AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಸಿನಿಮಾದಿಂದ ಬಿಡುಗಡೆ ಆಯ್ತು ಶಿವನ ಹಾಡು ‘ಶಿವಂ ಶಿವಂ ಸನಾತನಂ’

ಶಿವನ ಕುರಿತ ‘ಶಿವಂ ಶಿವಂ ಸನಾತನಂ’ ಎಂಬ ಹಾಡನ್ನು ‘45’ ಸಿನಿಮಾ ತಂಡದವರು ಬಿಡುಗಡೆ ಮಾಡಿದ್ದಾರೆ. ಈ ಸಿನಿಮಾಗೆ ಅರ್ಜುನ್ ಜನ್ಯ ಅವರು ನಿರ್ದೇಶನ ಮತ್ತು ಸಂಗೀತ ಸಂಯೋಜನೆ ಮಾಡಿದ್ದಾರೆ ಎಂಬುದು ವಿಶೇಷ. ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ‘45’ ಚಿತ್ರತಂಡದವರು ಮಾತನಾಡಿದರು. ಆ ಬಗ್ಗೆ ಇಲ್ಲಿದೆ ವಿವರ.

‘45’ ಸಿನಿಮಾದಿಂದ ಬಿಡುಗಡೆ ಆಯ್ತು ಶಿವನ ಹಾಡು ‘ಶಿವಂ ಶಿವಂ ಸನಾತನಂ’
Shivam Shivam Sanaatanam Song Release Event
ಮದನ್​ ಕುಮಾರ್​
|

Updated on: May 23, 2025 | 8:52 PM

Share

‘45’ ಸಿನಿಮಾದಲ್ಲಿ ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya) ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದು. ‘ಸೂರಜ್ ಪ್ರೊಡಕ್ಷನ್ಸ್’ ಮೂಲಕ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಾಣ ಮಾಡಿದ್ದಾರೆ. ‘45’ (45 Movie) ಸಿನಿಮಾಗಾಗಿ ವಿ. ನಾಗೇಂದ್ರ ಪ್ರಸಾದ್ ಅವರು ‘ಶಿವಂ ಶಿವಂ ಸನಾತನಂ..’ ಹಾಡು ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿ ನೀಡಿದ್ದಾರೆ. ಇತ್ತೀಚೆಗೆ ಈ ಸಾಂಗ್ ರಿಲೀಸ್ ಆಯಿತು.

ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಅವರು ದೆಹಲಿಯಿಂದ ಬಂದು ಈ ಹಾಡನ್ನು ಬಿಡುಗಡೆ ಮಾಡಿದರು. ಬಳಿಕ ಅವರು ಚಿತ್ರತಂಡದವನ್ನು ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಈ ಗೀತೆಗೆ ಶಿವರಾಜ್​ಕುಮಾರ್ ಡ್ಯಾನ್ಸ್ ಮಾಡಿದ್ದು ವಿಶೇಷವಾಗಿತ್ತು. ‘ಆನಂದ್ ಆಡಿಯೋ’ ಮೂಲಕ ಈ ಹಾಡು ರಿಲೀಸ್ ಆಗಿದೆ.

ನಿರ್ಮಾಪಕ ರಮೇಶ್ ರೆಡ್ಡಿ ಅವರು ಈ ಸಂದರ್ಭದಲ್ಲಿ ಮಾತನಾಡಿದರು. ದೂರದಿಂದ ಬಂದು ಹಾಡು ಬಿಡುಗಡೆ ಮಾಡಿಕೊಟ್ಟ ಪೂಜ್ಯರಿಗೆ ಅವರು ಧನ್ಯವಾದ ಅರ್ಪಿಸಿದರು. ‘ನಮ್ಮ ಸಿನಿಮಾಗೆ ಅರ್ಜುನ್ ಜನ್ಯ ಅವರಂತಹ ಡೈರೆಕ್ಟರ್ ಸಿಕ್ಕಿದ್ದು ತುಂಬ ಖುಷಿ ಆಗಿದೆ. ಈ ಸಿನಿಮಾದ ಶುರುವಿನಿಂದ ಅವರು ಈ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಈಗ ಬಿಡುಗಡೆ ಆಗಿರುವ ಶಿವನ ಕುರಿತ ಹಾಡು ನನ್ನ ಮನಸ್ಸಿಗೆ ಬಹಳ ಹತ್ತಿರವಾಗಿದೆ. ಈ ಸಾಂಗ್ ಇಡೀ ದೇಶದಲ್ಲಿ ಸದ್ದು ಮಾಡಲಿದೆ’ ಎಂದು ರಮೇಶ್ ರೆಡ್ಡಿ ಹೇಳಿದರು.

ಇದನ್ನೂ ಓದಿ
Image
‘ರಾಮಾಯಣ’ ಬಿಡುಗಡೆ ದಿನಾಂಕ ಘೋಷಣೆ: ಯಶ್ ಫಸ್ಟ್ ಲುಕ್​ಗೆ ಹೆಚ್ಚಿತು ಬೇಡಿಕೆ
Image
ಅಬ್ಬಬ್ಬಾ... ‘ರಾಮಾಯಣ’ ಸಿನಿಮಾ ಬಜೆಟ್​ ಬರೋಬ್ಬರಿ 835 ಕೋಟಿ ರೂಪಾಯಿ?
Image
‘ರಾಮಾಯಣ’ ಚಿತ್ರತಂಡದಿಂದ ಕಾಪಿರೈಟ್​ ಉಲ್ಲಂಘನೆ? ನಿರ್ಮಾಪಕರಿಗೆ ನೋಟಿಸ್​
Image
ರಾಮಾಯಣ ಸಿನಿಮಾಗಾಗಿ ಹಳ್ಳಿಗೆ ಹೋಗಿ ತರಬೇತಿ ಪಡೆಯುತ್ತಿರುವ ರಣಬೀರ್​ ಕಪೂರ್​

‘ಶಿವಂ ಶಿವಂ ಸನಾತನಂ..’ ಹಾಡು:

ನಿರ್ದೇಶಕ ಅರ್ಜುನ್ ಜನ್ಯ ಅವರು ಮಾತನಾಡಿ, ‘ಶಿವನ ಕುರಿತಾದ ಹಾಡು ಬರೆದುಕೊಟ್ಟ ನಾಗೇಂದ್ರ ಪ್ರಸಾದ್ ಮತ್ತು ಧ್ವನಿ ನೀಡಿದ ವಿಜಯ್ ಪ್ರಕಾಶ್ ಅವರಿಗೆ ಧನ್ಯವಾದಗಳು. ಈ ಹಾಡು ಮತ್ತು ಸಿನಿಮಾ ಇಷ್ಟು ಚೆನ್ನಾಗಿ ಮೂಡಿಬರಲು ನಿರ್ಮಾಪಕ ರಮೇಶ್ ರೆಡ್ಡಿ ಅವರೇ ಮುಖ್ಯ ಕಾರಣ. ನಾನು ಡೈರೆಕ್ಷನ್ ಮಾಡಲು ಪ್ರೇರಣೆ ನೀಡಿದ್ದೇ ಶಿವರಾಜ್​ಕುಮಾರ್. ಅವರ ಪ್ರೋತ್ಸಾಹಕ್ಕೆ ನಾನು ಚಿರ ಋಣಿ ಆಗಿರುವೆ’ ಎಂದರು.

ಇದನ್ನೂ ಓದಿ: ಇದು ಬರೀ ಸಿನಿಮಾ ಹಾಡಲ್ಲ, ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು

ಶಿವರಾಜ್​ಕುಮಾರ್ ಅವರು ಅರ್ಜುನ್ ಜನ್ಯ ಪ್ರತಿಭೆಯನ್ನು ಹೊಗಳಿದರು. ‘ಅರ್ಜುನ್ ಜನ್ಯ ಕರ್ನಾಟಕ ಮಾತ್ರವಲ್ಲದೇ ಇಡೀ ದೇಶದಲ್ಲೇ ಉತ್ತಮ ನಿರ್ದೇಶಕನಾಗಿ ಹೆಸರು ಮಾಡುತ್ತಾರೆ. ಈಗ ಬಿಡುಗಡೆ ಆಗಿರುವ ಶಿವನ ಹಾಡಂತೂ ಬಹಳ ಚೆನ್ನಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ ನಮ್ಮ ಕುಟುಂಬದವರಂತೆ. ಕಳೆದ ವರ್ಷ ನಾನು ಈ ಸಿನಿಮಾಗೆ ಕನ್ನಡದಲ್ಲಿ ಡಬ್ಬಿಂಗ್ ಮುಗಿಸಿದ್ದೆ. ಈಗ ತಮಿಳಿನಲ್ಲಿ ಡಬ್ ಮಾಡುತ್ತಿದ್ದೇನೆ. ಆದಷ್ಟು ಎಲ್ಲಾ ಭಾಷೆಗಳಲ್ಲೂ ನಾನೇ ಡಬ್ ಮಾಡುತ್ತೇನೆ‌’ ಎಂದು ಶಿವಣ್ಣ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ