ್ತಾರೆ ಅಂತ ಆಯ್ಕೆ ಮಾಡಿಕೊಂಡೆವು’ ಎಂದು ನಿರ್ದೇಶಕ ಪಿ.ಸಿ. ಶೇಖರ್​ ಹೇಳಿದ್ದಾರೆ.

Apoorva Bharadwaj: ಹಿರಿದಾಗುತ್ತಿದೆ ‘ಬ್ಯಾಡ್’ ಸಿನಿಮಾದ ಪಾತ್ರವರ್ಗ; ಪಿ.ಸಿ. ಶೇಖರ್​ ನಿರ್ದೇಶನದ ಚಿತ್ರಕ್ಕೆ ಅಪೂರ್ವಾ ಭಾರದ್ವಾಜ್ ಎಂಟ್ರಿ
ಅಪೂರ್ವಾ ಭಾರದ್ವಾಜ್
ಮದನ್​ ಕುಮಾರ್​
|

Updated on: Jul 25, 2023 | 6:05 PM

Share

ಕನ್ನಡದ ‘ಬ್ಯಾಡ್​’ (Bad movie) ಸಿನಿಮಾಗೆ ಪಿ.ಸಿ. ಶೇಖರ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ ಗಮನ ಸೆಳೆಯುತ್ತಿದೆ. ಕಾಮ, ಕ್ರೋಧ, ಮತ್ಸರ ಮುಂತಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ 6 ಪಾತ್ರಗಳು ಈ ಸಿನಿಮಾದಲ್ಲಿ ಇರಲಿವೆ ಎಂದು ಚಿತ್ರತಂಡದವರು ಈ ಮೊದಲೇ ತಿಳಿಸಿದ್ದರು. ‘ಪ್ರೀತಿಯ ರಾಯಭಾರಿ’ ಖ್ಯಾತಿಯ ನಕುಲ್​ ಗೌಡ, ಮಾನ್ವಿತಾ ಕಾಮತ್​ (Manvitha Kamath) ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿರುವ ಬಗ್ಗೆ ಈಗಾಗಲೇ ಮಾಹಿತಿ ಸಿಕ್ಕಿತ್ತು. ಈಗ ಈ ಚಿತ್ರದಲ್ಲಿನ ಮತ್ತೋರ್ವ ಕಲಾವಿದೆಯನ್ನು ಪರಿಚಯಿಸಲಾಗಿದೆ. ನಟಿ ಅಪೂರ್ವಾ ಭಾರದ್ವಾಜ್​ (Apoorva Bharadwaj) ಕೂಡ ‘ಬ್ಯಾಡ್​’ ಸಿನಿಮಾ ತಂಡವನ್ನು ಸೇರಿಕೊಂಡಿದ್ದಾರೆ.

ಕನ್ನಡ ಕಿರುತೆರೆಯ ಅನೇಕ ಫೇಮಸ್​ ಧಾರಾವಾಹಿಗಳಲ್ಲಿ ಅಪೂರ್ವಾ ಭಾರದ್ವಾಜ್​ ನಟಿಸಿದ್ದಾರೆ. ಆ ಮೂಲಕ ಅವರು ಜನರಿಗೆ ಪರಿಚಿತರಾಗಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘ನಾನು, ಅದು ಮತ್ತು ಸರೋಜ’ ಸಿನಿಮಾದಲ್ಲಿ ಅಪೂರ್ವಾ ನಟಿಸಿದ್ದರು. ಈಗ ಅವರಿಗೆ ‘ಬ್ಯಾಡ್​’ ಸಿನಿಮಾದಲ್ಲೂ ನಟಿಸುವ ಅವಕಾಶ ಸಿಕ್ಕಿದೆ. ಅವರ ಪಾತ್ರ ಇಂಟರೆಸ್ಟಿಂಗ್​ ಆಗಿದೆ. ಕಾಮವನ್ನು ಪ್ರತಿನಿಧಿಸುವ ಅನು ಎಂಬ ಪಾತ್ರಕ್ಕೆ ಅವರು ಬಣ್ಣ ಹಚ್ಚುತ್ತಿದ್ದಾರೆ. ಸಾಯಿ ಕೃಷ್ಣ, ಅಶ್ವಿನಿ, ಮಂಜುನಾಥ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ‘BAD’ ಸಿನಿಮಾದಲ್ಲಿ ನಟಿ ಮಾನ್ವಿತಾ ಕಾಮತ್; ಯಾವುದಕ್ಕೂ ಅಂಜದ ಬೋಲ್ಡ್​ ಹುಡುಗಿ ಪಾತ್ರ

‘ಸಣ್ಣ ವಯಸ್ಸಿನಲ್ಲೇ ಅಮ್ಮನನ್ನು ಕಳೆದುಕೊಂಡ ಹುಡುಗಿಯ ಪಾತ್ರ ಇದು. ಅಪ್ಪನ ಆಸರೆಯಲ್ಲಿ ಆಕೆ ಬೆಳೆಯುತ್ತಾಳೆ. ತಾಯಿಯ ಪ್ರೀತಿಯನ್ನು ಕಾಣದ ಈ ಅನು ಎಂಬ ಹುಡುಗಿಗೆ ಜನರ ಬಳಿ ಪ್ರೀತಿಯನ್ನು ಹೇಗೆ ವ್ಯಕ್ತಪಡಿಸಬೇಕು ಎಂಬುದು ತಿಳಿದಿರುವುದಿಲ್ಲ. ಇಂಥ ಪಾತ್ರಕ್ಕೆ ಡೈಲಾಗ್​ ಕಡಿಮೆ. ಕಣ್ಣಿನಲ್ಲೇ ಎಲ್ಲ ಭಾವನೆಗಳನ್ನು ವ್ಯಕ್ತಪಡಿಸುವ ಪಾತ್ರವಿದು. ಗುಂಗುರು ಕೂದಲು ಹೊಂದಿರುವ ಸಹಜ ಸುಂದರಿಯ ರೀತಿ ಕಾಣುವ ನಟಿ ಬೇಕಿತ್ತು. ಅಪೂರ್ವಾ ನಟಿಸಿದ್ದ ಧಾರಾವಾಹಿ ಮತ್ತು ಚಿತ್ರಗಳನ್ನು ನೋಡಿದ್ದೆ. ಅವರೇ ಈ ಪಾತ್ರಕ್ಕೆ ಹೊಂದಿಕೆ ಆಗುತ್ತಾರೆ ಅಂತ ಆಯ್ಕೆ ಮಾಡಿಕೊಂಡೆವು’ ಎಂದಿದ್ದಾರೆ ನಿರ್ದೇಶಕ ಪಿ.ಸಿ. ಶೇಖರ್​.

ಇದನ್ನೂ ಓದಿ: Ashwini Puneeth Rajkumar: ಸಿನಿಮಾ ಮಾಡಲು ಕಾದಂಬರಿ ಓದುತ್ತಿರುವ ಅಶ್ವಿನಿ; ಪಾರ್ವತಮ್ಮ ಸಾಗಿದ ಹಾದಿಯಲ್ಲಿ ದೊಡ್ಮನೆ ಸೊಸೆಯ ಸಿನಿಪಯಣ

ಪಿಂಕ್​ ಶೇಡ್​ನಲ್ಲಿ ಈ ಪಾತ್ರವನ್ನು ನಿರ್ದೇಶಕರು ಚಿತ್ರಿಸಿದ್ದಾರೆ. ಎಸ್.ಆರ್. ವೆಂಕಟೇಶ್ ಗೌಡ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಅರ್ಜುನ್ ಜನ್ಯ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಶಕ್ತಿ ಶೇಖರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸಚಿನ್ ಬಿ. ಹೊಳಗುಂಡಿ ಅವರು ‘ಬ್ಯಾಡ್​’ ಸಿನಿಮಾಗೆ ಸಂಭಾಷಣೆ ಬರೆದಿದ್ದಾರೆ. ಜಿ. ರಾಜಶೇಖರ್ ಅವರು ಕಲಾ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ