AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರು ನೆನಪಿಸಿಕೊಂಡು ಭಾವನಾತ್ಮಕ ಸಂದೇಶ ನೀಡಿದ ಅರ್ಜುನ್ ಸರ್ಜಾ

ಕೊರೊನಾ ವೈರಸ್​ ಎರಡನೇ ಅಲೆ ನಿಯಂತ್ರಿಸಲು ಎಲ್ಲಾ ಕಡೆಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿರು ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಚಿರು ನೆನಪಿಸಿಕೊಂಡು ಭಾವನಾತ್ಮಕ ಸಂದೇಶ ನೀಡಿದ ಅರ್ಜುನ್ ಸರ್ಜಾ
ಅರ್ಜುನ್​ ಜತೆ ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on: Jun 07, 2021 | 5:05 PM

Share

ಚಿರಂಜೀವಿ ಸರ್ಜಾ ಇಲ್ಲದೆ ಒಂದು ವರ್ಷದ ಕಳೆದು ಹೋಗಿದೆ. ಇಂದು (ಜೂನ್​ 7) ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಚಿರು ಅವರ ಮಾವ, ನಟ ಅರ್ಜುನ್​ ಸರ್ಜಾ ಅವರು ಭಾವನಾತ್ಮಕ ಸಂದೇಶವೊಂದನ್ನು ನೀಡಿದ್ದಾರೆ. ಚಿಕ್ಕ ವಯಸ್ಸಿನ ಫೋಟೋಗಳನ್ನು ಹಂಚಿಕೊಂಡಿರು ಅರ್ಜುನ್​, ನಿನ್ನನ್ನು ಮಿಸ್​ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ನಿಯಂತ್ರಿಸಲು ಎಲ್ಲಾ ಕಡೆಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿರು ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಕನಕಪುರ ರಸ್ತೆಯ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್​ಹೌಸ್​ನಲ್ಲಿ ಚಿರು ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಅದೇ ಸ್ಥಳಕ್ಕೆ ತೆರಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಸೋಮವಾರ ಬೆಳಗ್ಗೆ ಮೇಘನಾ ರಾಜ್​, ಜ್ಯೂ. ಚಿರು, ಪ್ರಮೀಳಾ ಜೋಷಾಯ್​, ಸುಂದರ್​ ರಾಜ್​ ಅವರು ಒಂದೇ ಕಾರಿನಲ್ಲಿ ಬೃಂದಾವನ ಫಾರ್ಮ್​ಹೌಸ್​ಗೆ ಆಗಮಿಸಿ ಪೂಜೆ ಸಲ್ಲಿಸಿದರು.

ಅರ್ಜುನ್​ ಸರ್ಜಾ ಅವರು ಭಾವನಾತ್ಮಕ ಸಂದೇಶ ಬರೆದಿದ್ದಾರೆ. ‘ಒಂದು ವರ್ಷ ಕಳೆದುಹೋಗಿದೆ. ಚಿರು ಮಗನೆ ನಿನ್ನನ್ನು ನಾನು ನನ್ನ ಜನ್ಮಪೂರ್ತಿ ಮಿಸ್​ ಮಾಡಿಕೊಳ್ಳುತ್ತೇನೆ. ನೀನು ಎಲ್ಲೇ ಇದ್ದರೂ ನಿನ್ನ ನಗುಮುಖ ಮಾಸುವುದಿಲ್ಲ ಎಂದು ಭಾವಿಸಿದ್ದೇನೆ’ ಎಂದಿದ್ದಾರೆ ಅರ್ಜುನ್​.

ಇಡೀ ಸರ್ಜಾ ಕುಟುಂಬದ ಪರವಾಗಿ ಈ ಪತ್ರವನ್ನು ಬರೆಯಲಾಗಿದೆ. ‘ನಮ್ಮ ಹೃದಯದ ಚಿರಂಜೀವಿ, ನೀನು ದೇವರ ಮನೆಗೆ ಹೋಗಿ ಒಂದು ವರ್ಷ ಆಯಿತು. ಎಷ್ಟು ಬೇಗ ಒಂದು ವರ್ಷ. ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಕನಸಿನಲ್ಲಿ ನಿನ್ನ ಕಾಣದ ರಾತ್ರಿಗಳೇ ಇಲ್ಲ. ಮರೆಯಲಾಗದ ಚಿರ ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರವಾದ ಗೌರವ, ಜನಗಳಿಗೆ ನೀನು ತೋರಿಸುತ್ತಿದ್ದ ಪ್ರೀತಿ, ಪ್ರೇಮ, ಉದಾರ ಗುಣ ಮತ್ತು ಅಜಾತಶತ್ರುವಾಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ. ನೀನೆಲ್ಲಿದ್ದರೂ ಅಲ್ಲಿ ನಗು ತುಂಬಿರಬೇಕು. ನಿನ್ನ ಆತ್ಮ ಸದಾ ಶಾಂತಿಯಿಂದಿರಬೇಕು. ಆ ಪ್ರಾರ್ಥನೆಯಲ್ಲೇ, ಎಂದೆಂದೂ ನಿನ್ನ ನೆನಪಲ್ಲೇ.. ನಿನ್ನ ಪ್ರೀತಿಯ ನಿನ್ನ ಕುಟುಂಬ’ಎಂದು ಪತ್ರದಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: Chiranjeevi Sarja: ಮೇಘನಾ ರಾಜ್​ ಜೊತೆ ಚಿರಂಜೀವಿ ಸರ್ಜಾ ಸಮಾಧಿಗೆ ಪೂಜೆ ಸಲ್ಲಿಸಿದ ಜ್ಯೂ. ಚಿರು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು