AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟಿ ಲೀಲಾವತಿಯ ಭೇಟಿಯಾದ ನಟ ಅರ್ಜುನ್ ಸರ್ಜಾ

Arjun Sarja: ಇತ್ತೀಚೆಗಷ್ಟೆ ಮಗಳ ಮದುವೆ ನಿಶ್ವಿತಾರ್ಥ ಮುಗಿಸಿರುವ ಅರ್ಜುನ್ ಸರ್ಜಾ, ಇಂದು ಹಿರಿಯ ನಟಿ ಲೀಲಾವತಿ ಮನೆಗೆ ಆಗಮಿಸಿ ಅವರ ಯೋಗ ಕ್ಷೇಮ ವಿಚಾರಿಸಿದರು.

ಹಿರಿಯ ನಟಿ ಲೀಲಾವತಿಯ ಭೇಟಿಯಾದ ನಟ ಅರ್ಜುನ್ ಸರ್ಜಾ
ಮಂಜುನಾಥ ಸಿ.
|

Updated on: Nov 19, 2023 | 8:48 PM

Share

ಇತ್ತೀಚೆಗಷ್ಟೆ ಪುತ್ರಿ ಐಶ್ವರ್ಯಾರ ನಿಶ್ವಿತಾರ್ಥವನ್ನು ಚೆನ್ನೈನಲ್ಲಿ ನೆರವೇರಿಸಿರುವ ನಟ ಅರ್ಜುನ್ ಸರ್ಜಾ (Arjun Sarja). ಮದುವೆ ತಯಾರಿಯ ಮುನ್ನ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ನಟಿ ಲೀಲಾವತಿ ಅವರ ಮನೆಗೆ ತೆರಳಿ, ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದು ಮಲಗಿರುವ ನಟಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಅರ್ಜುನ್ ಸರ್ಜಾ ಅವರು ಲೀಲಾವತಿ ಅವರೊಟ್ಟಿಗೆ ಮಾತನಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ವಿನೋದ್ ರಾಜ್​ಕುಮಾರ್ ಅವರ ನೆಲಮಂಗಲದ ನಿವಾಸಕ್ಕೆ ತೆರಳಿರುವ ನಟ ಅರ್ಜುನ್ ಸರ್ಜಾ, ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದು, ಲೀಲಾವತಿಯವರನ್ನುದ್ದೇಶಿಸಿ, ‘ಅಮ್ಮ ನಾನು ನೆನಪಿದ್ದೀನಾ?’ ಎಂದೆಲ್ಲ ಕೇಳಿ ಅವರೊಟ್ಟಿಗೆ ಸಂವಾದ ನಡೆಸುವ ಪ್ರಯತ್ನ ಮಾಡಿದ್ದಾರೆ. ಆದರೆ ಲೀಲಾವತಿ ಅವರು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಆದರೆ ಅಲ್ಲಿಯೇ ನಿಂತಿದ್ದ ವಿನೋದ್, ಅವರಿಗೆ ಕೇಳುತ್ತದೆ, ಅರ್ಥವಾಗುತ್ತದೆ ಆದರೆ ಮಾತನಾಡಲು ಆಗುತ್ತಿಲ್ಲ’ ಎಂದರು.

ಲೀಲಾವತಿ ಅವರ ಕೈ ಹಿಡಿದು ಕೆಲ ಸಮಯ ಮಾತನಾಡಿದ ಅರ್ಜುನ್ ಸರ್ಜಾ ಬಳಿಕ ಕಾಲು ಮುಟ್ಟಿ ನಮಸ್ಕಾರ ಮಾಡಿದರು. ಆ ಬಳಿಕ ಲೀಲಾವತಿ ಅವರ ಹಣೆಗೆ ಮುತ್ತು ಕೊಟ್ಟು, ಎಲ್ಲವೂ ಒಳ್ಳೆಯದಾಗಲಿ, ಆದಷ್ಟು ಬೇಗ ನೀವು ಗುಣ ಆಗುತ್ತೀರ, ದೇವರಲ್ಲಿ ಪ್ರಾರ್ಥನೆ ಮಾಡಿ, ನಾನೂ ಸಹ ನಿಮಗಾಗಿ ಪ್ರಾರ್ಥನೆ ಮಾಡುತ್ತೇನೆ ಎಲ್ಲವೂ ಒಳ್ಳೆಯದಾಗುತ್ತದೆ ಎಂದು ಹಾರೈಸಿದರು. ಅಲ್ಲಿಯೇ ಇದ್ದ ವಿನೋದ್ ಅವರಿಗೂ ಧೈರ್ಯ ತುಂಬಿದರು. ಅವರ ಕಾರ್ಯವನ್ನು ಹೊಗಳಿದರು.

ಇದನ್ನೂ ಓದಿ:ಅದ್ಧೂರಿಯಾಗಿ ನೆರವೇರಿದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ: ವರ ಯಾರು?

ಆ ನಂತರ ವಿನೋದ್ ರಾಜ್​ಕುಮಾರ್ ಅವರ ತೋಟವನ್ನು ಸುತ್ತು ಹಾಕಿದರು. ವಿನೋದ್, ಕಷ್ಟಪಟ್ಟು ಮಾಡಿರುವ ತೋಟವನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು. ನಗರ ಜೀವನದಿಂದ ದೂರ ಉಳಿದು ಶಾಂತವಾಗಿ ಬದುಕುತ್ತಿರುವ ಬಗ್ಗೆ ವಿನೋದ್​ಗೆ ಮೆಚ್ಚುಗೆಯನ್ನು ಸೂಚಿಸಿದರು. ವಿನೋದ್, ಸಹ ತಮ್ಮ ತೋಟದ ಶಾಂತತೆಯ ಪರಿಚಯವನ್ನು ಅರ್ಜುನ್ ಸರ್ಜಾಗೆ ಮಾಡಿಕೊಟ್ಟರು.

ಲೀಲಾವತಿ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಕಳೆದ ಕೆಲವು ತಿಂಗಳಿನಿಂದ ಕನ್ನಡ ಸೇರಿದಂತೆ ಬೇರೆ-ಬೇರೆ ಚಿತ್ರರಂಗದ ನಟ-ನಟಿಯರು ಬಂದು ಅವರ ಯೋಗ ಕ್ಷೇಮ ವಿಚಾರಿಸಿಕೊಂಡು ಹೋಗುತ್ತಿದ್ದಾರೆ. ಹಿರಿಯ ನಟರಾದ ಶ್ರೀನಾಥ್, ಶ್ರೀಧರ್ ನಟಿಯರಾದ ಶ್ರುತಿ, ತಾರಾ ಸೇರಿದಂತೆ ಇನ್ನೂ ಹಲವರು ಲೀಲಾವತಿ ಅವರ ಮನೆಗೆ ಹೋಗಿ ಆರೋಗ್ಯ ವಿಚಾರಿಸಿದ್ದರು. ಇನ್ನೊಮ್ಮೆ ಕನ್ನಡದ ಹಲವು ಹಿರಿಯ ನಟರುಗಳು ಒಟ್ಟಿಗೆ ಬಸ್ ಮಾಡಿಕೊಂಡು ಲೀಲಾವತಿ ಅವರ ಮನೆಗೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿತ್ತು.

ವಿನೋದ್ ಅವರು ಗಾಂಧಿ ನಗರದಿಂದ ದೂರ ತೆರಳಿ ನೆಲಮಂಗಲದ ಹಳ್ಳಿಯೊಂದರಲ್ಲಿ ಮನೆ ಮಾಡಿಕೊಂಡು ತಮ್ಮ ತಾಯಿಯೊಟ್ಟಿಗೆ ವಾಸಿಸುತ್ತಿದ್ದಾರೆ. ಲೀಲಾವತಿಯವರನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ ಜೊತೆಗೆ ರೈತಿಕೆಯನ್ನೂ ಮುಂದುವರೆಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್