AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರುತಿ ಹರಿಹರನ್​ ಮೀಟೂ ಕಾನೂನು ಸಮರ: ಅರ್ಜುನ್​ ಸರ್ಜಾಗೆ ಗೆಲುವು? ಸಾಕ್ಷಿ ಕೊರತೆಯಿಂದ ಬಿ ರಿಪೋರ್ಟ್​

Sruthi Hariharan Me Too Case: ‘ಶೀಘ್ರವೇ ಬೆಂಗಳೂರಿಗೆ ಬರುತ್ತೇನೆ. ಸುದ್ದಿಗೋಷ್ಠಿ ನಡೆಸಿ, ಮುಂದಿನ ವಾರ ಸಂಪೂರ್ಣ ಮಾಹಿತಿ ನೀಡುತ್ತೇನೆ’ ಎಂದು ಅರ್ಜುನ್​ ಸರ್ಜಾ ಹೇಳಿದ್ದಾರೆ. ಮೀಟೂ ಪ್ರಕರಣದಲ್ಲಿ ಅವರಿಗೆ ರಿಲೀಫ್​ ಸಿಕ್ಕಿದೆ.

ಶ್ರುತಿ ಹರಿಹರನ್​ ಮೀಟೂ ಕಾನೂನು ಸಮರ: ಅರ್ಜುನ್​ ಸರ್ಜಾಗೆ ಗೆಲುವು? ಸಾಕ್ಷಿ ಕೊರತೆಯಿಂದ ಬಿ ರಿಪೋರ್ಟ್​
ಅರ್ಜುನ್ ಸರ್ಜಾ, ಶ್ರುತಿ ಹರಿಹರನ್
TV9 Web
| Edited By: |

Updated on:Dec 11, 2021 | 11:52 AM

Share

2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನದಲ್ಲಿ ಅರ್ಜುನ್​ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್​ (Sruthi Hariharan) ಅವರು ಕೆಲವು ಗಂಭೀರ ಆರೋಪಗಳನ್ನು ಹೊರಿಸಿದ್ದರು. ತಮ್ಮ ಜತೆ ಅರ್ಜುನ್​ ಸರ್ಜಾ (Arjun Sarja) ಅವರು ಅಸಭ್ಯವಾಗಿ ನಡೆದುಕೊಂಡಿದ್ದಾರೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶ್ರುತಿ ಹರಿಹರನ್​ ಆರೋಪಿಸಿದ್ದರು. ಆ ಸಂಬಂಧ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಮೂರು ವರ್ಷ ತನಿಖೆ ನಡೆಸಿದರೂ ಕೂಡ ಪೊಲೀಸರಿಗೆ ಸೂಕ್ತ ಸಾಕ್ಷಿಗಳು ಸಿಕ್ಕಿಲ್ಲ. ಹಾಗಾಗಿ ಪೊಲೀಸರು ಬಿ-ರಿಪೋರ್ಟ್ (B Report) ಸಲ್ಲಿಸಿದ್ದಾರೆ. ಪ್ರಕರಣವೊಂದರ ತನಿಖೆ ಸಮಯದಲ್ಲಿ ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಲು ಅಗತ್ಯ ಇರುವಷ್ಟು ಸಾಕ್ಷ್ಯಾಧಾರಗಳು ಸಿಗಲಿಲ್ಲ ಎಂದು ವಿಚಾರಣಾ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಅಂತಿಮ ವರದಿಯೇ ಬಿ ರಿಪೋರ್ಟ್‌. ಮೀಟೂ (Me Too Case) ಪ್ರಕರಣದಲ್ಲಿ ಅರ್ಜುನ್​ ಸರ್ಜಾ ಅವರಿಗೆ ರಿಲೀಫ್​ ಸಿಕ್ಕಿದೆ. ಈ ಕುರಿತು ಅವರು ಟಿವಿ9 ಕನ್ನಡ ಜತೆ ಮಾತನಾಡಿದ್ದು, ಪ್ರತಿಕ್ರಿಯೆ ನೀಡಿದ್ದಾರೆ.

‘ನನಗೆ ಜಯ ಸಿಗುತ್ತೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಸದ್ಯ ಕೇರಳದಲ್ಲಿ ಶೂಟಿಂಗ್‌ ಮಾಡುತ್ತಿದ್ದೇನೆ. ಶೀಘ್ರವೇ ಬೆಂಗಳೂರಿಗೆ ಬರುತ್ತೇನೆ. ಬೆಂಗಳೂರಿಗೆ ಬಂದ ನಂತರ ಸುದ್ದಿಗೋಷ್ಠಿ ನಡೆಸುತ್ತೇನೆ. ಮುಂದಿನ ವಾರ ಸಂಪೂರ್ಣ ಮಾಹಿತಿ ನೀಡುತ್ತೇನೆ’ ಎಂದು ಅರ್ಜುನ್​ ಸರ್ಜಾ ಹೇಳಿದ್ದಾರೆ.

ಅರುಣ್​ ವೈದ್ಯನಾಥನ್​ ನಿರ್ದೇಶನದ ‘ವಿಸ್ಮಯ’ ಸಿನಿಮಾದಲ್ಲಿ ಶ್ರುತಿ ಹರಿಹರನ್​ ಮತ್ತು ಅರ್ಜುನ್​ ಸರ್ಜಾ ಅವರು ಗಂಡ-ಹೆಂಡತಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರೀಕರಣದ ವೇಳೆ ಅರ್ಜುನ್​ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶ್ರುತಿ ಹರಿಹರನ್​ ಆರೋಪ ಹೊರಿಸಿದ ಬಳಿಕ ಇಡೀ ಸ್ಯಾಂಡಲ್​ವುಡ್​ನಲ್ಲಿ ವಿವಾದದ ಬೆಂಕಿ ಹೊತ್ತಿಕೊಂಡಿತ್ತು. ಕೆಲವರು ಶ್ರುತಿ ಪರವಾಗಿ ಮಾತನಾಡಿದ್ದರೆ, ಅನೇಕರು ಅರ್ಜುನ್​ ಸರ್ಜಾಗೆ ಬೆಂಬಲ ನೀಡಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಈ ಬಗ್ಗೆ ಸಭೆ ನಡೆಸಲಾಗಿತ್ತು. ಅಂಬರೀಷ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜಿ ಸಂಧಾನಕ್ಕೆ ಅರ್ಜುನ್​ ಸರ್ಜಾ ಮತ್ತು ಶ್ರುತಿ ಹರಿಹರನ್​ ಒಪ್ಪಿರಲಿಲ್ಲ.

‘ವಿಸ್ಮಯ’ ಶೂಟಿಂಗ್​ ನಡೆದಿದ್ದು 2015-16ರ ಸಮಯದಲ್ಲಿ. ಮೀಟೂ ಆರೋಪ ಕೇಳಿಬಂದಿದ್ದು 2018ರಲ್ಲಿ. ಘಟನೆ ನಡೆದು ಎರಡು ವರ್ಷ ಕಳೆದ ಬಳಿಕ ದೂರು ನೀಡಿದ್ದರಿಂದ ಸಾಕ್ಷಿ ಹುಡುಕುವುದು ಪೊಲೀಸರಿಗೆ ಕಷ್ಟ ಆಗಿರಬಹುದು. ಮೂರು ವರ್ಷ ತನಿಖೆ ನಡೆಸಿದರೂ ಕೂಡ ಕಬ್ಬನ್​ ಪಾರ್ಕ್​ ಪೊಲೀಸರಿಗೆ ಸೂಕ್ತ ಸಾಕ್ಷ್ಯಾಧಾರಗಳು ಸಿಗದ ಕಾರಣ ನ್ಯಾಯಾಲಯಕ್ಕೆ ಬಿ-ರಿಪೋರ್ಟ್​ ಸಲ್ಲಿಸಲಾಗಿದೆ.

ಇದನ್ನೂ ಓದಿ:

ಮೀಟೂ ಕೇಸ್​: ಶ್ರುತಿ ಹರಿಹರನ್​ಗೆ ಹಿನ್ನಡೆ ಬಳಿಕ ಧ್ರುವ ಸರ್ಜಾ, ಮೇಘನಾ ರಾಜ್​ ಪ್ರತಿಕ್ರಿಯೆ ಏನು?

‘ಮಾರ್ಟಿನ್​ ಚಿತ್ರಕ್ಕಾಗಿ ಧ್ರುವ ಸರ್ಜಾ ಡಿಫರೆಂಟ್​ ಹೇರ್​ ಸ್ಟೈಲ್​: ಇಲ್ಲಿದೆ ಮೇಕಿಂಗ್​ ವಿಡಿಯೋ

Published On - 11:51 am, Sat, 11 December 21

Follow Us
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ