AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆರೆಬೇಟೆ’ ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ಆರಗ ಜ್ಞಾನೇಂದ್ರ, ಬಿ.ವೈ. ರಾಘವೇಂದ್ರ

ಟೈಟಲ್ ಸಾಂಗ್​ ಬಿಡುಗಡೆ ಮಾಡುವ ಮೂಲಕ ‘ಕೆರೆಬೇಟೆ’ ಚಿತ್ರತಂಡವು ನಿರೀಕ್ಷೆ ಹೆಚ್ಚಿಸಿದೆ. ಅಪ್ಪಟ ಹಳ್ಳಿ ಸೊಗಡಿನ ಕಥೆ ಈ ಸಿನಿಮಾದಲ್ಲಿ ಇದೆ. ಮಾರ್ಚ್ 15ರಂದು ಈ ಚಿತ್ರ ಬಿಡುಗಡೆ ಆಗಲಿದೆ. ದಿನಕರ್ ತೂಗುದೀಪ ಅವರು ಈ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ. ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿಯ ಹಿನ್ನೆಲೆಯಲ್ಲಿ ಈ ಸಿನಿಮಾದ ಕಥೆ ಸಾಗುತ್ತದೆ.

‘ಕೆರೆಬೇಟೆ’ ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ಆರಗ ಜ್ಞಾನೇಂದ್ರ, ಬಿ.ವೈ. ರಾಘವೇಂದ್ರ
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ‘ಕೆರೆಬೇಟೆ’ ಸಿನಿಮಾದ ಟೈಟಲ್​ ಸಾಂಗ್​ ಬಿಡುಗಡೆ ಕಾರ್ಯಕ್ರಮ
ಮದನ್​ ಕುಮಾರ್​
|

Updated on: Mar 01, 2024 | 5:46 PM

Share

ಗೌರಿ ಶಂಕರ್​ ನಟನೆಯ, ರಾಜ್​ಗುರು ನಿರ್ದೇಶನದ ಕೆರೆಬೇಟೆ’ (Kerebete) ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಒಂದಷ್ಟು ಕಾರಣಗಳಿಂದಾಗಿ ಈ ಸಿನಿಮಾ ಸುದ್ದಿ ಆಗುತ್ತಿದೆ. ‘ಕೆರೆಬೇಟೆ’ ಸಿನಿಮಾದ ಟ್ರೇಲರ್, ಟೀಸರ್ ಹಾಗೂ ರೊಮ್ಯಾಂಟಿಕ್ ಸಾಂಗ್​ ಈಗಾಗಲೇ ಬಿಡುಗಡೆಯಾಗಿ ಸದ್ದು ಮಾಡಿದೆ. ಈಗ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಮತ್ತೊಂದು ಹಾಡು ಬಿಡುಗಡೆ ಮಾಡಲಾಗಿದೆ. ‘ಕೆರೆಬೇಟೆ’ ಸಿನಿಮಾದಿಂದ ಶೀರ್ಷಿಕೆ ಗೀತೆ ರಿಲೀಸ್ ಆಗಿದೆ. ವಿಶೇಷ ಏನೆಂದರೆ, ಬಿ.ವೈ. ರಾಘವೇಂದ್ರ (BY Raghavendra) ಹಾಗೂ ಆರಗ ಜ್ಞಾನೇಂದ್ರ (Araga Jnanendra) ಅವರು ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಅದ್ದೂರಿಯಾಗಿ ‘ಕೆರೆಬೇಟೆ’ ಸಿನಿಮಾದ ಟೈಟಲ್ ಸಾಂಗ್​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಮಲೆನಾಡಿನ ಕುರಿತ ಕಥೆ ಇದೆ. ಹಾಗಾಗಿ ಶಿವಮೊಗ್ಗದಲ್ಲಿ ಹೊಸ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷ.

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ವಿಶ್​ ಮಾಡಿದ್ದಾರೆ. ಪ್ರಮೋದ್ ಮರವಂತೆ ಅವರು ‘ಕೆರಿಬ್ಯಾಟಿ ಶುರುವಾತು…’ ಎಂಬ ಈ ಹಾಡನ್ನು ಬರೆದಿದ್ದಾರೆ. ಗಗನ್ ಬಡೇರಿಯಾ ಅವರು ಈ ಹಾಡಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಕರಿಬಸವ ತಡಕಲ್ ಅವರ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದೆ. ‘ಕೆರೆಬೇಟೆ’ ಸಿನಿಮಾ ಈ ಗೀತೆಯನ್ನು ಕೇಳಿ ಆರಗ ಜ್ಞಾನೇಂದ್ರ ಮತ್ತು ಬಿ.ವೈ. ರಾಘವೇಂದ್ರ ಅವರು ಮೆಚ್ಚುಗೆ ಸೂಚಿಸಿದರು. ಬಳಿಕ ಶುಭ ಕೋರಿದರು.

ಇದನ್ನೂ ಓದಿ: ಮಲೆನಾಡಿನ ಕಥೆಯ ಝಲಕ್​ ತೋರಿಸಿದ ‘ಕೆರೆಬೇಟೆ’ ಟ್ರೇಲರ್​; ಮಾ.15ಕ್ಕೆ ಸಿನಿಮಾ ಬಿಡುಗಡೆ

ಹಾಡು ಬಿಡುಗಡೆ ಆದ ಬಳಿಕ ಮಾತನಾಡಿದ ಬಿ.ವೈ. ರಾಘವೇಂದ್ರ ಅವರು ‘ಈ ಚಿತ್ರ ಸಂಪೂರ್ಣವಾಗಿ ಮಲೆನಾಡಿನ ಸುತ್ತಮುತ್ತ ಚಿತ್ರೀಕರಣಗೊಂಡಿದೆ. ಅಲ್ಲದೇ, ಮಲೆನಾಡಿನವರೇ ಸೇರಿಕೊಂಡು ಈ ಸಿನಿಮಾವನ್ನು ಮಾಡಿದ್ದಾರೆ. ಮಲೆನಾಡಿನ ಪರಿಸರದ ಸೌಂದರ್ಯವನ್ನು ಬಹಳ ಸುಂದರವಾಗಿ ತೋರಿಸಲಾಗಿದೆ. ಈ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಹೇಳಿದರು.

ಇದನ್ನೂ ಓದಿ: ‘ಕೆರೆಬೇಟೆ’ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್ ಮಾಡಿದ ಉಪೇಂದ್ರ

ಆರಗ ಜ್ಞಾನೇಂದ್ರ ಅವರು ಮಾತನಾಡಿ, ‘ಇತ್ತೀಚಿನ ವರ್ಷಗಳಲ್ಲಿ ಮಲೆನಾಡ ಸಂಸ್ಕೃತಿ ಕಣ್ಮರೆ ಆಗುತ್ತಿದೆ. ಹಲವು ಪದ್ಧತಿಗಳು ಮರೆಯಾಗಿವೆ. ಈಗ ಕೆರೆಬೇಟೆ ಸಂಸ್ಕೃತಿ ಕುರಿತು ಸಿನಿಮಾ ಮಾಡಿರುವುದು ಬಹಳ ಖುಷಿ ಆಗುತ್ತದೆ. ಟ್ರೇಲರ್ ಹಾಗೂ ಹಾಡುಗಳು ಚೆನ್ನಾಗಿ ಮೂಡಿಬಂದಿವೆ. ಹೀರೋ, ನಿರ್ಮಾಪಕ, ನಿರ್ದೇಶಕ ಸೇರಿದಂತೆ ಈ ಚಿತ್ರತಂಡದಲ್ಲಿ ಎಲ್ಲರೂ ಮಲೆನಾಡಿನವರೇ ಎಂಬುದು ಖುಷಿಯ ಸಂಗತಿ. ಈ ಸಿನಿಮಾ ಎಲ್ಲ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗಲಿ’ ಎಂದು ಹಾರೈಸಿದರು.

‘ಕೆರೆಬೇಟೆ’ ಸಿನಿಮಾದಿಂದ ಶೀರ್ಷಿಕೆ ಗೀತೆ:

‘ಜನಮನ ಸಿನಿಮಾಸ್​’ ಸಂಸ್ಥೆಯ ಮೂಲಕ ಮೂಡಿಬಂದಿರುವ ಈ ಸಿನಿಮಾ ಮಾರ್ಚ್​ 15ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರಕ್ಕಾಗಿ ‘ಕೆರೆಬೇಟೆ’ ತಂಡದವರು ಹೊಸ ಹೊಸ ವಿಧಾನಗಳನ್ನು ಅನುಸರಿಸುತ್ತಿದ್ದಾರೆ. ನಿಜವಾದ ಕೆರೆಬೇಟೆ ಆಟಗಾರರು ಕೂಣಿ ಹಿಡಿದು ಎಲ್ಲ ಜಿಲ್ಲೆಗಳಲ್ಲಿ ಬೈಕ್ ರ‍್ಯಾಲಿ ಹೊರಡಲಿದ್ದಾರೆ. ಹಾಡಿನ ಬಿಡುಗಡೆ ಬಳಿಕ ರ‍್ಯಾಲಿಗೆ ಚಾಲನೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್