AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Janya: ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​! ಆಸ್ಪತ್ರೆಗೆ ದಾಖಲಾದ ಖ್ಯಾತ ಸಂಗೀತ ನಿರ್ದೇಶಕ

Coronavirus: ಕೆಲವೇ ದಿನಗಳ ಹಿಂದೆ ಅರ್ಜುನ್​ ಜನ್ಯ ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿದವು. ಕೂಡಲೇ ಪರೀಕ್ಷೆ ಮಾಡಿಸಿಕೊಂಡರು. ಪಾಸಿಟಿವ್​ ವರದಿ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾದರು. ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

Arjun Janya: ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​! ಆಸ್ಪತ್ರೆಗೆ ದಾಖಲಾದ ಖ್ಯಾತ ಸಂಗೀತ ನಿರ್ದೇಶಕ
ಅರ್ಜುನ್​ ಜನ್ಯ
ಮದನ್​ ಕುಮಾರ್​
|

Updated on: Apr 09, 2021 | 10:19 AM

Share

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿ ಹಬ್ಬುತ್ತಿದೆ. ಸೆಲೆಬ್ರಿಟಿಗಳ ವಲಯದಲ್ಲೂ ಅನೇಕರಿಗೆ ಕೊವಿಡ್​-19 ಪಾಸಿಟಿವ್​ ಆಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರಿಗೆ ಈಗ ಕೊರೊನಾ ವೈರಸ್​ ತಗುಲಿದೆ. ಹಾಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಹಲವು ಸಿನಿಮಾ ಕೆಲಸಗಳನ್ನು ಬ್ಯುಸಿ ಆಗಿದ್ದ ಅರ್ಜುನ್​ ಜನ್ಯ, ಕೊವಿಡ್​-19 ಕಾರಣದಿಂದ ಗ್ಯಾಪ್​ ತೆಗೆದುಕೊಳ್ಳುವಂತಾಗಿದೆ.

ಅರ್ಜುನ್​ ಜನ್ಯ ಅವರ ಆರೋಗ್ಯದ ಕುರಿತಂತೆ ಕಳೆದ ವರ್ಷ ಕೂಡ ಶಾಕಿಂಗ್​ ನ್ಯೂಸ್​ ಕೇಳಿಬಂದಿತ್ತು. ಹೃದಯಾಘಾತ ಆಗಿದ್ದರಿಂದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರು ಚೇತರಿಸಿಕೊಂಡರು. ಆ ಘಟನೆ ಬಳಿಕ ಈಗ ಮತ್ತೆ ಅರ್ಜುನ್ ಜನ್ಯ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಅನೇಕ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿರುವ ಅರ್ಜುನ್​ ಜನ್ಯ, ಕಿರುತೆರೆಯ ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​ ರಿಯಾಲಿಟಿ ಶೋ ಜಡ್ಜ್​ ಆಗಿಯೂ ಕೆಲಸ ಮಾಡುತ್ತಿದ್ದಾರೆ. ಆ ಎಲ್ಲ ಕೆಲಸಗಳಿಗೆ ಈಗ ಬ್ರೇಕ್​ ಬಿದ್ದಿದೆ. ಕೆಲವೇ ದಿನಗಳ ಹಿಂದೆ ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿದವು. ಕೂಡಲೇ ಪರೀಕ್ಷೆ ಮಾಡಿಸಿಕೊಂಡರು. ಪಾಸಿಟಿವ್​ ವರದಿ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾದರು. ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದು, ನೆಗೆಟಿವಿವ್​ ವರದಿ ಬಂದ ತಕ್ಷಣ ಮತ್ತೆ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

‘ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ನನಗೆ ಹೇಗೆ ಕೊರೊನಾ ವೈರಸ್​ ತಗುಲಿತು ಎಂಬುದು ತಿಳಿದಿಲ್ಲ. ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂಬ ಭರವಸೆ ಇದೆ. ನೆಗೆಟಿವ್​ ವರದಿ ಬಂದ ಬಳಿಕ ವೈದ್ಯರ ಸಲಹೆ ಪಡೆದುಕೊಂಡು ಕೆಲಸ ಆರಂಭಿಸುತ್ತೇನೆ’ ಎಂದು ಮಾಧ್ಯಮಗಳಿಗೆ ಅರ್ಜುನ್ ಜನ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?

(Arjun Janya tests positive for coronavirus and getting treatment in Bengaluru private hospital)

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ