ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಅರ್ಜುನ್​ ಜನ್ಯ ಎಚ್ಚರಿಕೆ! ಸೈಬರ್​ ಠಾಣೆಗೆ ದೂರು

ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದರಿಂದ ಏಪ್ರಿಲ್​ 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಹಿಂದಿರುಗಿದ್ದಾರೆ. ಈಗ ಅವರು ಚೇತರಿಕೆ ಕಾಣುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ತರಿಸಿದೆ.

ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಅರ್ಜುನ್​ ಜನ್ಯ ಎಚ್ಚರಿಕೆ! ಸೈಬರ್​ ಠಾಣೆಗೆ ದೂರು
ಅರ್ಜುನ್​ ಜನ್ಯ

Updated on: Apr 16, 2021 | 10:23 PM

ಅರ್ಜುನ್​ ಜನ್ಯ ಅವರಿಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್​ ಆಗಿತ್ತು. ಹೀಗಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ಬಂದು ಕ್ವಾರಂಟೈನ್​ ಆಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ನಕಲಿ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆ ಅರ್ಜುನ್​ ಜನ್ಯ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ ಈ ಬಗ್ಗೆ ಸೈಬರ್​ ಠಾಣೆಗೆ ದೂರು ಕೂಡ ನೀಡಿದ್ದಾರೆ.

ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದರಿಂದ ಏಪ್ರಿಲ್​ 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಹಿಂದಿರುಗಿದ್ದಾರೆ. ಈಗ ಅವರು ಚೇತರಿಕೆ ಕಾಣುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ತರಿಸಿದೆ. ಆದರೆ, ಅವರಿಗೆ ಕೊರೊನಾ ಪಾಸಿಟಿವ್​ ಆದ ಸಮಯದಲ್ಲಿ ಸಾಕಷ್ಟು ಯೂಟ್ಯೂಬ್​ ಚಾನೆಲ್​ಗಳು ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದವು.

ಈ ಬಗ್ಗೆ ಓಪನ್ ಲೆಟರ್​ ಬರೆದಿರುವ ಅರ್ಜುನ್​ ಜನ್ಯ, ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲ ಯೂಟ್ಯೂಬ್​​ ಚಾನೆಲ್​ಗಳು ನನ್ನ ಬಗ್ಗೆ, ನನ್ನ ಕುಟುಂಬದ ಪರಿಸ್ಥಿತಿ ಹಾಗೂ ಆರೋಗ್ಯದ ಬಗ್ಗೆ ತಪ್ಪು ಮಾಹಿತಿ ಹಂಚಿಕೊಂಡಿದ್ದಾರೆ. ಇದು ಸರಿಹೋಗಬಹುದು ಎಂದು ನಾನು ಸಮಾಧಾನದಿಂದ ಇದ್ದೆ. ಆದರೆ, ಅದು ಹೆಚ್ಚಾಗುತ್ತಿದೆ. ಕೆಲವು ಯೂಟ್ಯೂಬ್​ ಚಾನೆಲ್​ಗಳು ನೀಡಿದ ಮಾಹಿತಿ ಅಪ್ಪಟ ಸುಳ್ಳು. ನಾನು ಆರೋಗ್ಯವಾಗಿದ್ದೇನೆ. ಕೊವಿಡ್​ನಿಂದ ಗುಣಮುಖನಾಗಿ ವೈದ್ಯರ ಸಲಹೆಯಂತೆ ಐಸೋಲೇಷನ್​ನಲ್ಲಿದ್ದೆ. ಯೂಟ್ಯೂಬ್​ ಚಾನೆಲ್​ಗಳು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಬಾರದು.ಈಗಾಗಲೇ ನನ್ನ ಗಮನಕ್ಕೆ ಬಂದಿರುವ ಎಲ್ಲವನ್ನೂ ಸೈಬರ್​ ಪೊಲೀಸರಿಗೆ ನೀಡಿದ್ದೇನೆ. ದಯವಿಟ್ಟು ಈ ವಿಡಿಯೋಗಳನ್ನು ತೆಗೆದು ಹಾಕಿ ಎನ್ನುವ ಎಚ್ಚರಿಕೆ ನೀಡಿದ್ದಾರೆ.

‘ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ನನಗೆ ಹೇಗೆ ಕೊರೊನಾ ವೈರಸ್​ ತಗುಲಿತು ಎಂಬುದು ತಿಳಿದಿಲ್ಲ. ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂಬ ಭರವಸೆ ಇದೆ. ನೆಗೆಟಿವ್​ ವರದಿ ಬಂದ ಬಳಿಕ ವೈದ್ಯರ ಸಲಹೆ ಪಡೆದುಕೊಂಡು ಕೆಲಸ ಆರಂಭಿಸುತ್ತೇನೆ’ ಎಂದು ಅರ್ಜುನ್ ಜನ್ಯ ಹೇಳಿಕೊಂಡಿದ್ದರು.

ಇದನ್ನೂ ಓದಿ: ಅರ್ಜುನ್​ ಜನ್ಯ ಆರೋಗ್ಯದಲ್ಲಿ ಚೇತರಿಕೆ; ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ಭಾಗಿ

Kichcha Sudep: ಕಿಚ್ಚ ಸುದೀಪ್‌ಗೆ ಕೊರೊನಾ ಸೋಂಕು? ಊಹಾಪೋಹಗಳಿಗೆ ಬಿತ್ತು ತೆರೆ

Published On - 10:11 pm, Fri, 16 April 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us