ಅರವಿಂದ್​ಗೆ ಸಿಕ್ತು ಯೂತ್​ ಐಕಾನ್​ ಅವಾರ್ಡ್​​; ಸಂತಸ ಪಟ್ಟ ದಿವ್ಯಾ ಉರುಡುಗ

ಕಿರುತೆರೆ ವ್ಯಾಪ್ತಿ ದಿನಕಳೆದಂತೆ ವಿಸ್ತರಣೆ ಆಗುತ್ತಲೇ ಇದೆ. ಸಿನಿಮಾ ನಿರ್ಮಾಣದ ಮಟ್ಟದಲ್ಲೇ ಧಾರಾವಾಹಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಒಂದಕ್ಕಿಂತ ಒಂದು ಧಾರಾವಾಹಿ ಅದ್ದೂರಿಯಾಗಿ ಮೂಡಿ ಬರುತ್ತಿದೆ

ಅರವಿಂದ್​ಗೆ ಸಿಕ್ತು ಯೂತ್​ ಐಕಾನ್​ ಅವಾರ್ಡ್​​; ಸಂತಸ ಪಟ್ಟ ದಿವ್ಯಾ ಉರುಡುಗ
ದಿವ್ಯಾ-ಅರವಿಂದ್
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 17, 2021 | 2:42 PM

ಅರವಿಂದ್ ಕೆ.ಪಿ. ಅವರು ಬಿಗ್ ಬಾಸ್​ಗೆ ಬಂದ ನಂತರದಲ್ಲಿ ಅವರ ಖ್ಯಾತಿ ಹೆಚ್ಚಿತು. ಅವರು ಮಾಡಿರುವ ಸಾಧನೆ ಅನೇಕ ಜನರಿಗೆ ಸ್ಫೂರ್ತಿದಾಯಕವಾಗಿದೆ. ಅವರನ್ನು ಸಾಕಷ್ಟು ಜನರು ಮಾದರಿ​ ಆಗಿ ತೆಗೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ಅನುಬಂಧ ಅವಾರ್ಡ್ಸ್​ನಲ್ಲಿ ‘ಜನ ಮೆಚ್ಚಿದ ಯೂತ್​ ಐಕಾನ್’ ಅವಾರ್ಡ್​ ಸಿಕ್ಕಿದೆ. ಈ ಅವಾರ್ಡ್​ ಸಿಗುತ್ತಿದ್ದಂತೆ ಅತಿ ಹೆಚ್ಚು ಸಂತೋಷ ಪಟ್ಟಿದ್ದು ದಿವ್ಯಾ ಉರುಡುಗ.

ಕಿರುತೆರೆ ವ್ಯಾಪ್ತಿ ದಿನಕಳೆದಂತೆ ವಿಸ್ತರಣೆ ಆಗುತ್ತಲೇ ಇದೆ. ಸಿನಿಮಾ ನಿರ್ಮಾಣದ ಮಟ್ಟದಲ್ಲೇ ಧಾರಾವಾಹಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಒಂದಕ್ಕಿಂತ ಒಂದು ಧಾರಾವಾಹಿ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಇದರ ಜತೆಗೆ ವರ್ಷಕ್ಕೆ ಒಂದು ಬಾರಿ ಧಾರಾವಾಹಿ ಕಲಾವಿದರನ್ನು ಒಟ್ಟಿಗೆ ಸೇರಿಸಲಾಗುತ್ತದೆ. ಈಗ ಕಲರ್ಸ್​ ಕನ್ನಡ ವಾಹಿನಿ ಅನುಬಂಧ ಅವಾರ್ಡ್ಸ್​ನೊಂದಿಗೆ ಬಂದಿದೆ.  ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳನ್ನು ಇಟ್ಟುಕೊಂಡು ವಿವಿಧ ರೀತಿಯ ಅವಾರ್ಡ್​ ನೀಡಲಾಗಿದೆ. ಕೊವಿಡ್​ ಎರಡನೇ ಅಲೆ ಕಡಿಮೆ ಆಗಿದ್ದರಿಂದ ಈ ಬಾರಿಯ ಕಾರ್ಯಕ್ರಮ ಬಹಳ ಅದ್ದೂರಿಯಾಗಿತ್ತು. ಅಕ್ಟೋಬರ್​ 15,16,17ರಂದು ಸಂಜೆ 7ಗಂಟೆಗೆ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮ ಪ್ರಸಾರವಾಗಿದೆ.

ಜನ ಮೆಚ್ಚಿದ ನಾಯಕಿ, ಜನ ಮೆಚ್ಚಿದ ನಾಯಕ, ಜನ ಮೆಚ್ಚಿದ ಜೋಡಿ, ಜನ ಮೆಚ್ಚಿದ ಯೂತ್​ ಐಕಾನ್​ ಸೇರಿ ಸಾಕಷ್ಟು ಅವಾರ್ಡ್​ಗಳನ್ನು ನೀಡಲಾಗುತ್ತದೆ. ಇದಕ್ಕೆ ವೀಕ್ಷಕರು ವೋಟ್​ ಮಾಡಬೇಕು. ಯಾರು ಹೆಚ್ಚು ವೋಟ್​ ಪಡೆಯುತ್ತಾರೋ ಅವರು ಅನುಬಂಧ ಅವಾರ್ಡ್ಸ್​ಗೆ ಭಾಜನರಾಗುತ್ತಾರೆ. ಅದೇ ರೀತಿ ಜನ ಮೆಚ್ಚಿದ ಯೂತ್​ ಐಕಾನ್​ ಅವಾರ್ಡ್​ಗೆ ಅರವಿಂದ್ ಕೆ.ಪಿ ಹೆಚ್ಚು ಮತ ಪಡೆದು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅರವಿಂದ್ ಅವರಿಗೆ ಪ್ರಶಸ್ತಿ ನೀಡಿದ್ದು ಮತ್ತೊಂದು ಯೂತ್​ ಐಕಾನ್​ ಅನ್ನೋದು ವಿಶೇಷ. ಕರ್ನಾಟಕ ಮೂಲದ ಸಹಾಸ್​ ಯತಿರಾಜ್​ ಅವರು ಪ್ಯಾರಾ ಒಲಂಪಿಕ್ಸ್​ನಲ್ಲಿ ಚಿನ್ನ ಗೆದ್ದಿದ್ದಾರೆ. ವೃತ್ತಿಯಲ್ಲಿ ಅವರು ಐಎಎಸ್​ ಅಧಿಕಾರಿ. ಅವರು ಈ ಪ್ರಶಸ್ತಿಯನ್ನು ಅರವಿಂದ್​ಗೆ ನೀಡಿದರು. ಈ ವೇಳೆ ದಿವ್ಯಾ ಉರುಡುಗ ಎದ್ದು ನಿಂತು ಅರವಿಂದ್​ಗೆ ಚಪ್ಪಾಳೆ ಹೊಡೆದರು.

ಇದನ್ನೂ ಓದಿ: ರೊಮ್ಯಾಂಟಿಕ್​ ಡ್ಯಾನ್ಸ್​ ಮಾಡಿದ ದಿವ್ಯಾ ಉರುಡುಗ ಮತ್ತು ಅರವಿಂದ್ ಕೆ.ಪಿ.​; ಇಲ್ಲಿದೆ ವಿಡಿಯೋ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ