AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್ ಚಿತ್ರಕ್ಕೆ ನೀವೂ ನಾಯಕಿ ಆಗಬಹುದು; ಈ ಅರ್ಹತೆ ಇದ್ದರೆ ಮೊದಲ ಆದ್ಯತೆ 

‘ನಾತಿಚರಾಮಿ’, ‘ಗಾಳಿಪಟ 2’ ಮೊದಲಾದ ಸಿನಿಮಾಗಳನ್ನು ರಮೇಶ್‌ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಈಗ ಅವರು ಶಿವಣ್ಣ-ಅರ್ಜುನ್ ಜನ್ಯಾ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಶಿವರಾಜ್​ಕುಮಾರ್ ಚಿತ್ರಕ್ಕೆ ನೀವೂ ನಾಯಕಿ ಆಗಬಹುದು; ಈ ಅರ್ಹತೆ ಇದ್ದರೆ ಮೊದಲ ಆದ್ಯತೆ 
ಶಿವಣ್ಣ-ರಾಜ್ ಬಿ ಶೆಟ್ಟಿ-ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on: Mar 25, 2023 | 1:04 PM

Share

ಶಿವರಾಜ್​ಕುಮಾರ್ (Shivarajkumar) ನಟನೆಯ ‘45’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಚಿತ್ರದ ಮೂಲಕ ಮ್ಯೂಸಿಕ್ ಡೈರೆಕ್ಟರ್​ ಅರ್ಜುನ್ ಜನ್ಯ (Arjun Janya)  ಅವರು ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರಕ್ಕೆ ಈಗ ನಾಯಕಿಯ ಹುಡುಕಾಟ ಶುರುವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆಡಿಷನ್ ಕರೆಯಲಾಗಿದೆ. ಕನ್ನಡ ಬರಲೇಬೇಕು ಎಂದು ತಂಡ ಸೂಚಿಸಿದೆ. ನಾಯಕಿ ಆಗಬೇಕು ಎಂದುಕೊಂಡವರು ಫೋಟೋ ಹಾಗೂ ವಿಡಿಯೋ ಕಳುಹಿಸಬೇಕು. ನಂತರ ಚಿತ್ರತಂಡದವರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಶಿವರಾಜ್​ಕುಮಾರ್​ ನಟನೆಯ ‘45’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳಲಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಜೊತೆ ‘ರಿಯಲ್​ ಸ್ಟಾರ್​’ ಉಪೇಂದ್ರ ಕೂಡ ನಟಿಸಲಿದ್ದಾರೆ. ‘ಕಬ್ಜ’ ಚಿತ್ರದಲ್ಲಿ ಈ ಜೋಡಿ ಮೋಡಿ ಮಾಡಿತ್ತು. ಈ ಚಿತ್ರದಲ್ಲಿ ರಾಜ್​ ಬಿ. ಶೆಟ್ಟಿ ಕೂಡ ಇದ್ದಾರೆ. ಈ ಸಿನಿಮಾಗೆ ರಮೇಶ್​ ರೆಡ್ಡಿ ಬಂಡವಾಳ ಹೂಡುತ್ತಿದ್ದು, ಅರ್ಜುನ್​ ಜನ್ಯ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈಗ ತಂಡಕ್ಕೆ ನಾಯಕಿಗಾಗಿ ಹುಡುಕಾಟ ಆರಂಭ ಆಗಿದೆ.

‘ನಾತಿಚರಾಮಿ’, ‘ಗಾಳಿಪಟ 2’ ಮೊದಲಾದ ಸಿನಿಮಾಗಳನ್ನು ರಮೇಶ್‌ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಈಗ ಅವರು ಶಿವಣ್ಣ-ಅರ್ಜುನ್ ಜನ್ಯಾ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕಿಯ ಹುಡುಕಾಟ ನಡೆಸುತ್ತಿದೆ‌. ಈ ಸಿನಿಮಾದಲ್ಲಿ ನಟಿಸಬೇಕು ಎಂದುಕೊಳ್ಳುವವರಿಗೆ ಕನ್ನಡ ಬರಬೇಕು. ಅಂಥವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಸಕ್ತಿ ಇರುವವರು ತಮ್ಮ ಇತ್ತೀಚಿನ ಎಡಿಟ್ ಮಾಡದ ಫೋಟೋ ಹಾಗೂ ಚಿಕ್ಕ ವಿಡಿಯೋ ತುಣುಕನ್ನು 45kannadamovie@gmail.comಗೆ ಕಳುಹಿಸಬೇಕು.

ದೊಡ್ಡ ಬಜೆಟ್​ನಲ್ಲಿ ‘45’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭ ಆಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಸಿನಿಮಾ ತೆರೆಕಾಣಿಸಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಕೂಡ ವಹಿಸಿಕೊಂಡಿದ್ದಾರೆ. ಚಿತ್ರದ ಆಡಿಯೋ ಹಕ್ಕುಗಳಿಗೆ ಸಖತ್​ ಡಿಮ್ಯಾಂಡ್ ಬಂದಿದೆ ಎನ್ನಲಾಗಿದೆ.

ಇದನ್ನೂ ಓದಿ: ‘ಕಬ್ಜ’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​ಗೆ ಶಿವರಾಜ್​ಕುಮಾರ್ ಗೈರು; ಕಾರಣ ಏನು?

ಶಿವರಾಜ್​ಕುಮಾರ್​ ಮತ್ತು ಉಪೇಂದ್ರ ಅವರು ಈ ಚಿತ್ರದಲ್ಲಿ ಜೊತೆಯಾಗಿ ನಟಿಸಲಿರುವುದರಿಂದ ಅವರಿಬ್ಬರ ಪಾತ್ರಗಳು ಹೇಗಿರಲಿವೆ ಎಂಬ ಕೌತುಕ ನಿರ್ಮಾಣ ಆಗಿದೆ. ಈ ಹಿಂದೆ ‘ಓಂ’ ಚಿತ್ರದಲ್ಲಿ ಉಪೇಂದ್ರ ಮತ್ತು ಶಿವಣ್ಣ ಒಟ್ಟಿಗೆ ಕೆಲಸ ಮಾಡಿದ್ದರು. ಬಳಿಕ ‘ಪ್ರೀತ್ಸೆ’, ‘ಲವ ಕುಶ’, ‘ಕಬ್ಜ’ ಚಿತ್ರದಲ್ಲಿ ತೆರೆ ಹಂಚಿಕೊಂಡಿದ್ದರು. ಈ ಮತ್ತೆ ಅವರಿಬ್ಬರು ‘45’ ಚಿತ್ರಕ್ಕಾಗಿ ಒಂದಾಗಿರುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!