AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Janya: ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​! ಆಸ್ಪತ್ರೆಗೆ ದಾಖಲಾದ ಖ್ಯಾತ ಸಂಗೀತ ನಿರ್ದೇಶಕ

Coronavirus: ಕೆಲವೇ ದಿನಗಳ ಹಿಂದೆ ಅರ್ಜುನ್​ ಜನ್ಯ ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿದವು. ಕೂಡಲೇ ಪರೀಕ್ಷೆ ಮಾಡಿಸಿಕೊಂಡರು. ಪಾಸಿಟಿವ್​ ವರದಿ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾದರು. ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

Arjun Janya: ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​! ಆಸ್ಪತ್ರೆಗೆ ದಾಖಲಾದ ಖ್ಯಾತ ಸಂಗೀತ ನಿರ್ದೇಶಕ
ಅರ್ಜುನ್​ ಜನ್ಯ
ಮದನ್​ ಕುಮಾರ್​
|

Updated on: Apr 09, 2021 | 10:19 AM

Share

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿ ಹಬ್ಬುತ್ತಿದೆ. ಸೆಲೆಬ್ರಿಟಿಗಳ ವಲಯದಲ್ಲೂ ಅನೇಕರಿಗೆ ಕೊವಿಡ್​-19 ಪಾಸಿಟಿವ್​ ಆಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರಿಗೆ ಈಗ ಕೊರೊನಾ ವೈರಸ್​ ತಗುಲಿದೆ. ಹಾಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಹಲವು ಸಿನಿಮಾ ಕೆಲಸಗಳನ್ನು ಬ್ಯುಸಿ ಆಗಿದ್ದ ಅರ್ಜುನ್​ ಜನ್ಯ, ಕೊವಿಡ್​-19 ಕಾರಣದಿಂದ ಗ್ಯಾಪ್​ ತೆಗೆದುಕೊಳ್ಳುವಂತಾಗಿದೆ.

ಅರ್ಜುನ್​ ಜನ್ಯ ಅವರ ಆರೋಗ್ಯದ ಕುರಿತಂತೆ ಕಳೆದ ವರ್ಷ ಕೂಡ ಶಾಕಿಂಗ್​ ನ್ಯೂಸ್​ ಕೇಳಿಬಂದಿತ್ತು. ಹೃದಯಾಘಾತ ಆಗಿದ್ದರಿಂದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರು ಚೇತರಿಸಿಕೊಂಡರು. ಆ ಘಟನೆ ಬಳಿಕ ಈಗ ಮತ್ತೆ ಅರ್ಜುನ್ ಜನ್ಯ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಅನೇಕ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿರುವ ಅರ್ಜುನ್​ ಜನ್ಯ, ಕಿರುತೆರೆಯ ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​ ರಿಯಾಲಿಟಿ ಶೋ ಜಡ್ಜ್​ ಆಗಿಯೂ ಕೆಲಸ ಮಾಡುತ್ತಿದ್ದಾರೆ. ಆ ಎಲ್ಲ ಕೆಲಸಗಳಿಗೆ ಈಗ ಬ್ರೇಕ್​ ಬಿದ್ದಿದೆ. ಕೆಲವೇ ದಿನಗಳ ಹಿಂದೆ ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿದವು. ಕೂಡಲೇ ಪರೀಕ್ಷೆ ಮಾಡಿಸಿಕೊಂಡರು. ಪಾಸಿಟಿವ್​ ವರದಿ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾದರು. ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದು, ನೆಗೆಟಿವಿವ್​ ವರದಿ ಬಂದ ತಕ್ಷಣ ಮತ್ತೆ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

‘ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ನನಗೆ ಹೇಗೆ ಕೊರೊನಾ ವೈರಸ್​ ತಗುಲಿತು ಎಂಬುದು ತಿಳಿದಿಲ್ಲ. ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂಬ ಭರವಸೆ ಇದೆ. ನೆಗೆಟಿವ್​ ವರದಿ ಬಂದ ಬಳಿಕ ವೈದ್ಯರ ಸಲಹೆ ಪಡೆದುಕೊಂಡು ಕೆಲಸ ಆರಂಭಿಸುತ್ತೇನೆ’ ಎಂದು ಮಾಧ್ಯಮಗಳಿಗೆ ಅರ್ಜುನ್ ಜನ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?

(Arjun Janya tests positive for coronavirus and getting treatment in Bengaluru private hospital)

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ