Arjun Janya: ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​! ಆಸ್ಪತ್ರೆಗೆ ದಾಖಲಾದ ಖ್ಯಾತ ಸಂಗೀತ ನಿರ್ದೇಶಕ

Coronavirus: ಕೆಲವೇ ದಿನಗಳ ಹಿಂದೆ ಅರ್ಜುನ್​ ಜನ್ಯ ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿದವು. ಕೂಡಲೇ ಪರೀಕ್ಷೆ ಮಾಡಿಸಿಕೊಂಡರು. ಪಾಸಿಟಿವ್​ ವರದಿ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾದರು. ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

Arjun Janya: ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​! ಆಸ್ಪತ್ರೆಗೆ ದಾಖಲಾದ ಖ್ಯಾತ ಸಂಗೀತ ನಿರ್ದೇಶಕ
ಅರ್ಜುನ್​ ಜನ್ಯ
Follow us
|

Updated on: Apr 09, 2021 | 10:19 AM

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿ ಹಬ್ಬುತ್ತಿದೆ. ಸೆಲೆಬ್ರಿಟಿಗಳ ವಲಯದಲ್ಲೂ ಅನೇಕರಿಗೆ ಕೊವಿಡ್​-19 ಪಾಸಿಟಿವ್​ ಆಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರಿಗೆ ಈಗ ಕೊರೊನಾ ವೈರಸ್​ ತಗುಲಿದೆ. ಹಾಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಹಲವು ಸಿನಿಮಾ ಕೆಲಸಗಳನ್ನು ಬ್ಯುಸಿ ಆಗಿದ್ದ ಅರ್ಜುನ್​ ಜನ್ಯ, ಕೊವಿಡ್​-19 ಕಾರಣದಿಂದ ಗ್ಯಾಪ್​ ತೆಗೆದುಕೊಳ್ಳುವಂತಾಗಿದೆ.

ಅರ್ಜುನ್​ ಜನ್ಯ ಅವರ ಆರೋಗ್ಯದ ಕುರಿತಂತೆ ಕಳೆದ ವರ್ಷ ಕೂಡ ಶಾಕಿಂಗ್​ ನ್ಯೂಸ್​ ಕೇಳಿಬಂದಿತ್ತು. ಹೃದಯಾಘಾತ ಆಗಿದ್ದರಿಂದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರು ಚೇತರಿಸಿಕೊಂಡರು. ಆ ಘಟನೆ ಬಳಿಕ ಈಗ ಮತ್ತೆ ಅರ್ಜುನ್ ಜನ್ಯ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಅನೇಕ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿರುವ ಅರ್ಜುನ್​ ಜನ್ಯ, ಕಿರುತೆರೆಯ ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​ ರಿಯಾಲಿಟಿ ಶೋ ಜಡ್ಜ್​ ಆಗಿಯೂ ಕೆಲಸ ಮಾಡುತ್ತಿದ್ದಾರೆ. ಆ ಎಲ್ಲ ಕೆಲಸಗಳಿಗೆ ಈಗ ಬ್ರೇಕ್​ ಬಿದ್ದಿದೆ. ಕೆಲವೇ ದಿನಗಳ ಹಿಂದೆ ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿದವು. ಕೂಡಲೇ ಪರೀಕ್ಷೆ ಮಾಡಿಸಿಕೊಂಡರು. ಪಾಸಿಟಿವ್​ ವರದಿ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾದರು. ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದು, ನೆಗೆಟಿವಿವ್​ ವರದಿ ಬಂದ ತಕ್ಷಣ ಮತ್ತೆ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

‘ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ನನಗೆ ಹೇಗೆ ಕೊರೊನಾ ವೈರಸ್​ ತಗುಲಿತು ಎಂಬುದು ತಿಳಿದಿಲ್ಲ. ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂಬ ಭರವಸೆ ಇದೆ. ನೆಗೆಟಿವ್​ ವರದಿ ಬಂದ ಬಳಿಕ ವೈದ್ಯರ ಸಲಹೆ ಪಡೆದುಕೊಂಡು ಕೆಲಸ ಆರಂಭಿಸುತ್ತೇನೆ’ ಎಂದು ಮಾಧ್ಯಮಗಳಿಗೆ ಅರ್ಜುನ್ ಜನ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?

(Arjun Janya tests positive for coronavirus and getting treatment in Bengaluru private hospital)

ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ