AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​ ಪ್ರಕಾಶ್ ಕಂಠದಲ್ಲಿ ಮೂಡಿಬಂತು ‘ಆರಾಮ್ಸೆ’ ಮ್ಯೂಸಿಕ್​ ವಿಡಿಯೋ; ಏನಿದರ ವಿಶೇಷ?

ಜೀವನದಲ್ಲಿ ಎಷ್ಟೋ ತಿರಸ್ಕಾರಗಳು ಬರುತ್ತವೆ. ಹಾಗಂತ, ಬದುಕನ್ನು ಕೈಬಿಡಬಾರದು. ಇಲ್ಲಿಯೇ ಮುಂದುವರಿಯಬೇಕು ಎನ್ನುವ ಅಂಶ ಹಾಡಿನಲ್ಲಿದೆ. ಹಾಗಾಗಿ ‘ಆರಾಮ್ಸೆ’ ಹಾಡು ಅನೇಕರಿಗೆ ಇಷ್ಟ ಆಗುತ್ತಿದೆ.

ವಿಜಯ್​ ಪ್ರಕಾಶ್ ಕಂಠದಲ್ಲಿ ಮೂಡಿಬಂತು ‘ಆರಾಮ್ಸೆ’ ಮ್ಯೂಸಿಕ್​ ವಿಡಿಯೋ; ಏನಿದರ ವಿಶೇಷ?
ಅಭಿಷೇಕ್ ಮಠದ್, ವಿಜಯ್ ಪ್ರಕಾಶ್
TV9 Web
| Edited By: |

Updated on: Oct 01, 2021 | 3:47 PM

Share

ಬಣ್ಣದ ಲೋಕದಲ್ಲಿ ಕೆಲವರು ಸಡನ್​ ಆಗಿ ಸ್ಟಾರ್ ಆಗಿಬಿಡುತ್ತಾರೆ. ಆದರೆ ಎಲ್ಲರಿಗೂ ಅಂಥ ಅದೃಷ್ಟ ಇರುವುದಿಲ್ಲ. ಪ್ರತಿಭೆ ಇದ್ದರೂ ಕೂಡ ಅವಕಾಶ ಸಿಗದೇ ಕಾಯುತ್ತಾ ಕುಳಿತವರು ಹಲವರು ಇರುತ್ತಾರೆ. ಸೂಕ್ತ ಸಮಯ ಬರುವವರೆಗೂ ಕಾಯುವುದು ಅನಿವಾರ್ಯ. ಅಲ್ಲಿಯವರೆಗೆ ಒಬ್ಬ ಕಲಾವಿದನ ಮನಸ್ಸಿನಲ್ಲಿ ನೂರಾರು ತೊಳಲಾಟ ನಡೆಯುತ್ತಲೇ ಇರುತ್ತದೆ. ಆ ಸಂದರ್ಭವನ್ನು ವಿವರಿಸುತ್ತದೆ ‘ಆರಾಮ್ಸೆ’ ಮ್ಯೂಸಿಕ್ ವಿಡಿಯೋ. ಇದಕ್ಕೆ ಧ್ವನಿ ನೀಡಿರುವುದು ಜನಪ್ರಿಯ ಗಾಯಕ ವಿಜಯ್​ ಪ್ರಕಾಶ್​. ಯೂಟ್ಯೂಬ್‍ನಲ್ಲಿ ಬಿಡುಗಡೆ ಆಗಿರುವ ಈ ಗೀತೆ ಜನಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ಈ ಗೀತೆಯನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದ್ದಾರೆ ಅಭಿಷೇಕ್ ಮಠದ್. ಜೀವನದಲ್ಲಿ ಎಷ್ಟೋ ತಿರಸ್ಕಾರಗಳು ಬರುತ್ತವೆ. ಹಾಗಿದ್ದರೂ ಬದುಕನ್ನು ಕೈಬಿಡಬಾರದು. ಇಲ್ಲಿಯೇ ಮುಂದುವರಿಯಬೇಕು ಎನ್ನುವ ಅಂಶ ಹಾಡಿನಲ್ಲಿದೆ. ಹಾಗಾಗಿ ‘ಆರಾಮ್ಸೆ’ ಹಾಡು ಅನೇಕರಿಗೆ ಇಷ್ಟ ಆಗುತ್ತಿದೆ. ಮೇಕಿಂಗ್​ ಗುಣಮಟ್ಟದಿಂದಲೂ ಇದು ಗಮನ ಸೆಳೆಯುತ್ತಿದೆ.

ಕನ್ನಡ ಮಾತ್ರವಲ್ಲದೆ, ಬಹುಭಾಷೆಯಲ್ಲಿ ಜನಪ್ರಿಯ ಗಾಯಕರಾಗಿ ಗುರುತಿಸಿಕೊಂಡಿರುವ ವಿಜಯ ಪ್ರಕಾಶ್, ಮ್ಯೂಸಿಕ್​ ವಿಡಿಯೋಗಳಿಗೆ ಧ್ವನಿ ನೀಡುವುದು ತುಂಬ ಕಡಿಮೆ. ಆದರೆ, ಈ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿ ನೀಡಿದ್ದಾರೆ. ಅದಕ್ಕೆ ಕಾರಣವೂ ಇದೆ. ‘ಈ ಹಾಡಿನ ಸಾಹಿತ್ಯ ವಿಜಯ್ ಪ್ರಕಾಶ್ ಅವರಿಗೆ ಇಷ್ಟವಾಗಿ, ಅವರು ಖುಷಿಯಿಂದ ಹಾಡಿದರು. ನಂತರ ಈ ಹಾಡನ್ನು ಚಿತ್ರೀಕರಣ ಮಾಡಿದ ರೀತಿಗೆ ಅವರು ಸಂತಸ ವ್ಯಕ್ತಪಡಿಸಿದರು. ಗಾಯಕ ವಿಜಯ್​ ಪ್ರಕಾಶ್ ನಮಗೆ ಬಹಳ ಬೆಂಬಲ ನೀಡಿದರು’ ಎನ್ನುತ್ತಾರೆ ಅಭಿಷೇಕ ಮಠದ್.

ಈ ಹಿಂದೆ ನಟ ದಿಗಂತ್ ಜೊತೆಗೆ ಅಭಿಷೇಕ್ ಅವರು ಒಂದು ಮ್ಯೂಸಿಕ್ ವಿಡಿಯೋ ಮಾಡಿದ್ದರು. ಅದಕ್ಕೆ ಅವರೇ ನೃತ್ಯ ನಿರ್ದೇಶನ ಮಾಡಿದ್ದರು. ನಂತರ ಚಂದನ್ ಶೆಟ್ಟಿ ಜೊತೆಗೆ ಟಕಿಲಾ, ಬಡಪಾಯಿ ಕುಡುಕ ಸಾಂಗ್‌ಗಳನ್ನು ಮಾಡಿದ್ದಾರೆ. ಈಚೆಗೆ ಅದಿತಿ ಪ್ರಭುದೇವ ಅವರೊಂದಿಗೆ ಪರ್ಫೆಕ್ಟ್ ಗರ್ಲ್ ಎಂಬ ಸಾಂಗ್ ಮಾಡಿದ್ದರು. ಈ ಎಲ್ಲ ಅನುಭವಗಳನ್ನು ಇಟ್ಟುಕೊಂಡಿರುವ ಅವರು ‘ಆರಾಮ್ಸೆ’ ಹಾಡಿನ ಮೂಲಕ ಮತ್ತೆ ಗಮನ ಸೆಳೆಯುತ್ತಿದ್ದಾರೆ. ಸದ್ಯ ಬಳೆಪೇಟೆ ಮತ್ತು ಸಮುದ್ರಂ ಸಿನಿಮಾಗಳಲ್ಲಿ ಅಭಿಷೇಕ್​ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ:

Ananya Bhat: ‘ಪ್ರೀತಿ ಎಂದರೇನು’ ಮ್ಯೂಸಿಕ್​ ವಿಡಿಯೋ ಮೂಲಕ ಗಮನ ಸೆಳೆದ ಅನನ್ಯಾ ಭಟ್​, ಹೃದಯ ಶಿವ

ಗುರುತು ಸಿಗದಂತೆ ಬದಲಾದ ಬಿಗ್​ ಬಾಸ್​ ಮಹಿಳಾ ಸ್ಪರ್ಧಿ; ಈ ಪರಿವರ್ತನೆ ನಂಬಲು ಸಾಧ್ಯವೇ?

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ