ಅರ್ಮಾನ್ ಮಲಿಕ್ ಸುಮಧುರ ಕಂಠದಲ್ಲಿ ‘ದೂರ ತೀರ ಯಾನ’ ಚಿತ್ರದ ಮೆಲೋಡಿ ಸಾಂಗ್

‘ದೂರ ತೀರ ಯಾನ’ ಸಿನಿಮಾದ ‘ಇದೇನಿದು ಸೂಚನೆ...’ ಹಾಡು ಅರ್ಮಾನ್ ಮಲಿಕ್ ಅವರ ಕಂಠದಲ್ಲಿ ಮೂಡಿಬಂದಿದೆ. ವಿಜಯ್ ಕೃಷ್ಣ, ಪ್ರಿಯಾಂಕಾ ಕುಮಾರ್ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದು, ಮಂಸೋರೆ ನಿರ್ದೇಶಿಸಿದ್ದಾರೆ. ಬಕ್ಕೇಶ್ ಮತ್ತು ಕಾರ್ತಿಕ್ ಅವರು ‘ದೂರ ತೀರ ಯಾನ’ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಅರ್ಮಾನ್ ಮಲಿಕ್ ಸುಮಧುರ ಕಂಠದಲ್ಲಿ ‘ದೂರ ತೀರ ಯಾನ’ ಚಿತ್ರದ ಮೆಲೋಡಿ ಸಾಂಗ್
Vijay Krishna, Priyanka Kumar

Updated on: Apr 22, 2025 | 9:37 PM

ಖ್ಯಾತ ಗಾಯಕ ಅರ್ಮಾನ್ ಮಲಿಕ್ (Armaan Malik) ಅವರ ಕಂಠದಲ್ಲಿ ಬಂದ ಹಲವು ಗೀತೆಗಳು ಸೂಪರ್ ಹಿಟ್ ಆಗಿವೆ. ಕನ್ನಡದಲ್ಲಿ ಕೂಡ ಅವರು ಹಲವಾರು ಸುಮಧುರ ಹಾಡುಗಳನ್ನು ಹಾಡಿದ್ದಾರೆ. ಅವುಗಳ ಸಾಲಿಗೆ ಈಗ ಇನ್ನೊಂದು ಮೆಲೋಡಿ ಸಾಂಗ್ ಸೇರ್ಪಡೆ ಆಗಿದೆ. ಹೌದು, ‘ದೂರ ತೀರ ಯಾನ’ (Doora Theera Yaana) ಸಿನಿಮಾದ ಪ್ರೇಮಗೀತೆಗೆ ಅರ್ಮಾನ್ ಮಲಿಕ್ ಅವರು ಧ್ವನಿ ನೀಡಿದ್ದಾರೆ. ಇತ್ತೀಚೆಗಷ್ಟೇ ಈ ಹಾಡು ಬಿಡುಗಡೆ ಆಯಿತು. ಮಂಸೋರೆ (Mansore) ನಿರ್ದೇಶನ ಮಾಡಿದ ಈ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ‘ಇದೇನಿದು ಸೂಚನೆ…’ ಹಾಡಿನ ಮೂಲಕ ‘ದೂರ ತೀರ ಯಾನ’ ಚಿತ್ರದ ಮೇಲಿಮ ನಿರೀಕ್ಷೆ ಹೆಚ್ಚಾಗಿದೆ.

‘ದೂರ ತೀರ ಯಾನ’ ಸಿನಿಮಾದಲ್ಲಿ ವಿಜಯ್ ಕೃಷ್ಣ ಮತ್ತು ಪ್ರಿಯಾಂಕಾ ಕುಮಾರ್ ಅವರು ಮುಖ್ಯ ಪಾತ್ರಗಳನ್ನು ಮಾಡಿದ್ದಾರೆ. ‘ಡಿ ಕ್ರಿಯೇಶನ್ಸ್’ ನಿರ್ಮಾಣ ಸಂಸ್ಥೆಯ ಮೂಲಕ ಆರ್. ದೇವರಾಜ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದಿಂದ ಮೊದಲ ಲವ್ ಸಾಂಗ್ ರಿಲೀಸ್ ಆಗಿದ್ದು, ‘ಎಂಆರ್​ಟಿ ಮ್ಯೂಸಿಕ್’ ಮೂಲಕ ವೀಕ್ಷಣೆಗೆ ಲಭ್ಯವಾಗಿದೆ. ಮೆಲೋಡಿಪ್ರಿಯರು ಈ ಹಾಡು ಕೇಳಿ ಮೆಚ್ಚಿಕೊಂಡಿದ್ದಾರೆ.

‘ಇದೇನಿದು ಸೂಚನೆ..’ ಹಾಡಿಗೆ ಖ್ಯಾತ ಗೀತರಚನಾಕಾರ ಕವಿರಾಜ್ ಅವರು ಸಾಹಿತ್ಯ ಬರೆದಿದ್ದಾರೆ. ಬಕ್ಕೇಶ್ ಮತ್ತು ಕಾರ್ತಿಕ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಅರ್ಮಾನ್ ಮಲಿಕ್ ಅವರ ಕಂಠದಲ್ಲಿ ಮೂಡಿಬಂದ ಈ ಹಾಡಿನ ಲಿರಿಕಲ್ ವಿಡಿಯೋ ಇಲ್ಲಿದೆ:

ಇದನ್ನೂ ಓದಿ
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಮಂಸೋರೆ ಅವರು ‘ದೂರ ತೀರ ಯಾನ’ ಸಿನಿಮಾಗೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚೇತನಾ ತೀರ್ಥಹಳ್ಳಿ ಅವರು ಸಂಭಾಷಣೆ ಬರೆದಿದ್ದಾರೆ. ಈ ಚಿತ್ರದಲ್ಲಿ ಒಟ್ಟು 6 ಹಾಡುಗಳಿವೆ. ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ, ಕಿರಣ್ ಕಾವೇರಪ್ಪ, ಕವಿರಾಜ್ ಅವರು ಹಾಡುಗಳನ್ನು ಬರೆದಿದ್ದಾರೆ. ಚಿತ್ರದ ಟೈಟಲ್ ಸಾಂಗ್ ಬಿಡುಗಡೆಗೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರೇಕ್ಷಕರಿಂದಲೇ ಸಾಂಗ್ ರಿಲೀಸ್ ಮಾಡಿಸಲು ಪ್ಲ್ಯಾನ್ ಮಾಡಲಾಗಿದೆ.

ಇದನ್ನೂ ಓದಿ: ‘ಸುರುಳಿ’ ಕಿರುಚಿತ್ರ ನಿರ್ಮಾಣ ಮಾಡಿದ ಹೇಮಂತ್ ರಾವ್; ಯೂಟ್ಯೂಬ್​ನಲ್ಲಿ ಬಿಡುಗಡೆ

ಇದೊಂದು ಜರ್ನಿ ಸಿನಿಮಾ ಆದ್ದರಿಂದ ಬೆಂಗಳೂರು, ಕುಂದಾಪುರ, ಉಡುಪಿ, ಗೋಕರ್ಣ, ಕಾರವಾರ, ಮುರುಡೇಶ್ವರ, ಯಲ್ಲಾಪುರ, ಗೋವಾ, ದಾಂಡೇಲಿ ಮುಂತಾದ ಕಡೆಗಳಲ್ಲಿ ಒಟ್ಟು 40 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಜುಲೈ 11ರಂದು ಈ ಸಿನಿಮಾ ಬಿಡುಗಡೆ ಆಗಲಿದೆ ಎಂದು ನಿರ್ಮಾಪಕ ದೇವರಾಜ್ ಹೇಳಿದ್ದಾರೆ. ನಾಗೇಂದ್ರ ಕೆ. ಉಜ್ಜನಿ ಅವರು ಸಂಕಲನ ಮಾಡುತ್ತಿದ್ದಾರೆ. ಸರವಣ ಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us