AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಅರ್ಜುನ್​ ಜನ್ಯ ಎಚ್ಚರಿಕೆ! ಸೈಬರ್​ ಠಾಣೆಗೆ ದೂರು

ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದರಿಂದ ಏಪ್ರಿಲ್​ 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಹಿಂದಿರುಗಿದ್ದಾರೆ. ಈಗ ಅವರು ಚೇತರಿಕೆ ಕಾಣುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ತರಿಸಿದೆ.

ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಅರ್ಜುನ್​ ಜನ್ಯ ಎಚ್ಚರಿಕೆ! ಸೈಬರ್​ ಠಾಣೆಗೆ ದೂರು
ಅರ್ಜುನ್​ ಜನ್ಯ
ರಾಜೇಶ್ ದುಗ್ಗುಮನೆ
|

Updated on:Apr 16, 2021 | 10:23 PM

Share

ಅರ್ಜುನ್​ ಜನ್ಯ ಅವರಿಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್​ ಆಗಿತ್ತು. ಹೀಗಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ಬಂದು ಕ್ವಾರಂಟೈನ್​ ಆಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ನಕಲಿ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆ ಅರ್ಜುನ್​ ಜನ್ಯ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ ಈ ಬಗ್ಗೆ ಸೈಬರ್​ ಠಾಣೆಗೆ ದೂರು ಕೂಡ ನೀಡಿದ್ದಾರೆ.

ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದರಿಂದ ಏಪ್ರಿಲ್​ 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಹಿಂದಿರುಗಿದ್ದಾರೆ. ಈಗ ಅವರು ಚೇತರಿಕೆ ಕಾಣುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ತರಿಸಿದೆ. ಆದರೆ, ಅವರಿಗೆ ಕೊರೊನಾ ಪಾಸಿಟಿವ್​ ಆದ ಸಮಯದಲ್ಲಿ ಸಾಕಷ್ಟು ಯೂಟ್ಯೂಬ್​ ಚಾನೆಲ್​ಗಳು ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದವು.

ಈ ಬಗ್ಗೆ ಓಪನ್ ಲೆಟರ್​ ಬರೆದಿರುವ ಅರ್ಜುನ್​ ಜನ್ಯ, ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲ ಯೂಟ್ಯೂಬ್​​ ಚಾನೆಲ್​ಗಳು ನನ್ನ ಬಗ್ಗೆ, ನನ್ನ ಕುಟುಂಬದ ಪರಿಸ್ಥಿತಿ ಹಾಗೂ ಆರೋಗ್ಯದ ಬಗ್ಗೆ ತಪ್ಪು ಮಾಹಿತಿ ಹಂಚಿಕೊಂಡಿದ್ದಾರೆ. ಇದು ಸರಿಹೋಗಬಹುದು ಎಂದು ನಾನು ಸಮಾಧಾನದಿಂದ ಇದ್ದೆ. ಆದರೆ, ಅದು ಹೆಚ್ಚಾಗುತ್ತಿದೆ. ಕೆಲವು ಯೂಟ್ಯೂಬ್​ ಚಾನೆಲ್​ಗಳು ನೀಡಿದ ಮಾಹಿತಿ ಅಪ್ಪಟ ಸುಳ್ಳು. ನಾನು ಆರೋಗ್ಯವಾಗಿದ್ದೇನೆ. ಕೊವಿಡ್​ನಿಂದ ಗುಣಮುಖನಾಗಿ ವೈದ್ಯರ ಸಲಹೆಯಂತೆ ಐಸೋಲೇಷನ್​ನಲ್ಲಿದ್ದೆ. ಯೂಟ್ಯೂಬ್​ ಚಾನೆಲ್​ಗಳು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಬಾರದು.ಈಗಾಗಲೇ ನನ್ನ ಗಮನಕ್ಕೆ ಬಂದಿರುವ ಎಲ್ಲವನ್ನೂ ಸೈಬರ್​ ಪೊಲೀಸರಿಗೆ ನೀಡಿದ್ದೇನೆ. ದಯವಿಟ್ಟು ಈ ವಿಡಿಯೋಗಳನ್ನು ತೆಗೆದು ಹಾಕಿ ಎನ್ನುವ ಎಚ್ಚರಿಕೆ ನೀಡಿದ್ದಾರೆ.

‘ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ನನಗೆ ಹೇಗೆ ಕೊರೊನಾ ವೈರಸ್​ ತಗುಲಿತು ಎಂಬುದು ತಿಳಿದಿಲ್ಲ. ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂಬ ಭರವಸೆ ಇದೆ. ನೆಗೆಟಿವ್​ ವರದಿ ಬಂದ ಬಳಿಕ ವೈದ್ಯರ ಸಲಹೆ ಪಡೆದುಕೊಂಡು ಕೆಲಸ ಆರಂಭಿಸುತ್ತೇನೆ’ ಎಂದು ಅರ್ಜುನ್ ಜನ್ಯ ಹೇಳಿಕೊಂಡಿದ್ದರು.

ಇದನ್ನೂ ಓದಿ: ಅರ್ಜುನ್​ ಜನ್ಯ ಆರೋಗ್ಯದಲ್ಲಿ ಚೇತರಿಕೆ; ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ಭಾಗಿ

Kichcha Sudep: ಕಿಚ್ಚ ಸುದೀಪ್‌ಗೆ ಕೊರೊನಾ ಸೋಂಕು? ಊಹಾಪೋಹಗಳಿಗೆ ಬಿತ್ತು ತೆರೆ

Published On - 10:11 pm, Fri, 16 April 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್