AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಕಾಬಿಟ್ಟಿ ಕುಡಿಯುತ್ತಿದ್ದ ಅರ್ಜುನ್ ಜನ್ಯ; 10 ವರ್ಷ ಮದ್ಯವೇ ಮುಟ್ಟದಂತಹ ಘಟನೆ ನಡೆಯಿತು

ಪ್ರಸಿದ್ಧ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ತಮ್ಮ ಹಿಂದಿನ ಮದ್ಯವ್ಯಸನ ಮತ್ತು ಆಧ್ಯಾತ್ಮಿಕ ಪ್ರಯಾಣದ ಬಗ್ಗೆ ಮಾತನಾಡಿದ್ದಾರೆ. ತಂದೆಯ ಅಗಲಿಕೆಯ ನಂತರ ಅನುಭವಿಸಿದ ಕಷ್ಟಗಳು ಮತ್ತು ಆದಿ ಪರಾಶಕ್ತಿ ದೇವಸ್ಥಾನಕ್ಕೆ ಭೇಟಿ ನೀಡಿದ ಅನುಭವವು ಅವರ ಜೀವನದಲ್ಲಿ ದೊಡ್ಡ ಬದಲಾವಣೆ ತಂದಿದೆ ಎಂದು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಬೇಕಾಬಿಟ್ಟಿ ಕುಡಿಯುತ್ತಿದ್ದ ಅರ್ಜುನ್ ಜನ್ಯ; 10 ವರ್ಷ ಮದ್ಯವೇ ಮುಟ್ಟದಂತಹ ಘಟನೆ ನಡೆಯಿತು
ಅರ್ಜುನ್ ಜನ್ಯ
ರಾಜೇಶ್ ದುಗ್ಗುಮನೆ
|

Updated on:Sep 01, 2025 | 11:41 AM

Share

ಅರ್ಜುನ್ ಜನ್ಯ (Arjun Janya) ಅವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರಿಗೆ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿದೆ. ಅವರು ಕನ್ನಡದಲ್ಲಿ ಹಲವು ಹಿಟ್ ಹಾಡುಗಳನ್ನು ನೀಡಿದ್ದಾರೆ. ಇದರ ಜೊತೆಗೆ ಹಲವು ಯುವ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ. ಈಗ ಅರ್ಜುನ್ ಜನ್ಯ ಅವರು ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಮದ್ಯ ಸೇವನೆ ಮಾಡುತ್ತಿದ್ದ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ. ಅದನ್ನು ಬಿಟ್ಟಿದ್ದಕ್ಕೆ ದೊಡ್ಡ ಕಾರಣವೂ ಇತ್ತು.

‘ನಮ್ಮ ತಂದೆ ಹೋದಾಗ ಸಾಕಷ್ಟು ಕಷ್ಟದ ಪರಿಸ್ಥಿತಿ ಬಂತು. ಇದು ನನಗೆ ಒಂದು ಪಾಠ. ನಾನು ಓಂ ಶಕ್ತಿ ಪೂಜೆ ಮಾಡುತ್ತೇನೆ. ನಾನು ಆದಿ ಪರಾಶಕ್ತಿ ಬಂಗಾರವಾಡಿಗೆ ನಡೆದುಕೊಳ್ಳುತ್ತೇನೆ. ಅದು 2005ರ ಸಮಯ. ಕಣ್ಣಲ್ಲಿ ಕನಸುಗಳು ಇದ್ದವು. ಈ ರೀತಿ ಕನಸು ಕಾಣುವಾಗ ಆದಿ ಪರಾಶಕ್ತಿ ದೇವಸ್ಥಾನಕ್ಕೆ ತೆರಳೋ ಅವಕಾಶ ಸಿಕ್ಕಿತು’ ಎಂದು ಖಾಸಗಿ ಸುದ್ದಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅರ್ಜುನ್ ಜನ್ಯ ಹೇಳಿದ್ದಾರೆ.

‘ನಾನು ದೇವಸ್ಥಾನಕ್ಕೆ ಕಾಲಿಟ್ಟಾಗ ಬಂಗಾರವಾಡಿಗಳು ಕಂಡರು. ಅವರು ಕಾಣೋದೇ ಅಪರೂಪ. ನಾನು ಹೋಗುವಾಗ ಸಾಮಾನ್ಯರಂತೆ ನಡೆದು ಬರುತ್ತಿದ್ದಾರೆ. ಅವರು ಕಾಲಿಟ್ಟು ಬಂದ ಮಣ್ಣನ್ನು ಜನರು ಎತ್ತಿ ತಲೆಗೆ ಹಚ್ಚಿಕೊಂಡರು. ಆ ಬಳಿಕ ನಾನು ಅಮ್ಮನವರ ದರ್ಶನ ಮಾಡಿದೆ. ಪ್ರತಿ ಕಣಗಳು ಅಳೋಕೆ ಆರಂಭ ಆಯ್ತು. ನಾನು ನಿರಂತರವಾಗಿ ಅಳುತ್ತಿದ್ದೆ. ಏಕೆ ಎಂಬುದೇ ಗೊತ್ತಾಗಲಿಲ್ಲ’ ಎಂದಿದ್ದಾರೆ ಅರ್ಜುನ್ ಜನ್ಯ.

ಇದನ್ನೂ ಓದಿ
Image
‘ನನ್ನ ಗೇಲಿ ಮಾಡುವುದರಿಂದ ನಿಮಗೆ ಊಟ ಸಿಗುತ್ತಿದೆ ಎಂದರೆ ಖುಷಿ’; ಸಲ್ಮಾನ್
Image
‘ಸು ಫ್ರಮ್ ಸೋ ಅಬ್ಬರ’; 38ನೇ ದಿನ ದೊಡ್ಡ ಮೊತ್ತ ಬಾಚಿದ ಸಿನಿಮಾ
Image
‘ಕಡಿಮೆ ಬೆಲೆ ಎಂದು ಮುಸ್ಲಿಮರು ಗೋಮಾಂಸ ಸೇವಿಸುತ್ತಾರೆ, ನಾನು ತಿಂದೇ ಇಲ್ಲ’
Image
ಗರ್ಲ್​ಫ್ರೆಂಡ್​ಗೆ ಮನೆ ಕೊಟ್ಟು ಬಾಡಿಗೆ ಪಡೆದ ಹೃತಿಕ್ ರೋಷನ್

‘ನಾನು ಆರ್ಕೆಸ್ಟ್ರಾದಲ್ಲಿ ಕೆಲಸ ಮಾಡುವಾಗ ಸಾಕಷ್ಟು ಕುಡಿಯುತ್ತಿದ್ದೆ. ಆ ಜೀವನವೇ ಬೇರೆ ರೀತಿ ಇತ್ತು. ದೇವಸ್ಥಾನಕ್ಕೆ ಹೋಗುವ ಹಿಂದಿನ ದಿನವೂ ಕುಡಿದಿದ್ದೆ. ಕುಡಿದು ದೇವಸ್ಥಾನಕ್ಕೆ ಬರುವಷ್ಟು ಧೈರ್ಯವೇ ಎಂದು ಪ್ರಶ್ನೆ ಕೇಳಿದಂತೆ ಆಯಿತು. ಗಿಲ್ಟ್ ಇತ್ತು. ಆಮೇಲೆ ಕುಡಿಯಲ್ಲ ಎಂದು ನಿರ್ಧರಿಸಿದೆ. ಗೆಳೆಯರಿಗೂ ಹೇಳಿದೆ’ ಎಂದಿದ್ದಾರೆ ಅರ್ಜುನ್ ಜನ್ಯ.

ಇದನ್ನೂ ಓದಿ: ‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಹೀಗೆ ಹೇಳಿದ್ದೇಕೆ?

‘ಅಲ್ಲಿಂದ 10 ವರ್ಷ ಕುಡಿದೇ ಇಲ್ಲ. ದೇವಸ್ಥಾನಕ್ಕೆ ಹೋಗಿ ಬಂದಾಗ ಮೊದಲ ಆಫರ್ ಸಿಕ್ಕಿತು. ಪ್ರತಿ ಕ್ಷಣದ ಉಸಿರಾಟ ಅಮ್ಮನವರು. ಕಷ್ಟ ಬಂದರೂ ಏನು ಅನಿಸುವುದಿಲ್ಲ. ಸಕ್ಸಸ್ ಬಂದರೂ ಏನು ಅನಿಸೋದಿಲ್ಲ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:44 am, Mon, 1 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ