Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಸಿಂಹದ ಮರಿ’; ‘ಅಪ್ಪು’ 100ನೇ ದಿನದ ಸೆಲೆಬ್ರೇಷನ್​ನಲ್ಲಿ ರಜನಿ ಮಾತು; ಇಲ್ಲಿದೆ ಹಳೆಯ ವಿಡಿಯೋ

‘ಅಪ್ಪು’ 100ನೇ ದಿನದ ಸಂಭ್ರಮಾಚರಣೆ ವೇಳೆ ಪುನೀತ್ ರಾಜ್​​ಕುಮಾರ್ ಅವರು ರಜನಿಕಾಂತ್ ಅವರ ಆಶೀರ್ವಾದ ಪಡೆದಿದ್ದರು. ವೇದಿಕೆ ಮೇಲೆ ರಾಘವೇಂದ್ರ ರಾಜ್​ಕುಮಾರ್, ಶಿವರಾಜ್​ಕುಮಾರ್ ಹಾಗೂ ಪುನೀತ್ ಡ್ಯಾನ್ಸ್ ಮಾಡಿದ್ದರು. ‘ಎಲ್ಲರಿಗೂ ನಮಸ್ಕಾರ. ಕಾರ್ಯಕ್ರಮವನ್ನು ಇಷ್ಟು ಅದ್ದೂರಿಯಾಗಿ ಆಚರಿಸಿದ್ದಕ್ಕೆ ಧನ್ಯವಾದ’ ಎಂದಿದ್ದರು ರಾಜ್​ಕುಮಾರ್.

‘ಇದು ಸಿಂಹದ ಮರಿ’; ‘ಅಪ್ಪು’ 100ನೇ ದಿನದ ಸೆಲೆಬ್ರೇಷನ್​ನಲ್ಲಿ ರಜನಿ ಮಾತು; ಇಲ್ಲಿದೆ ಹಳೆಯ ವಿಡಿಯೋ
‘ಇದು ಸಿಂಹದ ಮರಿ’; ‘ಅಪ್ಪು’ 100ನೇ ದಿನದ ಸೆಲೆಬ್ರೇಷನ್​ನಲ್ಲಿ ರಜನಿ ಮಾತು; ಇಲ್ಲಿದೆ ಹಳೆಯ ವಿಡಿಯೋ
Follow us
ರಾಜೇಶ್ ದುಗ್ಗುಮನೆ
|

Updated on:Mar 13, 2025 | 7:02 AM

ಪುನೀತ್ ರಾಜ್​ಕುಮಾರ್ ನಮ್ಮ ಜೊತೆ ಇಲ್ಲ. ಆದರೆ, ಅವರು ಮಾಡಿದ ಸಿನಿಮಾಗಳು, ಅವರ ನಗು ಎಂದಿಗೂ ಮಾಸುವುದಿಲ್ಲ. ಈಗ ಅವರ ಜನ್ಮದಿನ (ಮಾರ್ಚ್ 17) ಸಮೀಪಿಸಿದೆ. ಈ ಕಾರಣಕ್ಕೆ ಶುಕ್ರವಾರ (ಮಾರ್ಚ್ 14) ‘ಅಪ್ಪು’ ಸಿನಿಮಾ ರೀ-ರಿಲೀಸ್ ಆಗುತ್ತಿದೆ. ಪುನೀತ್ (Puneeth Rajkumar) ಹೀರೋ ಆಗಿ ನಟಿಸಿದ ಈ ಚಿತ್ರ ಶತದಿನೋತ್ಸವವನ್ನು ಆಚರಿಸಿಕೊಂಡಿತ್ತು. ಪುನೀತ್ ಅವರು ಜನರಿಗೆ ಮತ್ತಷ್ಟು ಹತ್ತಿರ ಆಗಿದ್ದು ಇದೇ ಸಿನಿಮಾದಿಂದ. ಈ ಚಿತ್ರದ 100ನೇ ದಿನದ ಸಂಭ್ರಾಚರಣೆಯ ವಿಡಿಯೋ ಈಗ ವೈರಲ್ ಆಗಿದೆ. ಈ ವಿಡಿಯೋನ ಅಶ್ವಿನಿ ಪುನೀತ್ ರಾಜ್​ಕುಮಾರ್ ಹಂಚಿಕೊಂಡಿದ್ದಾರೆ.

2002ರ ಏಪ್ರಿಲ್ 26ರಂದು ‘ಅಪ್ಪು’ ಸಿನಿಮಾ ರಿಲೀಸ್ ಆಯಿತು. ಪುರಿ ಜಗನ್ನಾಥ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಪಾರ್ವತಮ್ಮ ರಾಜ್​ಕುಮಾರ್ ಅವರೇ ಸಿನಿಮಾ ನಿರ್ಮಾಣ ಮಾಡಿದ್ದರು. ಈ ಚಿತ್ರ ಆಗಿನ ಕಾಲದಲ್ಲಿ 200 ದಿನ ಪ್ರದರ್ಶನ ಕಂಡಿತ್ತು. ಈ ಚಿತ್ರ ತೆಲುಗು, ತಮಿಳು, ಬೆಂಗಾಲಿ ಭಾಷೆಗೆ ರಿಮೇಕ್ ಆಯಿತು. ಈ ಚಿತ್ರದ ನೂರು ದಿನದ ಸಂಭ್ರಮಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಇದನ್ನೂ ಓದಿ
Image
ಸುಮಲತಾ-ದರ್ಶನ್ ಮಧ್ಯೆ ಬಿರುಕು? ಈ ಬೆಳವಣಿಗೆ ನೋಡಿದ್ರೆ ನೀವೂ ಒಪ್ತೀರಿ
Image
ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದರ್ಶನ್; ಕಾರಣ ನೀಡಿದ ನಟ
Image
ಚಂದನ್ ಶೆಟ್ಟಿ ಜೊತೆ ಮತ್ತೆ ಬಾಳುತ್ತೀರಾ? ನೇರವಾಗಿ ಉತ್ತರ ನೀಡಿದ ನಿವೇದಿತಾ
Image
ಮತ್ತೆ ಚಂದನ್ ಶೆಟ್ಟಿ ತಬ್ಬಿಕೊಂಡು ಕಣ್ಣೀರು ಹಾಕಿದ ನಿವೇದಿತಾ ಗೌಡ

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಶತದಿನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ರಜನಿಕಾಂತ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಪುನೀತ್ ಶಕ್ತಿ ಎಂಥದ್ದು ಎಂದು ರಜನಿಕಾಂತ್ ಆಗಲೇ ಗುರುತಿಸಿದ್ದರು. ‘ಅಪ್ಪು ಚಿತ್ರದ ಶತಮಾನೋತ್ಸವ ಕಾರ್ಯಕ್ರಮ. ಇದು ಸಿಹಂದ ಮರಿ. ಈಗತಾನೇ ಗೆದ್ದಿದೆ, ಘರ್ಜಿಸೋಕೆ ಆರಂಭಿಸಿದೆ. ಈ ಸಿಂಹದ ಮರಿ ಇನ್ನು ಏನೇನೋ ಮಾಡುತ್ತೆ ಎಂದು ನನಗೆ ಅನಿಸುತ್ತಾ ಇದೆ’ ಎಂದು ರಜನಿಕಾಂತ್ ಹೇಳಿದ್ದರು.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಅವರ ಸ್ಟಂಟ್ ಅನ್ನು ‘ಅಪ್ಪು ವೆಂಕಟೇಶ್’ ನೆನಪಿಸಿಕೊಂಡಿದ್ದು ಹೀಗೆ

ಪುನೀತ್ ರಾಜ್​ಕುಮಾರ್ ಅವರು ರಜನಿಕಾಂತ್ ಅವರ ಆಶೀರ್ವಾದ ಪಡೆದರು. ವೇದಿಕೆ ಮೇಲೆ ರಾಘವೇಂದ್ರ ರಾಜ್​ಕುಮಾರ್, ಶಿವಕುಮಾರ್ ಹಾಗೂ ಪುನೀತ್ ಡ್ಯಾನ್ಸ್ ಮಾಡಿದ್ದರು. ‘ಎಲ್ಲರಿಗೂ ನಮಸ್ಕಾರ. ಕಾರ್ಯಕ್ರಮವನ್ನು ಇಷ್ಟು ಅದ್ದೂರಿಯಾಗಿ ಆಚರಿಸಿದ್ದಕ್ಕೆ ಧನ್ಯವಾದ’ ಎಂದಿದ್ದರು ರಾಜ್​ಕುಮಾರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:00 am, Thu, 13 March 25