AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಶಕ್ತಿ ಪ್ರಸಾದ್ ಸಮಾಧಿ ಪಕ್ಕದಲ್ಲೇ ಅರ್ಜುನ್​ ಸರ್ಜಾ ತಾಯಿ ಲಕ್ಷ್ಮೀದೇವಮ್ಮ ಅಂತ್ಯಕ್ರಿಯೆ

Arjun Sarja Mother | Lakshmi Devamma Funeral: ಮಧುಗಿರಿ ತಾಲ್ಲೂಕಿನ ಜಕ್ಕೇನಹಳ್ಳಿಯಲ್ಲಿ ಲಕ್ಷ್ಮೀದೇವಮ್ಮ ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಅರ್ಜುನ್​ ಸರ್ಜಾ ಕುಟುಂಬದ ಸದಸ್ಯರ ಜತೆ ಗ್ರಾಮಸ್ಥರು ಕೂಡ ಅಂತಿಮ ಸಂಸ್ಕಾರದಲ್ಲಿ ಭಾಗಿ ಆಗಿದ್ದಾರೆ.

ಪತಿ ಶಕ್ತಿ ಪ್ರಸಾದ್ ಸಮಾಧಿ ಪಕ್ಕದಲ್ಲೇ ಅರ್ಜುನ್​ ಸರ್ಜಾ ತಾಯಿ ಲಕ್ಷ್ಮೀದೇವಮ್ಮ ಅಂತ್ಯಕ್ರಿಯೆ
ಲಕ್ಷ್ಮೀದೇವಮ್ಮ ಅಂತ್ಯಕ್ರಿಯೆ
TV9 Web
| Updated By: ಮದನ್​ ಕುಮಾರ್​|

Updated on:Jul 24, 2022 | 3:16 PM

Share

ನಟ ಅರ್ಜುನ್​ ಸರ್ಜಾ (Arjun Sarja) ಅವರ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅವರ ತಾಯಿ ಲಕ್ಷ್ಮೀದೇವಮ್ಮ (Lakshmi Devamma) ಶನಿವಾರ (ಜುಲೈ 23) ನಿಧನರಾಗಿದ್ದು, ಇಂದು (ಜುಲೈ 24) ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಕುಟುಂಬದ ಹಿರಿಯ ಜೀವವನ್ನು ಕಳೆದುಕೊಂಡು ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ. ಲಕ್ಷ್ಮೀದೇವಮ್ಮ ಅವರಿಗೆ 83 ವರ್ಷ ವಯಸ್ಸಾಗಿತ್ತು. ಹೆಸರಾಂತ ನಟ ಶಕ್ತಿ ಪ್ರಸಾದ್​ ಅವರ ಪತ್ನಿ ಆಗಿದ್ದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹುಟ್ಟೂರಾದ ಮಧುಗಿರಿ ತಾಲ್ಲೂಕಿನ ಜಕ್ಕೇನಹಳ್ಳಿಯಲ್ಲಿ ಅವರ ಅಂತಿಮ ಸಂಸ್ಕಾರ (Lakshmi Devamma Funeral) ಮಾಡಲಾಗಿದೆ. ಶಕ್ತಿ ಪ್ರಸಾದ್ ಸಮಾಧಿ ಪಕ್ಕವೇ ಲಕ್ಷ್ಮೀದೇವಮ್ಮ ಕೂಡ ಮಣ್ಣಲ್ಲಿ ಮಣ್ಣಾಗಿದ್ದಾರೆ. ಅರ್ಜುನ್​ ಸರ್ಜಾ, ಧ್ರುವ ಸರ್ಜಾ ಸೇರಿದಂತೆ ಕುಟುಂಬದ ಹಲವರ ಜತೆ ಗ್ರಾಮಸ್ಥರು ಕೂಡ ಅಂತ್ಯಕ್ರಿಯೆಯಲ್ಲಿ ಭಾಗಿ ಆಗಿದ್ದಾರೆ.

ಜುಲೈ 24ರ ಬೆಳಗ್ಗೆ ಬೆಂಗಳೂರಿನಿಂದ ಲಕ್ಷ್ಮೀದೇವಮ್ಮ ಅವರ ಪಾರ್ಥಿವ ಶರೀರವನ್ನು ಜಕ್ಕೇನಹಳ್ಳಿಯ ತೋಟದ ಮನೆಗೆ ತರಲಾಯಿತು. ಅಲ್ಲಿ ಕೆಲವು ಗಂಟೆಗಳ ಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಹೋಬಲ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಬೀದಿ ಮೂಲಕ ಪಾರ್ಥಿವ ಶರೀರ ತರಲಾಯಿತು. ದೇವಸ್ಥಾನದ ಆಡಳಿತ ಮಂಡಳಿ ಮುಖ್ಯಸ್ಥೆ ಆಗಿ ಅವರು ಕೆಲಸ ಮಾಡಿದ್ದರು. ದೇವಸ್ಥಾನದ ಅಭಿವೃದ್ಧಿಗೆ ನೆರವು ನೀಡಿದ್ದರು.

ಲಕ್ಷ್ಮೀದೇವಮ್ಮ ಅವರ ಅಂತ್ಯಕ್ರಿಯೆಯನ್ನು ಒಕ್ಕಲಿಗ ಸಂಪ್ರದಾಯದಂತೆ ನೆರವೇರಿಸಲಾಗಿದೆ. ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಅಂತಿಮ ದರ್ಶನ ಪಡೆದರು. ಬಳಿಕ ಅವರು ಅರ್ಜುನ್​ ಸರ್ಜಾಗೆ ಸಾಂತ್ವನ ಹೇಳಿದರು. ಲಕ್ಷ್ಮೀದೇವಮ್ಮ ಅವರಿಗೆ ಮೂವರು (ಕಿಶೋರ್ ಸರ್ಜಾ, ಅರ್ಜುನ್ ಸರ್ಜಾ ಹಾಗೂ ಅಮ್ಮಾಜಿ) ಮಕ್ಕಳು. ಚಿರಂಜೀವಿ ಸರ್ಜಾ, ಧ್ರುವ ಸರ್ಜಾ ಹಾಗೂ ಸೂರಜ್ ಸರ್ಜಾ ಮೊಮ್ಮಕ್ಕಳು.

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

2020ರ ಜೂನ್ 7ರಂದು ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದು ನೋವಿನ ಸಂಗತಿ. ಸರ್ಜಾ ಕುಟುಂಬದವರಿಗೆ ಆ ನೋವು ಎಂದಿಗೂ ಮರೆಯಾಗುವಂಥದ್ದಲ್ಲ. ಚಿರು ನಿಧನದ ಬಳಿಕ ಲಕ್ಷ್ಮೀದೇವಮ್ಮ ತೀವ್ರವಾಗಿ ನೊಂದಿದ್ದರು. ಈಗ ಅವರು ಕೂಡ ಇಹಲೋಕ ತ್ಯಜಿಸಿರುವುದು ಇಡೀ ಸರ್ಜಾ ಕುಟುಂಬಕ್ಕೆ ದುಃಖ ತಂದಿದೆ.

Published On - 3:16 pm, Sun, 24 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ