AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್ ಚಿತ್ರಕ್ಕೆ ನೀವೂ ನಾಯಕಿ ಆಗಬಹುದು; ಈ ಅರ್ಹತೆ ಇದ್ದರೆ ಮೊದಲ ಆದ್ಯತೆ 

‘ನಾತಿಚರಾಮಿ’, ‘ಗಾಳಿಪಟ 2’ ಮೊದಲಾದ ಸಿನಿಮಾಗಳನ್ನು ರಮೇಶ್‌ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಈಗ ಅವರು ಶಿವಣ್ಣ-ಅರ್ಜುನ್ ಜನ್ಯಾ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಶಿವರಾಜ್​ಕುಮಾರ್ ಚಿತ್ರಕ್ಕೆ ನೀವೂ ನಾಯಕಿ ಆಗಬಹುದು; ಈ ಅರ್ಹತೆ ಇದ್ದರೆ ಮೊದಲ ಆದ್ಯತೆ 
ಶಿವಣ್ಣ-ರಾಜ್ ಬಿ ಶೆಟ್ಟಿ-ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on: Mar 25, 2023 | 1:04 PM

Share

ಮುಖ್ಯಾಂಶಗಳು

  • ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳಲಿದೆ ಶಿವರಾಜ್​ಕುಮಾರ್​ ನಟನೆಯ ‘45’ ಚಿತ್ರ
  • ಶಿವರಾಜ್​ಕುಮಾರ್​, ಉಪೇಂದ್ರ, ರಾಜ್ ಬಿ. ಶೆಟ್ಟಿ ಒಟ್ಟಾಗಿ ನಟಿಸಲಿರುವ ಸಿನಿಮಾ
  • ಈ ಚಿತ್ರಕ್ಕೆ ಈಗ ನಾಯಕಿಯ ಹುಡುಕಾಟ ಶುರುವಾಗಿದೆ

ಶಿವರಾಜ್​ಕುಮಾರ್ (Shivarajkumar) ನಟನೆಯ ‘45’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಚಿತ್ರದ ಮೂಲಕ ಮ್ಯೂಸಿಕ್ ಡೈರೆಕ್ಟರ್​ ಅರ್ಜುನ್ ಜನ್ಯ (Arjun Janya)  ಅವರು ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರಕ್ಕೆ ಈಗ ನಾಯಕಿಯ ಹುಡುಕಾಟ ಶುರುವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆಡಿಷನ್ ಕರೆಯಲಾಗಿದೆ. ಕನ್ನಡ ಬರಲೇಬೇಕು ಎಂದು ತಂಡ ಸೂಚಿಸಿದೆ. ನಾಯಕಿ ಆಗಬೇಕು ಎಂದುಕೊಂಡವರು ಫೋಟೋ ಹಾಗೂ ವಿಡಿಯೋ ಕಳುಹಿಸಬೇಕು. ನಂತರ ಚಿತ್ರತಂಡದವರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಶಿವರಾಜ್​ಕುಮಾರ್​ ನಟನೆಯ ‘45’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳಲಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಜೊತೆ ‘ರಿಯಲ್​ ಸ್ಟಾರ್​’ ಉಪೇಂದ್ರ ಕೂಡ ನಟಿಸಲಿದ್ದಾರೆ. ‘ಕಬ್ಜ’ ಚಿತ್ರದಲ್ಲಿ ಈ ಜೋಡಿ ಮೋಡಿ ಮಾಡಿತ್ತು. ಈ ಚಿತ್ರದಲ್ಲಿ ರಾಜ್​ ಬಿ. ಶೆಟ್ಟಿ ಕೂಡ ಇದ್ದಾರೆ. ಈ ಸಿನಿಮಾಗೆ ರಮೇಶ್​ ರೆಡ್ಡಿ ಬಂಡವಾಳ ಹೂಡುತ್ತಿದ್ದು, ಅರ್ಜುನ್​ ಜನ್ಯ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈಗ ತಂಡಕ್ಕೆ ನಾಯಕಿಗಾಗಿ ಹುಡುಕಾಟ ಆರಂಭ ಆಗಿದೆ.

‘ನಾತಿಚರಾಮಿ’, ‘ಗಾಳಿಪಟ 2’ ಮೊದಲಾದ ಸಿನಿಮಾಗಳನ್ನು ರಮೇಶ್‌ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಈಗ ಅವರು ಶಿವಣ್ಣ-ಅರ್ಜುನ್ ಜನ್ಯಾ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯ ಹುಡುಕಾಟ ನಡೆಸುತ್ತಿದೆ‌. ಈ ಸಿನಿಮಾದಲ್ಲಿ ನಟಿಸಬೇಕು ಎಂದುಕೊಳ್ಳುವವರಿಗೆ ಕನ್ನಡ ಬರಬೇಕು. ಅಂಥವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಸಕ್ತಿ ಇರುವವರು ತಮ್ಮ ಇತ್ತೀಚಿನ ಎಡಿಟ್ ಮಾಡದ ಫೋಟೋ ಹಾಗೂ ಚಿಕ್ಕ ವಿಡಿಯೋ ತುಣುಕನ್ನು 45kannadamovie@gmail.comಗೆ ಕಳುಹಿಸಬೇಕು.

ದೊಡ್ಡ ಬಜೆಟ್​ನಲ್ಲಿ ‘45’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭ ಆಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಸಿನಿಮಾ ತೆರೆಕಾಣಿಸಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಕೂಡ ವಹಿಸಿಕೊಂಡಿದ್ದಾರೆ. ಚಿತ್ರದ ಆಡಿಯೋ ಹಕ್ಕುಗಳಿಗೆ ಸಖತ್​ ಡಿಮ್ಯಾಂಡ್ ಬಂದಿದೆ ಎನ್ನಲಾಗಿದೆ.

ಇದನ್ನೂ ಓದಿ: ‘ಕಬ್ಜ’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​ಗೆ ಶಿವರಾಜ್​ಕುಮಾರ್ ಗೈರು; ಕಾರಣ ಏನು?

ಶಿವರಾಜ್​ಕುಮಾರ್​ ಮತ್ತು ಉಪೇಂದ್ರ ಅವರು ಈ ಚಿತ್ರದಲ್ಲಿ ಜೊತೆಯಾಗಿ ನಟಿಸಲಿರುವುದರಿಂದ ಅವರಿಬ್ಬರ ಪಾತ್ರಗಳು ಹೇಗಿರಲಿವೆ ಎಂಬ ಕೌತುಕ ನಿರ್ಮಾಣ ಆಗಿದೆ. ಈ ಹಿಂದೆ ‘ಓಂ’ ಚಿತ್ರದಲ್ಲಿ ಉಪೇಂದ್ರ ಮತ್ತು ಶಿವಣ್ಣ ಒಟ್ಟಿಗೆ ಕೆಲಸ ಮಾಡಿದ್ದರು. ಬಳಿಕ ‘ಪ್ರೀತ್ಸೆ’, ‘ಲವ ಕುಶ’, ‘ಕಬ್ಜ’ ಚಿತ್ರದಲ್ಲಿ ತೆರೆ ಹಂಚಿಕೊಂಡಿದ್ದರು. ಈ ಮತ್ತೆ ಅವರಿಬ್ಬರು ‘45’ ಚಿತ್ರಕ್ಕಾಗಿ ಒಂದಾಗಿರುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್