AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್ ಖಾನ್ ಅಸಭ್ಯ ವರ್ತನೆ ಕೇಸ್​​​ಗೆ ಇತಿಶ್ರೀ; ದೊಡ್ಡವರ ಒತ್ತಡ?

ಬೆಂಗಳೂರಿನಲ್ಲಿ ಆರ್ಯನ್ ಖಾನ್ ಅಸಭ್ಯ ವರ್ತನೆ ಪ್ರಕರಣಕ್ಕೆ ಬೆಂಗಳೂರು ಪೊಲೀಸರು ಸಾಕ್ಷ್ಯಾಧಾರಗಳ ಕೊರತೆಯಿಂದ ಇತಿಶ್ರೀ ಹಾಡಲು ಸಿದ್ಧತೆ ನಡೆಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಪಬ್ ಉದ್ಘಾಟನೆ ವೇಳೆ ಮಧ್ಯ ಬೆರಳು ತೋರಿಸಿ ವಿಡಿಯೋ ವೈರಲ್ ಆಗಿತ್ತು. ಕಬ್ಬನ್ ಪಾರ್ಕ್ ಪೊಲೀಸರು ತನಿಖೆ ನಡೆಸಿ, ಉದ್ದೇಶಪೂರ್ವಕ ವರ್ತನೆಯಲ್ಲ ಎಂದು ನಿರ್ಧರಿಸಿದ್ದಾರೆ. ಇದರಿಂದ ದೂರುದಾರ ವಕೀಲ ಹುಸೇನ್ ಅಸಮಾಧಾನಗೊಂಡಿದ್ದಾರೆ.

ಆರ್ಯನ್ ಖಾನ್ ಅಸಭ್ಯ ವರ್ತನೆ ಕೇಸ್​​​ಗೆ ಇತಿಶ್ರೀ; ದೊಡ್ಡವರ ಒತ್ತಡ?
ಆರ್ಯನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Feb 06, 2026 | 10:58 AM

Share

ಶಾರುಖ್ ಖಾನ್ ಮಗ ಆರ್ಯನ್ ಖಾನ್ (Aryan Khan) ಅವರು ಕೆಲ ತಿಂಗಳ ಹಿಂದೆ ಬೆಂಗಳೂರಲ್ಲಿ ಸಾರ್ವಜನಿಕರ ಮುಂದೆ ಮಧ್ಯ ಬೆಟ್ಟು ತೋರಿಸಿ ಅಸಭ್ಯ ವರ್ತನೆ ಮಾಡಿದ್ದರು. ಈ ಪ್ರಕರಣಕ್ಕೆ ಇತಿಶ್ರೀ ಹಾಡಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಅಸಭ್ಯ ವರ್ತನೆ ಸಂಬಂಧ ಸಾಕ್ಷ್ಯಾಧಾರಗಳ ಕೊರತೆ ಕಾಣಿಸಿದೆ. ಈ ಕಾರಣದಿಂದ ಕಬ್ಬನ್ ಪಾರ್ಕ್ ಪೊಲೀಸರು ಕೇಸ್ ಮುಕ್ತಾಯ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೆ ದೊಡ್ಡವರ ಒತ್ತಡ ಕಾರಣ ಎಂಬ ಆರೋಪವೂ ಕೇಳಿ ಬಂದಿದೆ.

ಆರ್ಯನ್ ಖಾನ್ ಕಳೆದ ವರ್ಷ ನವೆಂಬರ್ 28ರಂದು ಬೆಂಗಳೂರಿಗೆ ಬಂದಿದ್ದರು. ಅವರು ಪಬ್ ಒಂದರ ಉದ್ಘಾಟನೆಗೆ ತೆರಳಿದ್ದರು. ಆರ್ಯನ್ ಅವರನ್ನು ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದರು. ಆಗ ಆರ್ಯನ್ ಜನರಿಗೆ ಮಧ್ಯ ಬೆರಳು ತೋರಿಸಿದರು ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ಆರ್ಯನ್ ಖಾನ್ ವಿರುದ್ಧ ಅನೇಕರು ಕೋಪ ಹೊರಹಾಕಿದ್ದರು. ಈಗ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು.

ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣದ ವಿಚಾರಣೆ ನಡೆಸಿದ್ದಾರೆ. ಘಟನೆ ಸಂಬಂಧ ಪಬ್ ಅಧಿಕಾರಿ, ಸಿಬ್ಬಂದಿ ವಿಚಾರಣೆ ಮಾಡಲಾಗಿದೆ. ಅವರೆಲ್ಲರಿಂದ ‘ಆರ್ಯನ್ ಉದ್ದೇಶಪೂರ್ವಕವಾಗಿ ನಡೆದುಕೊಂಡಿಲ್ಲ’ ಎಂಬ ಉತ್ತರ ಬಂದಿದೆ. ಹೀಹಾಗಿ, ಕೇಸ್ ಕ್ಲೋಸ್​ಗೆ ಸಿದ್ಧತೆ ಮಾಡಲಾಗುತ್ತಿದೆ. ಪೊಲೀಸರು ಶೀಘ್ರದಲ್ಲೇ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ.

ದೂರು ದಾರ ವಕೀಲನ ಆಕ್ರೋಶ

ಆರ್ಯನ್ ಖಾನ್ ದುರ್ವರ್ತನೆ ಪ್ರಕರಣ ಮುಕ್ತಾಯ ಹಂತ ತಲುಪಿರುವುದರಿಂದ ದೂರುದಾರಲ್ಲೊಬ್ಬರಾದ ವಕೀಲ ಹುಸೇನ್ ಅಸಮಾಧಾನಗೊಂಡಿದ್ದಾರೆ. ‘ಸೋಶಿಯಲ್ ಮೀಡಿಯಾದಲ್ಲಿ ವೀಡಿಯೊ ವೈರಲ್ ಆಗಿದ್ದರಿಂದ ದೂರು ಕೊಟ್ಟಿದೆ. ಈಗ ಪ್ರಕರಣ ಮುಕ್ತಾಯ ಮಾಡುತ್ತಿರುವುದು ಗೊತ್ತಾಗಿದೆ. ಪೊಲೀಸರು ವಿಡಿಯೋನ ಎಫ್​ಎಸ್​ಎಲ್​ ಕಳುಹಿಸಿದ್ರೆ ಗೊತ್ತಾಗುತ್ತಿತ್ತು. ಕೋರ್ಟ್​​ಗೆ ರಿಪೋರ್ಟ್ ಸಲ್ಲಿಕೆ ಬಳಿಕ ನಾನು ಪ್ರಶ್ನೆ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯ ಬೆರಳು ತೋರಿಸಿದ ಆರ್ಯನ್ ಖಾನ್ ಮೇಲೆ ದೂರು; ಅಲ್ಲೇನಾಯಿತು ವಿವರಿಸಿದ ಝೈದ್ ಖಾನ್

ಶಾರುಖ್ ಪುತ್ರನ ಜೊತೆ ಬೇರೆ ಬೇರೆ ವ್ಯಕ್ತಿಗಳು ಇದ್ದರು. ಬಹುಶಃ ಪ್ರಕರಣದಲ್ಲಿ ಅವರ ಒತ್ತಡ ಇರಬಹುದು. ಅವರ ಸ್ನೇಹಿತರಿಗೆ ಸನ್ನೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಆ ರೀತಿ ಸನ್ನೆ ಮಾಡೋದಾಗಿದ್ರೆ ಅವರು ರೂಮ್ ಅಲ್ಲಿ ಹೋಗಿ ಮಾಡ್ಕೊಬೇಕಿತ್ತು’ ಎಂದು ಹುಸೇನ್ ಹೇಳಿದ್ದಾರೆ.

ಆರ್ಯನ್ ಪರ ಮಾತನಾಡಿದ್ದ ಝೈದ್ ಖಾನ್

ಈ ಘಟನೆ ನಡೆಯುವಾಗ ಸಚಿವ ಜಮೀರ್ ಅಹ್ಮದ್ ಖಾನ್ ಮಗ ಝೈದ್ ಖಾನ್ ಕೂಡ ಅಲ್ಲಿಯೇ ಇದ್ದರು. ಘಟನೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದ ಅವರು, ‘ಅದು ಸಾರ್ವಜನಿಕರಿಗೆ ತೋರಿಸಿದ್ದಲ್ಲ, ಗೆಳೆಯನಿಗೆ ತೋರಿಸಿದ್ದು. ಗೆಳೆಯರ ಮಧ್ಯೆ ಇದೆಲ್ಲ ಕಾಮನ್’ ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು