AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್​ ಜನ್ಯ ಅಣ್ಣ ಕೊರೊನಾದಿಂದ ನಿಧನ; ನೋವು ತೋಡಿಕೊಂಡ ಸಂಗೀತ ನಿರ್ದೇಶಕ

Arjun Janya Brother Death: ಅರ್ಜುನ್​ ಜನ್ಯ ಅವರಿಗೆ ಕಳೆದ ತಿಂಗಳು ಕೊರೊನಾ ಪಾಸಿಟಿವ್​ ಆಗಿತ್ತು. ಹೀಗಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ಬಂದು ಕ್ವಾರಂಟೈನ್​ ಆಗಿದ್ದರು.

ಅರ್ಜುನ್​ ಜನ್ಯ ಅಣ್ಣ ಕೊರೊನಾದಿಂದ ನಿಧನ; ನೋವು ತೋಡಿಕೊಂಡ ಸಂಗೀತ ನಿರ್ದೇಶಕ
ಅಣ್ಣನ ಜತೆ ಅರ್ಜುನ್​ ಜನ್ಯ
ರಾಜೇಶ್ ದುಗ್ಗುಮನೆ
|

Updated on:May 03, 2021 | 7:04 PM

Share

ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರಿಗೆ ಕಳೆದ ತಿಂಗಳು ಕೊರೊನಾ ಪಾಸಿಟಿವ್​ ಆಗಿತ್ತು. ಕೆಲ ದಿನಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು ನಂತರ ಚೇತರಿಕೆ ಕಂಡು ಮನೆಗೆ ಬಂದಿದ್ದರು. ಆದರೆ, ಈಗ ಅವರ ಅಣ್ಣ ಕಿರಣ್​ ಕೊರೊನಾದಿಂದ ನಿಧನ ಹೊಂದಿದ್ದಾರೆ. ಈ ವಿಚಾರವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಅರ್ಜುನ್​ ಜನ್ಯ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಹಾಕಿದ್ದಾರೆ. ಕೊರೊನಾದಿಂದ ನಾನು ನನ್ನ ಅಣ್ಣನನ್ನು ಕಳೆದುಕೊಂಡಿದ್ದೇನೆ. ನನ್ನ ನೋವನ್ನು ಹೇಗೆ ವ್ಯಕ್ತಪಡಿಸಬೇಕು ಎಂಬುದು ಗೊತ್ತಾಗುತ್ತಿಲ್ಲ. ನನ್ನ ಉಸಿರು ಇರುವವರೆಗೂ ನೀನೇ ನನ್ನ ಉಸಿರು ಎಂದು ಅರ್ಜುನ್​ ಜನ್ಯ ಹೇಳಿದ್ದಾರೆ.

ಅರ್ಜುನ್​ ಜನ್ಯ ಅವರಿಗೆ ಕಳೆದ ತಿಂಗಳು ಕೊರೊನಾ ಪಾಸಿಟಿವ್​ ಆಗಿತ್ತು. ಹೀಗಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ಬಂದು ಕ್ವಾರಂಟೈನ್​ ಆಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ನಕಲಿ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆ ಅರ್ಜುನ್​ ಜನ್ಯ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ ಈ ಬಗ್ಗೆ ಸೈಬರ್​ ಠಾಣೆಗೆ ದೂರು ನೀಡಿದ್ದರು.

ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದರಿಂದ ಏಪ್ರಿಲ್​ 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಹಿಂದಿರುಗಿದ್ದಾರೆ. ಈಗ ಅವರು ಚೇತರಿಕೆ ಕಾಣುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ತರಿಸಿದೆ. ಆದರೆ, ಅವರಿಗೆ ಕೊರೊನಾ ಪಾಸಿಟಿವ್​ ಆದ ಸಮಯದಲ್ಲಿ ಸಾಕಷ್ಟು ಯೂಟ್ಯೂಬ್​ ಚಾನೆಲ್​ಗಳು ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ದವು.

ಈ ಬಗ್ಗೆ ಓಪನ್​ ಲೆಟರ್ ಬರೆದಿದ್ದ ಅರ್ಜುನ್​ ಜನ್ಯ, , ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲ ಯೂಟ್ಯೂಬ್​​ ಚಾನೆಲ್​ಗಳು ನನ್ನ ಬಗ್ಗೆ, ನನ್ನ ಕುಟುಂಬದ ಪರಿಸ್ಥಿತಿ ಹಾಗೂ ಆರೋಗ್ಯದ ಬಗ್ಗೆ ತಪ್ಪು ಮಾಹಿತಿ ಹಂಚಿಕೊಂಡಿದ್ದಾರೆ. ಇದು ಸರಿಹೋಗಬಹುದು ಎಂದು ನಾನು ಸಮಾಧಾನದಿಂದ ಇದ್ದೆ. ಆದರೆ, ಅದು ಹೆಚ್ಚಾಗುತ್ತಿದೆ. ಕೆಲವು ಯೂಟ್ಯೂಬ್​ ಚಾನೆಲ್​ಗಳು ನೀಡಿದ ಮಾಹಿತಿ ಅಪ್ಪಟ ಸುಳ್ಳು. ನಾನು ಆರೋಗ್ಯವಾಗಿದ್ದೇನೆ. ಕೊವಿಡ್​ನಿಂದ ಗುಣಮುಖನಾಗಿ ವೈದ್ಯರ ಸಲಹೆಯಂತೆ ಐಸೋಲೇಷನ್​ನಲ್ಲಿದ್ದೆ. ಯೂಟ್ಯೂಬ್​ ಚಾನೆಲ್​ಗಳು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಬಾರದು.ಈಗಾಗಲೇ ನನ್ನ ಗಮನಕ್ಕೆ ಬಂದಿರುವ ಎಲ್ಲವನ್ನೂ ಸೈಬರ್​ ಪೊಲೀಸರಿಗೆ ನೀಡಿದ್ದೇನೆ. ದಯವಿಟ್ಟು ಈ ವಿಡಿಯೋಗಳನ್ನು ತೆಗೆದು ಹಾಕಿ ಎನ್ನುವ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಅರ್ಜುನ್​ ಜನ್ಯ ಆರೋಗ್ಯದಲ್ಲಿ ಚೇತರಿಕೆ; ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ಭಾಗಿ

ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಅರ್ಜುನ್​ ಜನ್ಯ ಎಚ್ಚರಿಕೆ! ಸೈಬರ್​ ಠಾಣೆಗೆ ದೂರು

Published On - 6:56 pm, Mon, 3 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ