AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್​ ಸರ್ಜಾ ಕಟ್ಟಿಸಿದ ಆಂಜನೇಯ ಸ್ವಾಮಿ ಅದ್ಭುತ ದೇವಾಲಯದ ಕುಂಭಾಭಿಷೇಕ ನೋಡಲು ಇಲ್ಲಿದೆ ಅವಕಾಶ

Arjun Sarja Anjaneya Temple: ಅರ್ಜುನ್​ ಸರ್ಜಾ ನಿರ್ಮಿಸಿರುವ ಆಂಜನೇಯ ಸ್ವಾಮಿ ದೇವಾಲಯದ ಕುಂಭಾಭಿಷೇಕ ಸಮಾರಂಭಕ್ಕೆ ದಿನಾಂಕ ನಿಗದಿ ಆಗಿದೆ. ಎಲ್ಲರಿಗೂ ಈ ಸಮಾರಂಭದ ನೇರ ಪ್ರಸಾರ ನೋಡಲು ಅವಕಾಶ ಮಾಡಿಕೊಡಲಾಗುತ್ತಿದೆ.

ಅರ್ಜುನ್​ ಸರ್ಜಾ ಕಟ್ಟಿಸಿದ ಆಂಜನೇಯ ಸ್ವಾಮಿ ಅದ್ಭುತ ದೇವಾಲಯದ ಕುಂಭಾಭಿಷೇಕ ನೋಡಲು ಇಲ್ಲಿದೆ ಅವಕಾಶ
ಅರ್ಜುನ್​ ಸರ್ಜಾ
ಮದನ್​ ಕುಮಾರ್​
|

Updated on: Jun 29, 2021 | 12:00 PM

Share

ಬಹುಭಾಷಾ ನಟ ಅರ್ಜುನ್​ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್​ ಲೈಫ್​ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ ಅರ್ಜುನ್ ಸರ್ಜಾ. ಹಾಗಾಗಿ ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅವರ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಈ ಬಗ್ಗೆ ಸ್ವತಃ ಅರ್ಜುನ್​ ಸರ್ಜಾ ಮಾಹಿತಿ ಹಂಚಿಕೊಂಡಿದ್ದಾರೆ.

‘ನನ್ನ ಬಹುದಿನಗಳ ಆಸೆಯಂತೆ, ನಮ್ಮ ಕುಟುಂಬದಿಂದ ನಿರ್ಮಾಣ ಆಗುತ್ತಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯ ಈಗ ಸಂಪೂರ್ಣ ಆಗಿದೆ. ಈ ದೇವಸ್ಥಾನದ ಕುಂಭಾಭಿಷೇಕ ಸಮಾರಂಭವನ್ನು ಜು.1 ಮತ್ತು ಜು.2ರಂದು ಚೆನ್ನೈನಲ್ಲಿ ಇಟ್ಟುಕೊಂಡಿದ್ದೇವೆ. ಸ್ನೇಹಿತರು, ಬಂಧುಗಳು ಹಾಗೂ ಭಕ್ತಾಧಿಗಳನ್ನು ಕರೆದು ತುಂಬ ಅದ್ದೂರಿಯಾಗಿ ಈ ಸಮಾರಂಭ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಈಗಿರುವ ಕೊರೊನಾ ಪರಿಸ್ಥಿತಿಯಲ್ಲಿ, ಜನರ ಹಿತವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾರನ್ನೂ ಆಹ್ವಾನಿಸೋಕೆ ಸಾಧ್ಯವಾಗುತ್ತಿಲ್ಲ’ ಎಂದು ಅರ್ಜುನ್​ ಸರ್ಜಾ ಹೇಳಿದ್ದಾರೆ.

‘ಆದರೂ ಈ ಸಮಾರಂಭ ಜನರಿಗೆ ಮಿಸ್​ ಆಗಬಾರದು ಎಂದು ಯೂಟ್ಯೂಬ್​ ಮೂಲಕ ಜ.1 ಮತ್ತು 2ರಂದು ಲೈವ್​ ಪ್ರಸಾರ ಮಾಡುತ್ತಿದ್ದೇವೆ. ಈ ಕೊರೊನಾ ಸಂಕಷ್ಟ ಮುಗಿದ ನಂತರ ನೀವು ಕುಟುಂಬ ಸಮೇತ ಬಂದು ನೇರವಾಗಿ ದೇವರ ದರ್ಶನ ಪಡೆದು, ಅನುಗ್ರಹಕ್ಕೆ ಪಾತ್ರರಾಗಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಇರುವ ತಮ್ಮೆಲ್ಲ ಅಭಿಮಾನಿಗಳಿಗೆ, ಆಂಜನೇಯ ಸ್ವಾಮಿ ಭಕ್ತರಿಗೆ ವಿಡಿಯೋ ಮೂಲಕ ಈ ಸಂದೇಶವನ್ನು ಅರ್ಜುನ್​ ಸರ್ಜಾ ರವಾನಿಸಿದ್ದಾರೆ. ಅವರ ‘ಆ್ಯಕ್ಷನ್​ ಕಿಂಗ್​’ ಯೂಟ್ಯೂಬ್​ ಚಾನಲ್​ನಲ್ಲಿ ಜು.1 ಮತ್ತು ಜ.2ರಂದು ಕುಂಭಾಭಿಷೇಕ ಕಾರ್ಯಕ್ರಮ ನೇರಪ್ರಸಾರ ಆಗಲಿದೆ. ಅದನ್ನು ಕಣ್ತುಂಬಿಕೊಳ್ಳಲು ಮಾರುತಿರಾಯನ ಭಕ್ತರು ಕಾದಿದ್ದಾರೆ. ಅಪ್ಪಟ ಆಂಜನೇಯನ ಭಕ್ತನಾಗಿರುವ ನಟ ಧ್ರುವ ಸರ್ಜಾ ಕೂಡ ಈ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಅರ್ಜುನ್​ ಸರ್ಜಾ ಅವರ ‘ಆ್ಯಕ್ಷನ್​ ಕಿಂಗ್​’ ಯೂಟ್ಯೂಬ್​ ಲಿಂಕ್​:

(https://www.youtube.com/channel/UCvrodPUhIkTCfo0YdjcfUcg)

ಇದನ್ನೂ ಓದಿ:

ಚಿರು ನೆನಪಿಸಿಕೊಂಡು ಭಾವನಾತ್ಮಕ ಸಂದೇಶ ನೀಡಿದ ಅರ್ಜುನ್ ಸರ್ಜಾ

Dhruva Sarja : ಚಿರು ಸಮಾಧಿಗೆ ಧ್ರುವಾ ಸರ್ಜಾ ಕುಟುಂಬಸ್ಥರಿಂದ ಪೂಜೆ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​