Arjun Janya: ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​! ಆಸ್ಪತ್ರೆಗೆ ದಾಖಲಾದ ಖ್ಯಾತ ಸಂಗೀತ ನಿರ್ದೇಶಕ

Coronavirus: ಕೆಲವೇ ದಿನಗಳ ಹಿಂದೆ ಅರ್ಜುನ್​ ಜನ್ಯ ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿದವು. ಕೂಡಲೇ ಪರೀಕ್ಷೆ ಮಾಡಿಸಿಕೊಂಡರು. ಪಾಸಿಟಿವ್​ ವರದಿ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾದರು. ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

Arjun Janya: ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​! ಆಸ್ಪತ್ರೆಗೆ ದಾಖಲಾದ ಖ್ಯಾತ ಸಂಗೀತ ನಿರ್ದೇಶಕ
ಅರ್ಜುನ್​ ಜನ್ಯ

Updated on: Apr 09, 2021 | 10:19 AM

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿ ಹಬ್ಬುತ್ತಿದೆ. ಸೆಲೆಬ್ರಿಟಿಗಳ ವಲಯದಲ್ಲೂ ಅನೇಕರಿಗೆ ಕೊವಿಡ್​-19 ಪಾಸಿಟಿವ್​ ಆಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರಿಗೆ ಈಗ ಕೊರೊನಾ ವೈರಸ್​ ತಗುಲಿದೆ. ಹಾಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಹಲವು ಸಿನಿಮಾ ಕೆಲಸಗಳನ್ನು ಬ್ಯುಸಿ ಆಗಿದ್ದ ಅರ್ಜುನ್​ ಜನ್ಯ, ಕೊವಿಡ್​-19 ಕಾರಣದಿಂದ ಗ್ಯಾಪ್​ ತೆಗೆದುಕೊಳ್ಳುವಂತಾಗಿದೆ.

ಅರ್ಜುನ್​ ಜನ್ಯ ಅವರ ಆರೋಗ್ಯದ ಕುರಿತಂತೆ ಕಳೆದ ವರ್ಷ ಕೂಡ ಶಾಕಿಂಗ್​ ನ್ಯೂಸ್​ ಕೇಳಿಬಂದಿತ್ತು. ಹೃದಯಾಘಾತ ಆಗಿದ್ದರಿಂದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರು ಚೇತರಿಸಿಕೊಂಡರು. ಆ ಘಟನೆ ಬಳಿಕ ಈಗ ಮತ್ತೆ ಅರ್ಜುನ್ ಜನ್ಯ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಅನೇಕ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿರುವ ಅರ್ಜುನ್​ ಜನ್ಯ, ಕಿರುತೆರೆಯ ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​ ರಿಯಾಲಿಟಿ ಶೋ ಜಡ್ಜ್​ ಆಗಿಯೂ ಕೆಲಸ ಮಾಡುತ್ತಿದ್ದಾರೆ. ಆ ಎಲ್ಲ ಕೆಲಸಗಳಿಗೆ ಈಗ ಬ್ರೇಕ್​ ಬಿದ್ದಿದೆ. ಕೆಲವೇ ದಿನಗಳ ಹಿಂದೆ ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿದವು. ಕೂಡಲೇ ಪರೀಕ್ಷೆ ಮಾಡಿಸಿಕೊಂಡರು. ಪಾಸಿಟಿವ್​ ವರದಿ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾದರು. ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದು, ನೆಗೆಟಿವಿವ್​ ವರದಿ ಬಂದ ತಕ್ಷಣ ಮತ್ತೆ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

‘ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ನನಗೆ ಹೇಗೆ ಕೊರೊನಾ ವೈರಸ್​ ತಗುಲಿತು ಎಂಬುದು ತಿಳಿದಿಲ್ಲ. ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂಬ ಭರವಸೆ ಇದೆ. ನೆಗೆಟಿವ್​ ವರದಿ ಬಂದ ಬಳಿಕ ವೈದ್ಯರ ಸಲಹೆ ಪಡೆದುಕೊಂಡು ಕೆಲಸ ಆರಂಭಿಸುತ್ತೇನೆ’ ಎಂದು ಮಾಧ್ಯಮಗಳಿಗೆ ಅರ್ಜುನ್ ಜನ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?

 

(Arjun Janya tests positive for coronavirus and getting treatment in Bengaluru private hospital)

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us