AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​ ರಾಕಿ ಭಾಯ್​ ಅಮ್ಮ ಅರ್ಚನಾ ಜೋಯಿಸ್​ಗೆ ಬಂತು ಬಿಗ್​ ಆಫರ್​

ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಎಂದಷ್ಟೇ ಚಿತ್ರತಂಡ ಹೇಳಿಕೊಂಡಿದೆ. ಆದರೆ, ಪಾತ್ರಗಳ ಬಗ್ಗೆ  ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಕೆಜಿಎಫ್​ ರಾಕಿ ಭಾಯ್​ ಅಮ್ಮ ಅರ್ಚನಾ ಜೋಯಿಸ್​ಗೆ ಬಂತು ಬಿಗ್​ ಆಫರ್​
ಅರ್ಚನಾ ಜೋಯಿಸ್​
ರಾಜೇಶ್ ದುಗ್ಗುಮನೆ
|

Updated on: Apr 14, 2021 | 5:00 PM

Share

ಕೆಜಿಎಫ್ ಚಿತ್ರದಲ್ಲಿ ಅಮ್ಮನ ಪಾತ್ರದ ಮೂಲಕ ಮನೆಮಾತಾಗಿದ್ದವರು ಅರ್ಚನಾ ಜೋಯಿಸ್. ರಾಕಿ ಬಾಯಿ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅರ್ಚನಾ ಖ್ಯಾತಿ ದೇಶಾದ್ಯಂತ ಹಬ್ಬಿದೆ. ಅಷ್ಟೇ ಅಲ್ಲ, ಸಾಲು ಸಾಲು ಸಿನಿಮಾಗಳಲ್ಲಿ ನಟಿಸೋಕೆ ಅವರಿಗೆ ಅವಕಾಶ ಸಿಗುತ್ತಿದೆ. ಈಗ ಅರ್ಚನಾ ಜೋಯಿಸ್​ಗೆ ಬಿಗ್​ ಆಫರ್​ ಒಂದು ಒಲಿದು ಬಂದಿದೆ. ಪ್ಯಾನ್​ ಇಂಡಿಯಾ ಚಿತ್ರದಲ್ಲಿ ನಟಿಸೋಕೆ ಅವಕಾಶ ಸಿಕ್ಕಿದ್ದು, ಈ ಚಿತ್ರಕ್ಕೆ ಮುಂಗಾರುಮಳೆ-2 ನಿರ್ಮಾಪಕ ಹಣ ಹೂಡುತ್ತಿದ್ದಾರೆ ಅನ್ನೋದು ವಿಶೇಷ. ಖ್ಯಾತ ನಿರ್ಮಾಪಕ ಜಿ.ಗಂಗಾಧರ್ ನಿರ್ಮಾಣದ ಹೊಸ ಚಿತ್ರ #ಮ್ಯೂಟ್​​ನಲ್ಲಿ ಅರ್ಚನಾ ಜೋಯಿಸ್ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಶೀರ್ಷಿಕೆಯ ಕುರಿತ 40 ಸೆಕೆಂಡ್ ವಿಡಿಯೊವೊಂದನ್ನು ಚಿತ್ರತಂಡ ಯೂಟ್ಯೂಬ್‍ನಲ್ಲಿ ಹಂಚಿಕೊಂಡಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ತಮಿಳಿನ ಖ್ಯಾತ ನಟ ಆಡುಕಲಂ ನರೇನ್ ನಟಿಸಿದ್ದಾರೆ. ಸಿದ್ದಾರ್ಥ್ ಮಾಧ್ಯಮಿಕ ಕೂಡ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.

ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಇದಕ್ಕೂ ಮೊದಲು ಚಿತ್ರದ ಶೀರ್ಷಿಕೆಯನ್ನು ನಟ ರಿಷಿ ಬುಧವಾರ ಬಿಡುಗಡೆಗೊಳಿಸಿದರು. ಮುಂಗಾರುಮಳೆ ಹಾಗೂ ಮೊಗ್ಗಿನಮನಸು ಚಿತ್ರಗಳಲ್ಲಿ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದ ಜಿ.ಗಂಗಾಧರ್ ನಂತರ ಮುಂಗಾರುಮಳೆ-2ಗೆ ಹಣ ಹೂಡಿದ್ದರು. ಈಗ ಅವರು ಪ್ಯಾನ್​ ಇಂಡಿಯಾ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ನವ ನಿರ್ದೇಶಕ ಪ್ರಶಾಂತ್ ಚಂದ್ರ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದು, ಸದ್ದಿಲ್ಲದೆ ಶೂಟಿಂಗ್ ಕೂಡ ಪೂರ್ಣಗೊಂಡಿದೆ.

ಮ್ಯೂಟ್​ ಚಿತ್ರದ ಪೋಸ್ಟರ್

ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಎಂದಷ್ಟೇ ಚಿತ್ರತಂಡ ಹೇಳಿಕೊಂಡಿದೆ. ಆದರೆ, ಪಾತ್ರಗಳ ಬಗ್ಗೆ  ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಈ ಬಗ್ಗೆ ಮಾತನಾಡಿರುವ ಪ್ರಶಾಂತ್ ಚಂದ್ರ, ನಿರ್ದೇಶಕನಾಗಿ ಇದು ನನಗೆ ಚೊಚ್ಚಲ ಚಿತ್ರ. ಸಿನಿಮಾದ ಕಥೆ ವಿಭಿನ್ನವಾಗಿದೆ. ಥ್ರಿಲ್ಲರ್ ಸಿನಿಮಾ ಆಗಿರುವುದರಿಂದ ಸಾಕಷ್ಟು ತಿರುವುಗಳು ನೋಡಲು ಸಿಗಲಿವೆ. ಶೂಟಿಂಗ್ ಮುಗಿಯುವವರೆಗೂ ನಾವು ಸಿನಿಮಾ ಕುರಿತು ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ. ಸಿನಿಮಾ ಉತ್ತಮವಾಗಿ ಮೂಡಿ ಬರಲಿದೆ ಎನ್ನುವ ನಂಬಿಕೆ ನಮ್ಮದು ಎಂದಿದ್ದಾರೆ.

#ಮ್ಯೂಟ್ ಶೀರ್ಷಿಕೆಯ ಪೋಸ್ಟರ್ ಬಿಡುಗಡೆ ಮಾಡಿದ ರಿಷಿ ಸಂತಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಪ್ರಶಾಂತ್ ಚಂದ್ರ ಅವರ ನಿರ್ದೇಶನದ ಈ ಸಿನಿಮಾಗೆ ಯಶಸ್ಸು ಸಿಗಲಿ ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: ನಿವೃತ್ತ ಬಸ್​ ಚಾಲಕರ ಪುತ್ರರಾದ ಯಶ್​ ಅವರೇ.. ನಮ್ಮ ಮುಷ್ಕರವನ್ನು ಬೆಂಬಲಿಸಿ: ಯಶ್​ಗೆ ಪತ್ರ ಬರೆದ ಸಾರಿಗೆ ನೌಕರರು

Yash: ಸೆಲೆಬ್ರಿಟಿ ಸ್ಟೈಲಿಸ್ಟ್​ ಆಲಿಮ್​ ಪಾರ್ಲರ್​ನಲ್ಲಿ ಯಶ್​; ರಾಕಿಂಗ್​ ಸ್ಟಾರ್​ ಲುಕ್​ ಬದಲಾಗಿ ಹೋಯ್ತು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ