AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಮಹತ್ಕಾರ್ಯ ಮಾಡಿದ ಅರ್ಜುನ್​ ಗೌಡ; 90 ಶವಗಳ ಬೂದಿಯನ್ನು ಗಂಗೆಯಲ್ಲಿ ವಿಸರ್ಜನೆ ಮಾಡಿದ ನಟ

ಹಿಂದುಗಳಲ್ಲಿ ಯಾರೇ ಮೃತಪಟ್ಟರೂ ಅವರನ್ನು ಸುಟ್ಟ ನಂತರ ಸಿಗುವ ಬೂದಿಯನ್ನು ಗಂಗೆಯಲ್ಲಿ ಬಿಟ್ಟರೆ ಅವರ ಆತ್ಮಕ್ಕೆ ಶಾಂತಿ ಸಿಗಲಿದೆ ಎಂಬುದು ಅನೇಕರ ನಂಬಿಕೆ. ಈ ಕಾರಣಕ್ಕೆ ಅರ್ಜುನ್​ ಅನಾಥರು ಹಾಗೂ ಬೂದಿ ತೆಗೆದುಕೊಳ್ಳಲು ಹಿಂದೇಟು ಹಾಕಿದವರಿಗೆ ಮುಕ್ತಿ ಕೊಡಿಸುವ ಕೆಲಸ ಮಾಡಿದ್ದಾರೆ.

ಮತ್ತೊಂದು ಮಹತ್ಕಾರ್ಯ ಮಾಡಿದ ಅರ್ಜುನ್​ ಗೌಡ; 90 ಶವಗಳ ಬೂದಿಯನ್ನು ಗಂಗೆಯಲ್ಲಿ ವಿಸರ್ಜನೆ ಮಾಡಿದ ನಟ
ಅರ್ಜುನ್​ ಗೌಡ
ರಾಜೇಶ್ ದುಗ್ಗುಮನೆ
|

Updated on: Jun 15, 2021 | 8:34 PM

Share

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಆಂಬುಲೆನ್ಸ್ ಚಾಲಕನಾಗುವ ಮೂಲಕ ನಟ ಅರ್ಜುನ್​ ಗೌಡ ಎಲ್ಲರಿಗೂ ಮಾದರಿಯಾಗಿದ್ದರು. ಈಗ ಅವರು ಮತ್ತೊಂದು ಮಹತ್ಕಾರ್ಯ ಮಾಡಿದ್ದಾರೆ. 90 ಶವಗಳ ಸುಟ್ಟ ಬೂದಿಯನ್ನು ಕಾಶಿಗೆ ಹೋಗಿ ಬಿಟ್ಟು ಬಂದಿದ್ದಾರೆ. ಅವರ ಕಾರ್ಯಕ್ಕೆ ಎಲ್ಲ ಕಡೆಗಳಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ.

ಕೊರೊನಾದಿಂದ ಮೃತಪಟ್ಟ ಅನೇಕ ರೋಗಿಗಳನ್ನು ಸುಡಲಾಗಿದೆ. ಹೀಗೆ ಸುಟ್ಟ ನಂತರದಲ್ಲಿ ಅನೇಕ ಕುಟುಂಬದವರು ಬೂದಿ ಪಡೆಯೋಕೆ ಹಿಂಜರಿದಿದ್ದಾರೆ. ಇನ್ನೂ ಕೆಲವು ಅನಾಥ ಶವಗಳು. ಹೀಗೆ ಒಟ್ಟು 90 ಶವಗಳ ಬೂದಿಯನ್ನು ಸಂಗ್ರಹಿಸಿಟ್ಟು, ಅದನ್ನು ಕಾಶಿಗೆ ತೆಗೆದುಕೊಂಡು ಹೋಗಿ ಅರ್ಜುನ್​ ಗೌಡ ವಿಸರ್ಜನೆ ಮಾಡಿದ್ದಾರೆ.

ಹಿಂದುಗಳಲ್ಲಿ ಯಾರೇ ಮೃತಪಟ್ಟರೂ ಅವರನ್ನು ಸುಟ್ಟ ನಂತರ ಸಿಗುವ ಬೂದಿಯನ್ನು ಗಂಗೆಯಲ್ಲಿ ಬಿಟ್ಟರೆ ಅವರ ಆತ್ಮಕ್ಕೆ ಶಾಂತಿ ಸಿಗಲಿದೆ ಎಂಬುದು ಅನೇಕರ ನಂಬಿಕೆ. ಈ ಕಾರಣಕ್ಕೆ ಅರ್ಜುನ್​ ಅನಾಥರು ಹಾಗೂ ಬೂದಿ ತೆಗೆದುಕೊಳ್ಳಲು ಹಿಂದೇಟು ಹಾಕಿದವರಿಗೆ ಮುಕ್ತಿ ಕೊಡಿಸುವ ಕೆಲಸ ಮಾಡಿದ್ದಾರೆ.

ಕಷ್ಟದಲ್ಲಿದ್ದವರಿಗೆ ನೆರವಾಗಬೇಕು ಎಂದು ಅರ್ಜುನ್​ ಗೌಡ ಆಂಬುಲೆನ್ಸ್​ ಚಾಲಕನಾಗಿ ಸೇರಿಕೊಂಡಿದ್ದರು. ಅಷ್ಟೇ ಅಲ್ಲ, ಅನಾಥ ಶವಗಳ ಅಂತ್ಯ ಸಂಸ್ಕಾರಕ್ಕೂ ಅವರು ನೆರವಾಗಿದ್ದರು. ಈಗ ಬೂದಿಯನ್ನು ತೆಗೆದುಕೊಂಡು ಹೋಗಿ ಗಂಗೆಯಲ್ಲಿ ಬಿಡುವ ಮೂಲಕ ಸಾರ್ಥಕ ಭಾವನೆ ಪಡೆದಿದ್ದಾರೆ. ಬೇರೆಯವರಿಗೋಸ್ಕರ ನಾವಿದ್ದೇವೆ ಎನ್ನುವ ಭಾವನೆ ನನ್ನದು ಎಂದು ಅವರು ಹೇಳಿದ್ದಾರೆ. ಈ ಫೋಟೋಗಳನ್ನು ಅರ್ಜುನ್ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡದಲ್ಲಿ ಶಿವರಾಜ್​ಕುಮಾರ್, ಪುನೀತ್​ ರಾಜ್​ಕುಮಾರ್​, ದರ್ಶನ್​ ಮುಂತಾದ ಸ್ಟಾರ್​ ನಟರ ಚಿತ್ರಗಳಲ್ಲಿ ಅಭಿನಯಿಸಿರುವ ಅರ್ಜುನ್​ ಗೌಡ ಅವರಿಗೆ ಫಿಟ್​ನೆಸ್​ ಬಗ್ಗೆ ಅಪಾರ ಆಸಕ್ತಿ. ರುಸ್ತುಂ, ಒಡೆಯ, ಯುವರತ್ನ ಮುಂತಾದ ಚಿತ್ರಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

ಈ ಗಾಡಿಯಲ್ಲಿ ತುಂಬಾ ಹೆಣ ಸಾಗಿಸಿದ್ದೀನಿ, ಈಗ ಮಕ್ಕಳ ಶವವನ್ನೂ ಸಾಗಿಸಬೇಕಾ? ನಟ ಅರ್ಜುನ್​ ಗೌಡ ಆತಂಕ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?