AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಸಿನಿಮಾದಿಂದ ಬಿಡುಗಡೆ ಆಯ್ತು ಶಿವನ ಹಾಡು ‘ಶಿವಂ ಶಿವಂ ಸನಾತನಂ’

ಶಿವನ ಕುರಿತ ‘ಶಿವಂ ಶಿವಂ ಸನಾತನಂ’ ಎಂಬ ಹಾಡನ್ನು ‘45’ ಸಿನಿಮಾ ತಂಡದವರು ಬಿಡುಗಡೆ ಮಾಡಿದ್ದಾರೆ. ಈ ಸಿನಿಮಾಗೆ ಅರ್ಜುನ್ ಜನ್ಯ ಅವರು ನಿರ್ದೇಶನ ಮತ್ತು ಸಂಗೀತ ಸಂಯೋಜನೆ ಮಾಡಿದ್ದಾರೆ ಎಂಬುದು ವಿಶೇಷ. ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ‘45’ ಚಿತ್ರತಂಡದವರು ಮಾತನಾಡಿದರು. ಆ ಬಗ್ಗೆ ಇಲ್ಲಿದೆ ವಿವರ.

‘45’ ಸಿನಿಮಾದಿಂದ ಬಿಡುಗಡೆ ಆಯ್ತು ಶಿವನ ಹಾಡು ‘ಶಿವಂ ಶಿವಂ ಸನಾತನಂ’
Shivam Shivam Sanaatanam Song Release Event
ಮದನ್​ ಕುಮಾರ್​
|

Updated on: May 23, 2025 | 8:52 PM

Share

‘45’ ಸಿನಿಮಾದಲ್ಲಿ ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya) ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದು. ‘ಸೂರಜ್ ಪ್ರೊಡಕ್ಷನ್ಸ್’ ಮೂಲಕ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಾಣ ಮಾಡಿದ್ದಾರೆ. ‘45’ (45 Movie) ಸಿನಿಮಾಗಾಗಿ ವಿ. ನಾಗೇಂದ್ರ ಪ್ರಸಾದ್ ಅವರು ‘ಶಿವಂ ಶಿವಂ ಸನಾತನಂ..’ ಹಾಡು ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿ ನೀಡಿದ್ದಾರೆ. ಇತ್ತೀಚೆಗೆ ಈ ಸಾಂಗ್ ರಿಲೀಸ್ ಆಯಿತು.

ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಅವರು ದೆಹಲಿಯಿಂದ ಬಂದು ಈ ಹಾಡನ್ನು ಬಿಡುಗಡೆ ಮಾಡಿದರು. ಬಳಿಕ ಅವರು ಚಿತ್ರತಂಡದವನ್ನು ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಈ ಗೀತೆಗೆ ಶಿವರಾಜ್​ಕುಮಾರ್ ಡ್ಯಾನ್ಸ್ ಮಾಡಿದ್ದು ವಿಶೇಷವಾಗಿತ್ತು. ‘ಆನಂದ್ ಆಡಿಯೋ’ ಮೂಲಕ ಈ ಹಾಡು ರಿಲೀಸ್ ಆಗಿದೆ.

ನಿರ್ಮಾಪಕ ರಮೇಶ್ ರೆಡ್ಡಿ ಅವರು ಈ ಸಂದರ್ಭದಲ್ಲಿ ಮಾತನಾಡಿದರು. ದೂರದಿಂದ ಬಂದು ಹಾಡು ಬಿಡುಗಡೆ ಮಾಡಿಕೊಟ್ಟ ಪೂಜ್ಯರಿಗೆ ಅವರು ಧನ್ಯವಾದ ಅರ್ಪಿಸಿದರು. ‘ನಮ್ಮ ಸಿನಿಮಾಗೆ ಅರ್ಜುನ್ ಜನ್ಯ ಅವರಂತಹ ಡೈರೆಕ್ಟರ್ ಸಿಕ್ಕಿದ್ದು ತುಂಬ ಖುಷಿ ಆಗಿದೆ. ಈ ಸಿನಿಮಾದ ಶುರುವಿನಿಂದ ಅವರು ಈ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಈಗ ಬಿಡುಗಡೆ ಆಗಿರುವ ಶಿವನ ಕುರಿತ ಹಾಡು ನನ್ನ ಮನಸ್ಸಿಗೆ ಬಹಳ ಹತ್ತಿರವಾಗಿದೆ. ಈ ಸಾಂಗ್ ಇಡೀ ದೇಶದಲ್ಲಿ ಸದ್ದು ಮಾಡಲಿದೆ’ ಎಂದು ರಮೇಶ್ ರೆಡ್ಡಿ ಹೇಳಿದರು.

ಇದನ್ನೂ ಓದಿ
Image
‘ರಾಮಾಯಣ’ ಬಿಡುಗಡೆ ದಿನಾಂಕ ಘೋಷಣೆ: ಯಶ್ ಫಸ್ಟ್ ಲುಕ್​ಗೆ ಹೆಚ್ಚಿತು ಬೇಡಿಕೆ
Image
ಅಬ್ಬಬ್ಬಾ... ‘ರಾಮಾಯಣ’ ಸಿನಿಮಾ ಬಜೆಟ್​ ಬರೋಬ್ಬರಿ 835 ಕೋಟಿ ರೂಪಾಯಿ?
Image
‘ರಾಮಾಯಣ’ ಚಿತ್ರತಂಡದಿಂದ ಕಾಪಿರೈಟ್​ ಉಲ್ಲಂಘನೆ? ನಿರ್ಮಾಪಕರಿಗೆ ನೋಟಿಸ್​
Image
ರಾಮಾಯಣ ಸಿನಿಮಾಗಾಗಿ ಹಳ್ಳಿಗೆ ಹೋಗಿ ತರಬೇತಿ ಪಡೆಯುತ್ತಿರುವ ರಣಬೀರ್​ ಕಪೂರ್​

‘ಶಿವಂ ಶಿವಂ ಸನಾತನಂ..’ ಹಾಡು:

ನಿರ್ದೇಶಕ ಅರ್ಜುನ್ ಜನ್ಯ ಅವರು ಮಾತನಾಡಿ, ‘ಶಿವನ ಕುರಿತಾದ ಹಾಡು ಬರೆದುಕೊಟ್ಟ ನಾಗೇಂದ್ರ ಪ್ರಸಾದ್ ಮತ್ತು ಧ್ವನಿ ನೀಡಿದ ವಿಜಯ್ ಪ್ರಕಾಶ್ ಅವರಿಗೆ ಧನ್ಯವಾದಗಳು. ಈ ಹಾಡು ಮತ್ತು ಸಿನಿಮಾ ಇಷ್ಟು ಚೆನ್ನಾಗಿ ಮೂಡಿಬರಲು ನಿರ್ಮಾಪಕ ರಮೇಶ್ ರೆಡ್ಡಿ ಅವರೇ ಮುಖ್ಯ ಕಾರಣ. ನಾನು ಡೈರೆಕ್ಷನ್ ಮಾಡಲು ಪ್ರೇರಣೆ ನೀಡಿದ್ದೇ ಶಿವರಾಜ್​ಕುಮಾರ್. ಅವರ ಪ್ರೋತ್ಸಾಹಕ್ಕೆ ನಾನು ಚಿರ ಋಣಿ ಆಗಿರುವೆ’ ಎಂದರು.

ಇದನ್ನೂ ಓದಿ: ಇದು ಬರೀ ಸಿನಿಮಾ ಹಾಡಲ್ಲ, ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು

ಶಿವರಾಜ್​ಕುಮಾರ್ ಅವರು ಅರ್ಜುನ್ ಜನ್ಯ ಪ್ರತಿಭೆಯನ್ನು ಹೊಗಳಿದರು. ‘ಅರ್ಜುನ್ ಜನ್ಯ ಕರ್ನಾಟಕ ಮಾತ್ರವಲ್ಲದೇ ಇಡೀ ದೇಶದಲ್ಲೇ ಉತ್ತಮ ನಿರ್ದೇಶಕನಾಗಿ ಹೆಸರು ಮಾಡುತ್ತಾರೆ. ಈಗ ಬಿಡುಗಡೆ ಆಗಿರುವ ಶಿವನ ಹಾಡಂತೂ ಬಹಳ ಚೆನ್ನಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ ನಮ್ಮ ಕುಟುಂಬದವರಂತೆ. ಕಳೆದ ವರ್ಷ ನಾನು ಈ ಸಿನಿಮಾಗೆ ಕನ್ನಡದಲ್ಲಿ ಡಬ್ಬಿಂಗ್ ಮುಗಿಸಿದ್ದೆ. ಈಗ ತಮಿಳಿನಲ್ಲಿ ಡಬ್ ಮಾಡುತ್ತಿದ್ದೇನೆ. ಆದಷ್ಟು ಎಲ್ಲಾ ಭಾಷೆಗಳಲ್ಲೂ ನಾನೇ ಡಬ್ ಮಾಡುತ್ತೇನೆ‌’ ಎಂದು ಶಿವಣ್ಣ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು