AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಅಪ್ಪು​ ಹೆಸರಿನಲ್ಲಿ ರಾಜ್ಯಾದ್ಯಂತ ಆಂಬ್ಯುಲೆನ್ಸ್ ಸೇವೆ; ಕೈ ಜೋಡಿಸಿದ ಯಶ್​, ಸೂರ್ಯ, ಪ್ರಕಾಶ್​ ರೈ

Appu Express Ambulance: ಬಡವರಿಗಾಗಿ ಕರ್ನಾಟಕದಾದ್ಯಂತ ‘ಅಪ್ಪು ಎಕ್ಸ್​ಪ್ರೆಸ್​ ಆಂಬ್ಯುಲೆನ್ಸ್’ ಓಡಾಡಲಿದೆ. ಅದಕ್ಕಾಗಿ ಯಶ್​, ಪ್ರಕಾಶ್​ ರೈ, ಸೂರ್ಯ, ಚಿರಂಜೀವಿ, ಶಿವಣ್ಣ ಮುಂತಾದವರು ಕೈ ಜೋಡಿಸಿದ್ದಾರೆ.

Puneeth Rajkumar: ಅಪ್ಪು​ ಹೆಸರಿನಲ್ಲಿ ರಾಜ್ಯಾದ್ಯಂತ ಆಂಬ್ಯುಲೆನ್ಸ್ ಸೇವೆ; ಕೈ ಜೋಡಿಸಿದ ಯಶ್​, ಸೂರ್ಯ, ಪ್ರಕಾಶ್​ ರೈ
ಪ್ರಕಾಶ್ ರಾಜ್, ಪುನೀತ್​ ರಾಜ್​ಕುಮಾರ್​, ಯಶ್
TV9 Web
| Edited By: |

Updated on: Oct 22, 2022 | 6:45 AM

Share

ನಟನಾಗಿ ಮಾತ್ರವಲ್ಲದೇ ಸಾಮಾಜಿಕ ಕಾರ್ಯಗಳ ಮೂಲಕವೂ ಪುನೀತ್​ ರಾಜ್​ಕುಮಾರ್ ಅವರು​​ ಜನರ ಆಶೀರ್ವಾದ ಪಡೆದಿದ್ದರು. ಅವರು ಮಾಡಿದ ಕಾರ್ಯಗಳು ಎಲ್ಲರಿಗೂ ಮಾದರಿ ಆಗಿವೆ. ಅವರನ್ನೇ ಸ್ಫೂರ್ತಿಯಾಗಿ ಇಟ್ಟುಕೊಂಡು ಅನೇಕರು ಹಲವು ಜನಪರ ಕಾರ್ಯಗಳನ್ನು ಮಾಡುತ್ತಾ ಇದ್ದಾರೆ. ಅದೇ ರೀತಿ ನಟ ಪ್ರಕಾಶ್​ ರೈ (Prakash Raj) ಅವರು ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಆಂಬ್ಯುಲೆನ್ಸ್ ಸೇವೆ (Appu Express Ambulance) ನೀಡಲು ತೀರ್ಮಾನಿಸಿದರು. ಅದಕ್ಕಾಗಿ ದೊಡ್ಮನೆ ಕುಟುಂಬ ಕೂಡ ಸಾಥ್​ ನೀಡಿದೆ. ಶಿವರಾಜ್​ಕುಮಾರ್​ ಫ್ಯಾಮಿಲಿಯಿಂದ ಒಂದು ಆಂಬ್ಯುಲೆನ್ಸ್ ನೀಡಲಾಗಿದೆ. ಅದೇ ರೀತಿ ‘ಮೆಗಾ ಸ್ಟಾರ್​’ ಚಿರಂಜೀವಿ, ಕಾಲಿವುಡ್​ ನಟ ಸೂರ್ಯ ಕೂಡ ಆಂಬ್ಯುಲೆನ್ಸ್ ನೀಡುವ ಮೂಲಕ ತಮ್ಮ ಸಹಾಯ ಹಸ್ತ ಚಾಚಿದ್ದಾರೆ. ‘ಪುನೀತ ಪರ್ವ’ ಕಾರ್ಯಕ್ರಮದ ವೇಳೆ ಯಶ್​ (Yash) ಕೂಡ ಇದಕ್ಕೆ ತಮ್ಮ ಸಹಕಾರ ಇದೆ ಎಂಬುದನ್ನು ಘೋಷಿಸಿದರು.

ಪುನೀತ್​ ರಾಜ್​ಕುಮಾರ್​ ಬಗ್ಗೆ ಬರೀ ಮಾತನಾಡುವುದಲ್ಲ. ಏನಾದರೂ ಮಾಡಬೇಕು ಎಂಬುದು ಪ್ರಕಾಶ್​ ರಾಜ್​ ಅವರು ಆಶಯ. ಅದರ ಫಲವಾಗಿಯೇ ಕಾರ್ಯರೂಪಕ್ಕೆ ಬಂದಿರುವುದು ಅಪ್ಪು ಹೆಸರಿನ ಆಂಬ್ಯುಲೆನ್ಸ್ ಸೇವೆ. ಅದಕ್ಕೆ ಅನೇಕ ಸ್ಟಾರ್​ ನಟರ ಕೈ ಜೋಡಿಸಿರುವುದು ಶ್ಲಾಘನೀಯ. ‘ಬಡವರಿಗೋಸ್ಕರ ಕರ್ನಾಟದಲ್ಲಿ ಅಪ್ಪು ಎಕ್ಸ್​ಪ್ರೆಸ್​ ಎಂಬ ಆಂಬ್ಯುಲೆನ್ಸ್ ಓಡಬೇಕು ಎಂಬ ಆಸೆ ನನ್ನದು ಎಂದು ಶಿವಣ್ಣನ ಬಳಿ ಹೇಳಿದೆ. ಅವರ ಕುಟುಂಬದ ಕಡೆಯಿಂದ ಒಂದು ಆಂಬ್ಯುಲೆನ್ಸ್ ನೀಡಿದರು’ ಎಂದಿದ್ದಾರೆ ಪ್ರಕಾಶ್​ ರೈ.

ಯಶ್​ ಅವರು ಈ ಬಗ್ಗೆ ವೇದಿಕೆಯಲ್ಲೇ ಮಾತಾಡಿದರು. ‘ಇಡೀ ಕರುನಾಡಿಗೆ ಪ್ರಕಾಶ್​ ರಾಜ್​ ಅವರು ಆಂಬ್ಯುಲೆನ್ಸ್ ನೀಡಲು ಮುಂದಾಗಿರುವುದು ಈಗ ಗೊತ್ತಾಯಿತು. ಈಗ ಎಷ್ಟು ಆಂಬ್ಯುಲೆನ್ಸ್ ಆಗಿದೆಯೋ ಅದನ್ನು ಬಿಟ್ಟು ಇನ್ನುಳಿದ ಎಲ್ಲ ಜಿಲ್ಲೆಗೂ ನಾನು ಮತ್ತು ಕೆವಿಎನ್​ ಪ್ರೊಡಕ್ಷನ್​ನವರು ಜೊತೆ ಸೇರಿ ಆಂಬ್ಯುಲೆನ್ಸ್ ನೀಡುತ್ತೇನೆ’ ಎಂದು ಯಶ್​ ಘೋಷಿಸಿದರು.

ಇದನ್ನೂ ಓದಿ
Image
‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
Image
Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು
Image
‘ನಾನಿರುವವರೆಗೂ ಈ ಹಾಡು ನನ್ನ ಜತೆ ಇರುತ್ತದೆ’; ‘ಪುನೀತ ಪರ್ವ’ ವೇದಿಕೆ ಮೇಲೆ ರಾಘಣ್ಣ ಭಾವುಕ ನುಡಿ
Image
Puneetha Parva: ‘ಪುನೀತ ಪರ್ವ’ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ; ಅರಮನೆ ಮೈದಾನದಲ್ಲಿ ತಾರೆಯರ ಸಂಗಮ

ಪುನೀತ್​ ರಾಜ್​ಕುಮಾರ್​ ಅವರಿಗೆ ‘ಪುನೀತ ಪರ್ವ’ ಕಾರ್ಯಕ್ರಮದಲ್ಲಿ ಗೌರವ ಸಲ್ಲಿಸಲಾಯಿತು. ಸೂರ್ಯ, ಅಖಿಲ್​ ಅಕ್ಕಿನೇನಿ, ರಾಣಾ ದಗ್ಗುಬಾಟಿ, ಸಿದ್ದಾರ್ಥ್​ ಸೇರಿದಂತೆ ಅನೇಕ ನಟರ ಈ ಕಾರ್ಯಕ್ರಮಕ್ಕೆ ಹಾಜರಿ ಹಾಕಿದರು. ಕಮಲ್​ ಹಾಸನ್​ ಮತ್ತು ಅಮಿತಾಭ್​ ಬಚ್ಚನ್​​ ಅವರು ವಿಡಿಯೋ ಮೂಲಕ ಶುಭ ಹಾರೈಸಿದರು. ರಮ್ಯಾ, ಪ್ರಭುದೇವ, ಶಿವರಾಜ್​ಕುಮಾರ್​ ಮುಂತಾದವರು ವೇದಿಕೆ ಮೇಲೆ ಡ್ಯಾನ್ಸ್​ ಮಾಡಿ ಪುನೀತ್​ಗೆ ನಮನ ಸಲ್ಲಿಸಿದರು. ಲಕ್ಷಾಂತರ ಅಭಿಮಾನಿಗಳು ಇದರಲ್ಲಿ ಭಾಗಿ ಆದರು. ತುಂಬ ಅಚ್ಚುಕಟ್ಟಾಗಿ ದೊಡ್ಮನೆ ಕುಟುಂಬದವರು ಈ ಕಾರ್ಯಕ್ರಮ ನಡೆಸಿಕೊಟ್ಟರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!