AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರುತಿ ಹರಿಹರನ್​ ಮೀಟೂ ಕಾನೂನು ಸಮರ: ಅರ್ಜುನ್​ ಸರ್ಜಾಗೆ ಗೆಲುವು? ಸಾಕ್ಷಿ ಕೊರತೆಯಿಂದ ಬಿ ರಿಪೋರ್ಟ್​

Sruthi Hariharan Me Too Case: ‘ಶೀಘ್ರವೇ ಬೆಂಗಳೂರಿಗೆ ಬರುತ್ತೇನೆ. ಸುದ್ದಿಗೋಷ್ಠಿ ನಡೆಸಿ, ಮುಂದಿನ ವಾರ ಸಂಪೂರ್ಣ ಮಾಹಿತಿ ನೀಡುತ್ತೇನೆ’ ಎಂದು ಅರ್ಜುನ್​ ಸರ್ಜಾ ಹೇಳಿದ್ದಾರೆ. ಮೀಟೂ ಪ್ರಕರಣದಲ್ಲಿ ಅವರಿಗೆ ರಿಲೀಫ್​ ಸಿಕ್ಕಿದೆ.

ಶ್ರುತಿ ಹರಿಹರನ್​ ಮೀಟೂ ಕಾನೂನು ಸಮರ: ಅರ್ಜುನ್​ ಸರ್ಜಾಗೆ ಗೆಲುವು? ಸಾಕ್ಷಿ ಕೊರತೆಯಿಂದ ಬಿ ರಿಪೋರ್ಟ್​
ಅರ್ಜುನ್ ಸರ್ಜಾ, ಶ್ರುತಿ ಹರಿಹರನ್
TV9 Web
| Edited By: |

Updated on:Dec 11, 2021 | 11:52 AM

Share

2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನದಲ್ಲಿ ಅರ್ಜುನ್​ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್​ (Sruthi Hariharan) ಅವರು ಕೆಲವು ಗಂಭೀರ ಆರೋಪಗಳನ್ನು ಹೊರಿಸಿದ್ದರು. ತಮ್ಮ ಜತೆ ಅರ್ಜುನ್​ ಸರ್ಜಾ (Arjun Sarja) ಅವರು ಅಸಭ್ಯವಾಗಿ ನಡೆದುಕೊಂಡಿದ್ದಾರೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶ್ರುತಿ ಹರಿಹರನ್​ ಆರೋಪಿಸಿದ್ದರು. ಆ ಸಂಬಂಧ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಮೂರು ವರ್ಷ ತನಿಖೆ ನಡೆಸಿದರೂ ಕೂಡ ಪೊಲೀಸರಿಗೆ ಸೂಕ್ತ ಸಾಕ್ಷಿಗಳು ಸಿಕ್ಕಿಲ್ಲ. ಹಾಗಾಗಿ ಪೊಲೀಸರು ಬಿ-ರಿಪೋರ್ಟ್ (B Report) ಸಲ್ಲಿಸಿದ್ದಾರೆ. ಪ್ರಕರಣವೊಂದರ ತನಿಖೆ ಸಮಯದಲ್ಲಿ ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಲು ಅಗತ್ಯ ಇರುವಷ್ಟು ಸಾಕ್ಷ್ಯಾಧಾರಗಳು ಸಿಗಲಿಲ್ಲ ಎಂದು ವಿಚಾರಣಾ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಅಂತಿಮ ವರದಿಯೇ ಬಿ ರಿಪೋರ್ಟ್‌. ಮೀಟೂ (Me Too Case) ಪ್ರಕರಣದಲ್ಲಿ ಅರ್ಜುನ್​ ಸರ್ಜಾ ಅವರಿಗೆ ರಿಲೀಫ್​ ಸಿಕ್ಕಿದೆ. ಈ ಕುರಿತು ಅವರು ಟಿವಿ9 ಕನ್ನಡ ಜತೆ ಮಾತನಾಡಿದ್ದು, ಪ್ರತಿಕ್ರಿಯೆ ನೀಡಿದ್ದಾರೆ.

‘ನನಗೆ ಜಯ ಸಿಗುತ್ತೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಸದ್ಯ ಕೇರಳದಲ್ಲಿ ಶೂಟಿಂಗ್‌ ಮಾಡುತ್ತಿದ್ದೇನೆ. ಶೀಘ್ರವೇ ಬೆಂಗಳೂರಿಗೆ ಬರುತ್ತೇನೆ. ಬೆಂಗಳೂರಿಗೆ ಬಂದ ನಂತರ ಸುದ್ದಿಗೋಷ್ಠಿ ನಡೆಸುತ್ತೇನೆ. ಮುಂದಿನ ವಾರ ಸಂಪೂರ್ಣ ಮಾಹಿತಿ ನೀಡುತ್ತೇನೆ’ ಎಂದು ಅರ್ಜುನ್​ ಸರ್ಜಾ ಹೇಳಿದ್ದಾರೆ.

ಅರುಣ್​ ವೈದ್ಯನಾಥನ್​ ನಿರ್ದೇಶನದ ‘ವಿಸ್ಮಯ’ ಸಿನಿಮಾದಲ್ಲಿ ಶ್ರುತಿ ಹರಿಹರನ್​ ಮತ್ತು ಅರ್ಜುನ್​ ಸರ್ಜಾ ಅವರು ಗಂಡ-ಹೆಂಡತಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರೀಕರಣದ ವೇಳೆ ಅರ್ಜುನ್​ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶ್ರುತಿ ಹರಿಹರನ್​ ಆರೋಪ ಹೊರಿಸಿದ ಬಳಿಕ ಇಡೀ ಸ್ಯಾಂಡಲ್​ವುಡ್​ನಲ್ಲಿ ವಿವಾದದ ಬೆಂಕಿ ಹೊತ್ತಿಕೊಂಡಿತ್ತು. ಕೆಲವರು ಶ್ರುತಿ ಪರವಾಗಿ ಮಾತನಾಡಿದ್ದರೆ, ಅನೇಕರು ಅರ್ಜುನ್​ ಸರ್ಜಾಗೆ ಬೆಂಬಲ ನೀಡಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಈ ಬಗ್ಗೆ ಸಭೆ ನಡೆಸಲಾಗಿತ್ತು. ಅಂಬರೀಷ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜಿ ಸಂಧಾನಕ್ಕೆ ಅರ್ಜುನ್​ ಸರ್ಜಾ ಮತ್ತು ಶ್ರುತಿ ಹರಿಹರನ್​ ಒಪ್ಪಿರಲಿಲ್ಲ.

‘ವಿಸ್ಮಯ’ ಶೂಟಿಂಗ್​ ನಡೆದಿದ್ದು 2015-16ರ ಸಮಯದಲ್ಲಿ. ಮೀಟೂ ಆರೋಪ ಕೇಳಿಬಂದಿದ್ದು 2018ರಲ್ಲಿ. ಘಟನೆ ನಡೆದು ಎರಡು ವರ್ಷ ಕಳೆದ ಬಳಿಕ ದೂರು ನೀಡಿದ್ದರಿಂದ ಸಾಕ್ಷಿ ಹುಡುಕುವುದು ಪೊಲೀಸರಿಗೆ ಕಷ್ಟ ಆಗಿರಬಹುದು. ಮೂರು ವರ್ಷ ತನಿಖೆ ನಡೆಸಿದರೂ ಕೂಡ ಕಬ್ಬನ್​ ಪಾರ್ಕ್​ ಪೊಲೀಸರಿಗೆ ಸೂಕ್ತ ಸಾಕ್ಷ್ಯಾಧಾರಗಳು ಸಿಗದ ಕಾರಣ ನ್ಯಾಯಾಲಯಕ್ಕೆ ಬಿ-ರಿಪೋರ್ಟ್​ ಸಲ್ಲಿಸಲಾಗಿದೆ.

ಇದನ್ನೂ ಓದಿ:

ಮೀಟೂ ಕೇಸ್​: ಶ್ರುತಿ ಹರಿಹರನ್​ಗೆ ಹಿನ್ನಡೆ ಬಳಿಕ ಧ್ರುವ ಸರ್ಜಾ, ಮೇಘನಾ ರಾಜ್​ ಪ್ರತಿಕ್ರಿಯೆ ಏನು?

‘ಮಾರ್ಟಿನ್​ ಚಿತ್ರಕ್ಕಾಗಿ ಧ್ರುವ ಸರ್ಜಾ ಡಿಫರೆಂಟ್​ ಹೇರ್​ ಸ್ಟೈಲ್​: ಇಲ್ಲಿದೆ ಮೇಕಿಂಗ್​ ವಿಡಿಯೋ

Published On - 11:51 am, Sat, 11 December 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ