AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್​ಗೆ ಸಿಕ್ತು ಯೂತ್​ ಐಕಾನ್​ ಅವಾರ್ಡ್​​; ಸಂತಸ ಪಟ್ಟ ದಿವ್ಯಾ ಉರುಡುಗ

ಕಿರುತೆರೆ ವ್ಯಾಪ್ತಿ ದಿನಕಳೆದಂತೆ ವಿಸ್ತರಣೆ ಆಗುತ್ತಲೇ ಇದೆ. ಸಿನಿಮಾ ನಿರ್ಮಾಣದ ಮಟ್ಟದಲ್ಲೇ ಧಾರಾವಾಹಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಒಂದಕ್ಕಿಂತ ಒಂದು ಧಾರಾವಾಹಿ ಅದ್ದೂರಿಯಾಗಿ ಮೂಡಿ ಬರುತ್ತಿದೆ

ಅರವಿಂದ್​ಗೆ ಸಿಕ್ತು ಯೂತ್​ ಐಕಾನ್​ ಅವಾರ್ಡ್​​; ಸಂತಸ ಪಟ್ಟ ದಿವ್ಯಾ ಉರುಡುಗ
ದಿವ್ಯಾ-ಅರವಿಂದ್
TV9 Web
| Edited By: |

Updated on: Oct 17, 2021 | 2:42 PM

Share

ಅರವಿಂದ್ ಕೆ.ಪಿ. ಅವರು ಬಿಗ್ ಬಾಸ್​ಗೆ ಬಂದ ನಂತರದಲ್ಲಿ ಅವರ ಖ್ಯಾತಿ ಹೆಚ್ಚಿತು. ಅವರು ಮಾಡಿರುವ ಸಾಧನೆ ಅನೇಕ ಜನರಿಗೆ ಸ್ಫೂರ್ತಿದಾಯಕವಾಗಿದೆ. ಅವರನ್ನು ಸಾಕಷ್ಟು ಜನರು ಮಾದರಿ​ ಆಗಿ ತೆಗೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ಅನುಬಂಧ ಅವಾರ್ಡ್ಸ್​ನಲ್ಲಿ ‘ಜನ ಮೆಚ್ಚಿದ ಯೂತ್​ ಐಕಾನ್’ ಅವಾರ್ಡ್​ ಸಿಕ್ಕಿದೆ. ಈ ಅವಾರ್ಡ್​ ಸಿಗುತ್ತಿದ್ದಂತೆ ಅತಿ ಹೆಚ್ಚು ಸಂತೋಷ ಪಟ್ಟಿದ್ದು ದಿವ್ಯಾ ಉರುಡುಗ.

ಕಿರುತೆರೆ ವ್ಯಾಪ್ತಿ ದಿನಕಳೆದಂತೆ ವಿಸ್ತರಣೆ ಆಗುತ್ತಲೇ ಇದೆ. ಸಿನಿಮಾ ನಿರ್ಮಾಣದ ಮಟ್ಟದಲ್ಲೇ ಧಾರಾವಾಹಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಒಂದಕ್ಕಿಂತ ಒಂದು ಧಾರಾವಾಹಿ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಇದರ ಜತೆಗೆ ವರ್ಷಕ್ಕೆ ಒಂದು ಬಾರಿ ಧಾರಾವಾಹಿ ಕಲಾವಿದರನ್ನು ಒಟ್ಟಿಗೆ ಸೇರಿಸಲಾಗುತ್ತದೆ. ಈಗ ಕಲರ್ಸ್​ ಕನ್ನಡ ವಾಹಿನಿ ಅನುಬಂಧ ಅವಾರ್ಡ್ಸ್​ನೊಂದಿಗೆ ಬಂದಿದೆ.  ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳನ್ನು ಇಟ್ಟುಕೊಂಡು ವಿವಿಧ ರೀತಿಯ ಅವಾರ್ಡ್​ ನೀಡಲಾಗಿದೆ. ಕೊವಿಡ್​ ಎರಡನೇ ಅಲೆ ಕಡಿಮೆ ಆಗಿದ್ದರಿಂದ ಈ ಬಾರಿಯ ಕಾರ್ಯಕ್ರಮ ಬಹಳ ಅದ್ದೂರಿಯಾಗಿತ್ತು. ಅಕ್ಟೋಬರ್​ 15,16,17ರಂದು ಸಂಜೆ 7ಗಂಟೆಗೆ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮ ಪ್ರಸಾರವಾಗಿದೆ.

ಜನ ಮೆಚ್ಚಿದ ನಾಯಕಿ, ಜನ ಮೆಚ್ಚಿದ ನಾಯಕ, ಜನ ಮೆಚ್ಚಿದ ಜೋಡಿ, ಜನ ಮೆಚ್ಚಿದ ಯೂತ್​ ಐಕಾನ್​ ಸೇರಿ ಸಾಕಷ್ಟು ಅವಾರ್ಡ್​ಗಳನ್ನು ನೀಡಲಾಗುತ್ತದೆ. ಇದಕ್ಕೆ ವೀಕ್ಷಕರು ವೋಟ್​ ಮಾಡಬೇಕು. ಯಾರು ಹೆಚ್ಚು ವೋಟ್​ ಪಡೆಯುತ್ತಾರೋ ಅವರು ಅನುಬಂಧ ಅವಾರ್ಡ್ಸ್​ಗೆ ಭಾಜನರಾಗುತ್ತಾರೆ. ಅದೇ ರೀತಿ ಜನ ಮೆಚ್ಚಿದ ಯೂತ್​ ಐಕಾನ್​ ಅವಾರ್ಡ್​ಗೆ ಅರವಿಂದ್ ಕೆ.ಪಿ ಹೆಚ್ಚು ಮತ ಪಡೆದು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅರವಿಂದ್ ಅವರಿಗೆ ಪ್ರಶಸ್ತಿ ನೀಡಿದ್ದು ಮತ್ತೊಂದು ಯೂತ್​ ಐಕಾನ್​ ಅನ್ನೋದು ವಿಶೇಷ. ಕರ್ನಾಟಕ ಮೂಲದ ಸಹಾಸ್​ ಯತಿರಾಜ್​ ಅವರು ಪ್ಯಾರಾ ಒಲಂಪಿಕ್ಸ್​ನಲ್ಲಿ ಚಿನ್ನ ಗೆದ್ದಿದ್ದಾರೆ. ವೃತ್ತಿಯಲ್ಲಿ ಅವರು ಐಎಎಸ್​ ಅಧಿಕಾರಿ. ಅವರು ಈ ಪ್ರಶಸ್ತಿಯನ್ನು ಅರವಿಂದ್​ಗೆ ನೀಡಿದರು. ಈ ವೇಳೆ ದಿವ್ಯಾ ಉರುಡುಗ ಎದ್ದು ನಿಂತು ಅರವಿಂದ್​ಗೆ ಚಪ್ಪಾಳೆ ಹೊಡೆದರು.

ಇದನ್ನೂ ಓದಿ: ರೊಮ್ಯಾಂಟಿಕ್​ ಡ್ಯಾನ್ಸ್​ ಮಾಡಿದ ದಿವ್ಯಾ ಉರುಡುಗ ಮತ್ತು ಅರವಿಂದ್ ಕೆ.ಪಿ.​; ಇಲ್ಲಿದೆ ವಿಡಿಯೋ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ