AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್​ ಸರ್ಜಾ ಕಟ್ಟಿಸಿದ ಆಂಜನೇಯ ಸ್ವಾಮಿ ಅದ್ಭುತ ದೇವಾಲಯದ ಕುಂಭಾಭಿಷೇಕ ನೋಡಲು ಇಲ್ಲಿದೆ ಅವಕಾಶ

Arjun Sarja Anjaneya Temple: ಅರ್ಜುನ್​ ಸರ್ಜಾ ನಿರ್ಮಿಸಿರುವ ಆಂಜನೇಯ ಸ್ವಾಮಿ ದೇವಾಲಯದ ಕುಂಭಾಭಿಷೇಕ ಸಮಾರಂಭಕ್ಕೆ ದಿನಾಂಕ ನಿಗದಿ ಆಗಿದೆ. ಎಲ್ಲರಿಗೂ ಈ ಸಮಾರಂಭದ ನೇರ ಪ್ರಸಾರ ನೋಡಲು ಅವಕಾಶ ಮಾಡಿಕೊಡಲಾಗುತ್ತಿದೆ.

ಅರ್ಜುನ್​ ಸರ್ಜಾ ಕಟ್ಟಿಸಿದ ಆಂಜನೇಯ ಸ್ವಾಮಿ ಅದ್ಭುತ ದೇವಾಲಯದ ಕುಂಭಾಭಿಷೇಕ ನೋಡಲು ಇಲ್ಲಿದೆ ಅವಕಾಶ
ಅರ್ಜುನ್​ ಸರ್ಜಾ
ಮದನ್​ ಕುಮಾರ್​
|

Updated on: Jun 29, 2021 | 12:00 PM

Share

ಬಹುಭಾಷಾ ನಟ ಅರ್ಜುನ್​ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್​ ಲೈಫ್​ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ ಅರ್ಜುನ್ ಸರ್ಜಾ. ಹಾಗಾಗಿ ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅವರ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಈ ಬಗ್ಗೆ ಸ್ವತಃ ಅರ್ಜುನ್​ ಸರ್ಜಾ ಮಾಹಿತಿ ಹಂಚಿಕೊಂಡಿದ್ದಾರೆ.

‘ನನ್ನ ಬಹುದಿನಗಳ ಆಸೆಯಂತೆ, ನಮ್ಮ ಕುಟುಂಬದಿಂದ ನಿರ್ಮಾಣ ಆಗುತ್ತಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯ ಈಗ ಸಂಪೂರ್ಣ ಆಗಿದೆ. ಈ ದೇವಸ್ಥಾನದ ಕುಂಭಾಭಿಷೇಕ ಸಮಾರಂಭವನ್ನು ಜು.1 ಮತ್ತು ಜು.2ರಂದು ಚೆನ್ನೈನಲ್ಲಿ ಇಟ್ಟುಕೊಂಡಿದ್ದೇವೆ. ಸ್ನೇಹಿತರು, ಬಂಧುಗಳು ಹಾಗೂ ಭಕ್ತಾಧಿಗಳನ್ನು ಕರೆದು ತುಂಬ ಅದ್ದೂರಿಯಾಗಿ ಈ ಸಮಾರಂಭ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಈಗಿರುವ ಕೊರೊನಾ ಪರಿಸ್ಥಿತಿಯಲ್ಲಿ, ಜನರ ಹಿತವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾರನ್ನೂ ಆಹ್ವಾನಿಸೋಕೆ ಸಾಧ್ಯವಾಗುತ್ತಿಲ್ಲ’ ಎಂದು ಅರ್ಜುನ್​ ಸರ್ಜಾ ಹೇಳಿದ್ದಾರೆ.

‘ಆದರೂ ಈ ಸಮಾರಂಭ ಜನರಿಗೆ ಮಿಸ್​ ಆಗಬಾರದು ಎಂದು ಯೂಟ್ಯೂಬ್​ ಮೂಲಕ ಜ.1 ಮತ್ತು 2ರಂದು ಲೈವ್​ ಪ್ರಸಾರ ಮಾಡುತ್ತಿದ್ದೇವೆ. ಈ ಕೊರೊನಾ ಸಂಕಷ್ಟ ಮುಗಿದ ನಂತರ ನೀವು ಕುಟುಂಬ ಸಮೇತ ಬಂದು ನೇರವಾಗಿ ದೇವರ ದರ್ಶನ ಪಡೆದು, ಅನುಗ್ರಹಕ್ಕೆ ಪಾತ್ರರಾಗಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಇರುವ ತಮ್ಮೆಲ್ಲ ಅಭಿಮಾನಿಗಳಿಗೆ, ಆಂಜನೇಯ ಸ್ವಾಮಿ ಭಕ್ತರಿಗೆ ವಿಡಿಯೋ ಮೂಲಕ ಈ ಸಂದೇಶವನ್ನು ಅರ್ಜುನ್​ ಸರ್ಜಾ ರವಾನಿಸಿದ್ದಾರೆ. ಅವರ ‘ಆ್ಯಕ್ಷನ್​ ಕಿಂಗ್​’ ಯೂಟ್ಯೂಬ್​ ಚಾನಲ್​ನಲ್ಲಿ ಜು.1 ಮತ್ತು ಜ.2ರಂದು ಕುಂಭಾಭಿಷೇಕ ಕಾರ್ಯಕ್ರಮ ನೇರಪ್ರಸಾರ ಆಗಲಿದೆ. ಅದನ್ನು ಕಣ್ತುಂಬಿಕೊಳ್ಳಲು ಮಾರುತಿರಾಯನ ಭಕ್ತರು ಕಾದಿದ್ದಾರೆ. ಅಪ್ಪಟ ಆಂಜನೇಯನ ಭಕ್ತನಾಗಿರುವ ನಟ ಧ್ರುವ ಸರ್ಜಾ ಕೂಡ ಈ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಅರ್ಜುನ್​ ಸರ್ಜಾ ಅವರ ‘ಆ್ಯಕ್ಷನ್​ ಕಿಂಗ್​’ ಯೂಟ್ಯೂಬ್​ ಲಿಂಕ್​:

(https://www.youtube.com/channel/UCvrodPUhIkTCfo0YdjcfUcg)

ಇದನ್ನೂ ಓದಿ:

ಚಿರು ನೆನಪಿಸಿಕೊಂಡು ಭಾವನಾತ್ಮಕ ಸಂದೇಶ ನೀಡಿದ ಅರ್ಜುನ್ ಸರ್ಜಾ

Dhruva Sarja : ಚಿರು ಸಮಾಧಿಗೆ ಧ್ರುವಾ ಸರ್ಜಾ ಕುಟುಂಬಸ್ಥರಿಂದ ಪೂಜೆ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು