AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಅಪ್ಪು​ ಹೆಸರಿನಲ್ಲಿ ರಾಜ್ಯಾದ್ಯಂತ ಆಂಬ್ಯುಲೆನ್ಸ್ ಸೇವೆ; ಕೈ ಜೋಡಿಸಿದ ಯಶ್​, ಸೂರ್ಯ, ಪ್ರಕಾಶ್​ ರೈ

Appu Express Ambulance: ಬಡವರಿಗಾಗಿ ಕರ್ನಾಟಕದಾದ್ಯಂತ ‘ಅಪ್ಪು ಎಕ್ಸ್​ಪ್ರೆಸ್​ ಆಂಬ್ಯುಲೆನ್ಸ್’ ಓಡಾಡಲಿದೆ. ಅದಕ್ಕಾಗಿ ಯಶ್​, ಪ್ರಕಾಶ್​ ರೈ, ಸೂರ್ಯ, ಚಿರಂಜೀವಿ, ಶಿವಣ್ಣ ಮುಂತಾದವರು ಕೈ ಜೋಡಿಸಿದ್ದಾರೆ.

Puneeth Rajkumar: ಅಪ್ಪು​ ಹೆಸರಿನಲ್ಲಿ ರಾಜ್ಯಾದ್ಯಂತ ಆಂಬ್ಯುಲೆನ್ಸ್ ಸೇವೆ; ಕೈ ಜೋಡಿಸಿದ ಯಶ್​, ಸೂರ್ಯ, ಪ್ರಕಾಶ್​ ರೈ
ಪ್ರಕಾಶ್ ರಾಜ್, ಪುನೀತ್​ ರಾಜ್​ಕುಮಾರ್​, ಯಶ್
TV9 Web
| Edited By: |

Updated on: Oct 22, 2022 | 6:45 AM

Share

ನಟನಾಗಿ ಮಾತ್ರವಲ್ಲದೇ ಸಾಮಾಜಿಕ ಕಾರ್ಯಗಳ ಮೂಲಕವೂ ಪುನೀತ್​ ರಾಜ್​ಕುಮಾರ್ ಅವರು​​ ಜನರ ಆಶೀರ್ವಾದ ಪಡೆದಿದ್ದರು. ಅವರು ಮಾಡಿದ ಕಾರ್ಯಗಳು ಎಲ್ಲರಿಗೂ ಮಾದರಿ ಆಗಿವೆ. ಅವರನ್ನೇ ಸ್ಫೂರ್ತಿಯಾಗಿ ಇಟ್ಟುಕೊಂಡು ಅನೇಕರು ಹಲವು ಜನಪರ ಕಾರ್ಯಗಳನ್ನು ಮಾಡುತ್ತಾ ಇದ್ದಾರೆ. ಅದೇ ರೀತಿ ನಟ ಪ್ರಕಾಶ್​ ರೈ (Prakash Raj) ಅವರು ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಆಂಬ್ಯುಲೆನ್ಸ್ ಸೇವೆ (Appu Express Ambulance) ನೀಡಲು ತೀರ್ಮಾನಿಸಿದರು. ಅದಕ್ಕಾಗಿ ದೊಡ್ಮನೆ ಕುಟುಂಬ ಕೂಡ ಸಾಥ್​ ನೀಡಿದೆ. ಶಿವರಾಜ್​ಕುಮಾರ್​ ಫ್ಯಾಮಿಲಿಯಿಂದ ಒಂದು ಆಂಬ್ಯುಲೆನ್ಸ್ ನೀಡಲಾಗಿದೆ. ಅದೇ ರೀತಿ ‘ಮೆಗಾ ಸ್ಟಾರ್​’ ಚಿರಂಜೀವಿ, ಕಾಲಿವುಡ್​ ನಟ ಸೂರ್ಯ ಕೂಡ ಆಂಬ್ಯುಲೆನ್ಸ್ ನೀಡುವ ಮೂಲಕ ತಮ್ಮ ಸಹಾಯ ಹಸ್ತ ಚಾಚಿದ್ದಾರೆ. ‘ಪುನೀತ ಪರ್ವ’ ಕಾರ್ಯಕ್ರಮದ ವೇಳೆ ಯಶ್​ (Yash) ಕೂಡ ಇದಕ್ಕೆ ತಮ್ಮ ಸಹಕಾರ ಇದೆ ಎಂಬುದನ್ನು ಘೋಷಿಸಿದರು.

ಪುನೀತ್​ ರಾಜ್​ಕುಮಾರ್​ ಬಗ್ಗೆ ಬರೀ ಮಾತನಾಡುವುದಲ್ಲ. ಏನಾದರೂ ಮಾಡಬೇಕು ಎಂಬುದು ಪ್ರಕಾಶ್​ ರಾಜ್​ ಅವರು ಆಶಯ. ಅದರ ಫಲವಾಗಿಯೇ ಕಾರ್ಯರೂಪಕ್ಕೆ ಬಂದಿರುವುದು ಅಪ್ಪು ಹೆಸರಿನ ಆಂಬ್ಯುಲೆನ್ಸ್ ಸೇವೆ. ಅದಕ್ಕೆ ಅನೇಕ ಸ್ಟಾರ್​ ನಟರ ಕೈ ಜೋಡಿಸಿರುವುದು ಶ್ಲಾಘನೀಯ. ‘ಬಡವರಿಗೋಸ್ಕರ ಕರ್ನಾಟದಲ್ಲಿ ಅಪ್ಪು ಎಕ್ಸ್​ಪ್ರೆಸ್​ ಎಂಬ ಆಂಬ್ಯುಲೆನ್ಸ್ ಓಡಬೇಕು ಎಂಬ ಆಸೆ ನನ್ನದು ಎಂದು ಶಿವಣ್ಣನ ಬಳಿ ಹೇಳಿದೆ. ಅವರ ಕುಟುಂಬದ ಕಡೆಯಿಂದ ಒಂದು ಆಂಬ್ಯುಲೆನ್ಸ್ ನೀಡಿದರು’ ಎಂದಿದ್ದಾರೆ ಪ್ರಕಾಶ್​ ರೈ.

ಯಶ್​ ಅವರು ಈ ಬಗ್ಗೆ ವೇದಿಕೆಯಲ್ಲೇ ಮಾತಾಡಿದರು. ‘ಇಡೀ ಕರುನಾಡಿಗೆ ಪ್ರಕಾಶ್​ ರಾಜ್​ ಅವರು ಆಂಬ್ಯುಲೆನ್ಸ್ ನೀಡಲು ಮುಂದಾಗಿರುವುದು ಈಗ ಗೊತ್ತಾಯಿತು. ಈಗ ಎಷ್ಟು ಆಂಬ್ಯುಲೆನ್ಸ್ ಆಗಿದೆಯೋ ಅದನ್ನು ಬಿಟ್ಟು ಇನ್ನುಳಿದ ಎಲ್ಲ ಜಿಲ್ಲೆಗೂ ನಾನು ಮತ್ತು ಕೆವಿಎನ್​ ಪ್ರೊಡಕ್ಷನ್​ನವರು ಜೊತೆ ಸೇರಿ ಆಂಬ್ಯುಲೆನ್ಸ್ ನೀಡುತ್ತೇನೆ’ ಎಂದು ಯಶ್​ ಘೋಷಿಸಿದರು.

ಇದನ್ನೂ ಓದಿ
Image
‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
Image
Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು
Image
‘ನಾನಿರುವವರೆಗೂ ಈ ಹಾಡು ನನ್ನ ಜತೆ ಇರುತ್ತದೆ’; ‘ಪುನೀತ ಪರ್ವ’ ವೇದಿಕೆ ಮೇಲೆ ರಾಘಣ್ಣ ಭಾವುಕ ನುಡಿ
Image
Puneetha Parva: ‘ಪುನೀತ ಪರ್ವ’ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ; ಅರಮನೆ ಮೈದಾನದಲ್ಲಿ ತಾರೆಯರ ಸಂಗಮ

ಪುನೀತ್​ ರಾಜ್​ಕುಮಾರ್​ ಅವರಿಗೆ ‘ಪುನೀತ ಪರ್ವ’ ಕಾರ್ಯಕ್ರಮದಲ್ಲಿ ಗೌರವ ಸಲ್ಲಿಸಲಾಯಿತು. ಸೂರ್ಯ, ಅಖಿಲ್​ ಅಕ್ಕಿನೇನಿ, ರಾಣಾ ದಗ್ಗುಬಾಟಿ, ಸಿದ್ದಾರ್ಥ್​ ಸೇರಿದಂತೆ ಅನೇಕ ನಟರ ಈ ಕಾರ್ಯಕ್ರಮಕ್ಕೆ ಹಾಜರಿ ಹಾಕಿದರು. ಕಮಲ್​ ಹಾಸನ್​ ಮತ್ತು ಅಮಿತಾಭ್​ ಬಚ್ಚನ್​​ ಅವರು ವಿಡಿಯೋ ಮೂಲಕ ಶುಭ ಹಾರೈಸಿದರು. ರಮ್ಯಾ, ಪ್ರಭುದೇವ, ಶಿವರಾಜ್​ಕುಮಾರ್​ ಮುಂತಾದವರು ವೇದಿಕೆ ಮೇಲೆ ಡ್ಯಾನ್ಸ್​ ಮಾಡಿ ಪುನೀತ್​ಗೆ ನಮನ ಸಲ್ಲಿಸಿದರು. ಲಕ್ಷಾಂತರ ಅಭಿಮಾನಿಗಳು ಇದರಲ್ಲಿ ಭಾಗಿ ಆದರು. ತುಂಬ ಅಚ್ಚುಕಟ್ಟಾಗಿ ದೊಡ್ಮನೆ ಕುಟುಂಬದವರು ಈ ಕಾರ್ಯಕ್ರಮ ನಡೆಸಿಕೊಟ್ಟರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು